AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara 2 Shooting: ‘ಕಾಂತಾರ 2’ ಆರಂಭಿಸಲು ಮಳೆಗಾಲಕ್ಕೆ ಕಾದಿರುವ ರಿಷಬ್​ ಶೆಟ್ಟಿ; ಮಾಹಿತಿ ನೀಡಿದ ವಿಜಯ್​ ಕಿರಗಂದೂರು

Rishab Shetty | Kantara 2 Movie: ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರಕ್ಕೆ ಜೂನ್​ ತಿಂಗಳಲ್ಲಿ ಶೂಟಿಂಗ್​ ಆರಂಭ ಆಗಲಿದೆ. ಆ ಬಗ್ಗೆ ವಿಜಯ್​ ಕಿರಗಂದೂರು ಮಾಹಿತಿ ನೀಡಿದ್ದಾರೆ.

Kantara 2 Shooting: ‘ಕಾಂತಾರ 2’ ಆರಂಭಿಸಲು ಮಳೆಗಾಲಕ್ಕೆ ಕಾದಿರುವ ರಿಷಬ್​ ಶೆಟ್ಟಿ; ಮಾಹಿತಿ ನೀಡಿದ ವಿಜಯ್​ ಕಿರಗಂದೂರು
ಕಾಂತಾರ ಪೋಸ್ಟರ್, ವಿಜಯ್ ಕಿರಗಂದೂರು
ಮದನ್​ ಕುಮಾರ್​
|

Updated on:Jan 21, 2023 | 5:25 PM

Share

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯಿಂದ ಮೂಡಿಬರಲಿರುವ ಎಲ್ಲ ಸಿನಿಮಾಗಳ ಬಗ್ಗೆ ಪ್ರೇಕ್ಷಕರಿಗೆ ಸಖತ್​ ನಿರೀಕ್ಷೆ ಸೃಷ್ಟಿ ಆಗಿದೆ. ಅದರಲ್ಲೂ ‘ಕಾಂತಾರ’ ಸಿನಿಮಾದ ಮುಂದುವರಿದ ಭಾಗ ಯಾವಾಗ ಬರಲಿದೆ ಎಂಬ ಪ್ರಶ್ನೆ ಎಲ್ಲರಿಂದಲೂ ಕೇಳಿಬರುತ್ತಿದೆ. ನಟ, ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಅವರಿಗೆ ‘ಕಾಂತಾರ’ ಸಿನಿಮಾದಿಂದ ಸಿಕ್ಕ ಜನಪ್ರಿಯತೆ ಬಹಳ ದೊಡ್ಡದು. ಆದಷ್ಟು ಬೇಗ ಅವರು ‘ಕಾಂತಾರ 2’ (Kantara 2) ಸಿನಿಮಾದ ಕೆಲಸ ಶುರುಮಾಡಲಿ ಎಂದು ಫ್ಯಾನ್ಸ್​ ಕಾದಿದ್ದಾರೆ. ಹಾಗಾದರೆ ಈ ಚಿತ್ರದ ಶೂಟಿಂಗ್​ ಯಾವಾಗ ಆರಂಭ ಆಗಲಿದೆ? ಅದಕ್ಕೀಗ ಉತ್ತರ ಸಿಕ್ಕಿದೆ. ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ವಿಜಯ್​ ಕಿರಗಂದೂರು (Vijay Kiragandur) ಅವರು ‘ಡೆಡ್​ಲೈನ್​’ಗೆ ನೀಡಿದ ಸಂದರ್ಶನದಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. 2023ರ ಮಳೆಗಾಲದಲ್ಲಿ ‘ಕಾಂತಾರ 2’ ಶೂಟಿಂಗ್​ ಶುರುವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸಿದ್ಧವಾಗುತ್ತಿದೆ ‘ಕಾಂತಾರ 2’ ಕಥೆ:

‘ರಿಷಬ್​ ಶೆಟ್ಟಿ ಅವರು ಈಗ ಕಥೆ ಬರೆಯುತ್ತಿದ್ದಾರೆ. ತಮ್ಮ ತಂಡದ ಜೊತೆ ಅವರು ಕರಾವಳಿ ಕರ್ನಾಟಕದ ಕಾಡಿಗೆ ತೆರಳಿದ್ದು, ರಿಸರ್ಚ್​ ನಡೆಸುತ್ತಿದ್ದಾರೆ’ ಎಂದು ವಿಜಯ್​ ಕಿರಗಂದೂರು ಹೇಳಿದ್ದಾರೆ. ಅಚ್ಚರಿ ಎಂದರೆ, ಕಾಂತಾರ ಸಿನಿಮಾಗೆ ಸೀಕ್ವೆಲ್​ ಬದಲು, ಪ್ರೀಕ್ವೆಲ್​ ಮಾಡಲು ತಂಡ ನಿರ್ಧರಿಸಿದೆ. ಅಂದರೆ, ‘ಕಾಂತಾರ’ ಚಿತ್ರದ ಕಥೆ ಆರಂಭ ಆಗುವುದಕ್ಕೂ ಮುನ್ನ ಏನಾಗಿತ್ತು ಎಂಬುದು ‘ಕಾಂತಾರ 2’ ಸಿನಿಮಾದಲ್ಲಿ ಇರಲಿದೆ.

ಇದನ್ನೂ ಓದಿ: ದೈವದ ಹರಕೆ ತೀರಿಸಿದ ‘ಕಾಂತಾರ’ ತಂಡ; ರೋಮಾಂಚನಕಾರಿಯಾಗಿದೆ ವಿಡಿಯೋ ​

ಇದನ್ನೂ ಓದಿ
Image
Dhoomam: ‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ‘ಧೂಮಂ’; ಫಹಾದ್​ ಫಾಸಿಲ್​-ಪವನ್​ ಕುಮಾರ್​ ಚಿತ್ರದ ಶೀರ್ಷಿಕೆ ಬಹಿರಂಗ
Image
Prabhas: ‘ಸಲಾರ್​’ ನೋಡಲು ಇನ್ನೂ 1 ವರ್ಷ ಕಾಯಬೇಕು; ರಿಲೀಸ್​ ಡೇಟ್​ ತಿಳಿಸಿದ ‘ಹೊಂಬಾಳೆ ಫಿಲ್ಮ್ಸ್​’
Image
KGF Chapter 2: 100 ದಿನ ಪೂರೈಸಿದ ‘ಕೆಜಿಎಫ್​: ಚಾಪ್ಟರ್​ 2’; ಪ್ರೇಕ್ಷಕರಿಗೆ ‘ಹೊಂಬಾಳೆ ಫಿಲ್ಮ್ಸ್​’ ಧನ್ಯವಾದ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

‘ಕಾಂತಾರ 2’ ಶೂಟಿಂಗ್​ ಜೂನ್​ನಲ್ಲಿ ಆರಂಭ:

‘ಜೂನ್​ ತಿಂಗಳಲ್ಲಿ ಶೂಟಿಂಗ್​ ಶುರು ಮಾಡಬೇಕು ಎಂದು ರಿಷಬ್​ ಶೆಟ್ಟಿ ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಯಾಕೆಂದರೆ, ಒಂದಷ್ಟು ದೃಶ್ಯಗಳಿಗೆ ಮಳೆಗಾಲದ ಅಗತ್ಯವಿದೆ. 2024ರ ಏಪ್ರಿಲ್​ ಅಥವಾ ಮೇ ತಿಂಗಳಲ್ಲಿ ಈ ಸಿನಿಮಾವನ್ನು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಮಾಡಬೇಕು ಎಂಬ ಉದ್ದೇಶ ನಮ್ಮದು’ ಎಂದು ವಿಜಯ್​ ಕಿರಗಂದೂರು ಹೇಳಿದ್ದಾರೆ.

ಇದನ್ನೂ ಓದಿ: Kantara 2: ‘ಕಾಂತಾರ 2 ಅಂತ ನೀವೇ ಎಲ್ಲ ಹೇಳ್ತಿದ್ದೀರಿ..’; ಸೀಕ್ವೆಲ್​ ಬಗ್ಗೆ ಕೇಳಿದ್ದಕ್ಕೆ ರಿಷಬ್​ ಶೆಟ್ಟಿ ಉತ್ತರ

ಅದ್ದೂರಿ ಬಜೆಟ್​ನಲ್ಲಿ ಸಿದ್ಧವಾಗಲಿದೆ ‘ಕಾಂತಾರ’ ಪ್ರೀಕ್ವೆಲ್​:

ಸಾಧಾರಣ ಬಜೆಟ್​ನಲ್ಲಿ ನಿರ್ಮಾಣವಾದ ‘ಕಾಂತಾರ’ ಸಿನಿಮಾ ವಿಶ್ವಾದ್ಯಂತ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುವ ಮೂಲಕ ದಾಖಲೆ ಬರೆಯಿತು. ಈಗ ಈ ಚಿತ್ರದ 2ನೇ ಪಾರ್ಟ್​ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಹಾಗಾಗಿ ದೊಡ್ಡ ಬಜೆಟ್​ನಲ್ಲಿ ಸಿನಿಮಾ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ನಿರ್ಧರಿಸಿದೆ.

ಇದನ್ನೂ ಓದಿ: Kamal Haasan: ‘ನಿಮ್ಮ ಮುಂದಿನ ಚಿತ್ರದಿಂದ ಕಾಂತಾರ ಸಿನಿಮಾ ದಾಖಲೆ ಮುರಿಯಿರಿ’; ರಿಷಬ್​ ಶೆಟ್ಟಿಗೆ ಕಮಲ್​ ಹಾಸನ್​ ಸಲಹೆ

‘ಕಾಂತಾರ ಸಿನಿಮಾ ಅಷ್ಟು ದೊಡ್ಡ ಸಕ್ಸಸ್​ ಆಗಿರೋದರಿಂದ ನಾವು ಏನೇ ಮಾಡಿದರೂ ದೊಡ್ಡದಾಗಿ ಮಾಡಬೇಕಿದೆ. ಪಾತ್ರವರ್ಗಕ್ಕೆ ಬೇರೆ ಕಲಾವಿದರು ಸೇರಲಿದ್ದಾರೆ. ಆದರೆ ಮೊದಲ ಚಿತ್ರದ ರೀತಿಯೇ ಇದರ ಶೈಲಿ ಇರಲಿದೆ’ ಎಂದು ವಿಜಯ್​ ಕಿರಗಂದೂರು ಹೇಳಿರುವುದಾಗಿ ‘ಡೆಡ್​ಲೈನ್​’ ವರದಿ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:25 pm, Sat, 21 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್