AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಿದ ಆ ಒಂದು ತಪ್ಪಿಗೆ ವೇದಿಕೆ ಮೇಲೆ ಅನುಶ್ರೀಗೆ ಕ್ಷಮೆ ಕೇಳಿದ ರಿಷಬ್ ಶೆಟ್ಟಿ

Anchor Anushree: 'ಕಾಂತಾರ: ಚಾಪ್ಟರ್ 1' ಟ್ರೇಲರ್ ಲಾಂಚ್‌ನಲ್ಲಿ ಅನುಶ್ರೀಗೆ ರಿಷಬ್ ಕ್ಷಮೆ ಕೇಳಿದ್ದಾರೆ. ಅನುಶ್ರೀ ಅವರು ಈವೆಂಟ್‌ ನಿರೂಪಣೆ ಮಾಡಿದ್ದರು. ರಿಷಬ್ ಅವರ ಬ್ಯುಸಿ ವೇಳಾಪಟ್ಟಿಯಿಂದಾಗಿ ಮದುವೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ ಎಂದು ಅವರು ವಿವರಿಸಿದರು. ಈ ಕ್ಷಮಾಪಣೆಯಿಂದ ಅನುಶ್ರೀ ಅವರು ಸಂತೋಷಪಟ್ಟರು.

ಮಾಡಿದ ಆ ಒಂದು ತಪ್ಪಿಗೆ ವೇದಿಕೆ ಮೇಲೆ ಅನುಶ್ರೀಗೆ ಕ್ಷಮೆ ಕೇಳಿದ ರಿಷಬ್ ಶೆಟ್ಟಿ
ರಿಷಬ್-ಅನುಶ್ರೀ
ರಾಜೇಶ್ ದುಗ್ಗುಮನೆ
|

Updated on:Sep 23, 2025 | 6:59 AM

Share

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ಸಿದ್ಧರಾಗಿದ್ದಾರೆ. ಅಕ್ಟೋಬರ್ 2ರಂದು ಸಿನಿಮಾ ರಿಲೀಸ್ ಆಗಲಿದೆ. ಇದಕ್ಕಾಗಿ ಅದ್ದೂರಿ ತಯಾರಿ ನಡೆದಿದೆ. ಸೆಪ್ಟೆಂಬರ್ 22ರಂದು ಚಿತ್ರದ ಟ್ರೇಲರ್ ರಿಲೀಸ್ ಆಯಿತು. ಸಂಜೆ ವೇಳೆ ಬೆಂಗಳೂರಿನ ಖಾಸಗಿ ಹೊಟೆಲ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಈ ವೇಳೆ ರಿಷಬ್ ಅವರು ಅನುಶ್ರೀ (Anushree) ಬಳಿ ಕ್ಷಮೆ ಕೇಳಿದ್ದಾರೆ.

ಯಾವುದೇ ವಿಶೇಷ ಕಾರ್ಯಕ್ರಮ ಇದ್ದರೂ ಅದರ ನಿರೂಪಣೆಯನ್ನು ಅನುಶ್ರೀ ಅವರು ಮಾಡುತ್ತಾರೆ. ಅದೇ ರೀತಿ ‘ಕಾಂತಾರ: ಚಾಪ್ಟರ್ 1’ ಟ್ರೇಲರ್ ಲಾಂಚ್ ಈವೆಂಟ್​ನ ನಿರೂಪಣೆಯ ಜವಾಬ್ದಾರಿಯನ್ನು ಅವರೇ ಹೊತ್ತಿದ್ದರು. ಅವರು ತಮ್ಮ ಚೆಂದದ ಮಾತಿನಿಂದ ಎಲ್ಲರನ್ನೂ ಸ್ವಾಗತಿಸಿದರು. ರಿಷಬ್ ಅವರನ್ನು ‘ಡಿವೈನ್ ಸ್ಟಾರ್’ ಎಂದು ಕೊಂಡಾಡಿದರು. ವೇದಿಕೆ ಮೇಲೆ ಮಾತನಾಡಿ ಹೋಗುವಾಗ ರಿಷಬ್ ಅವರು ಅನುಶ್ರೀಗೆ ಸಾರಿ ಎಂದಿದ್ದಾರೆ.

ಅನುಶ್ರೀ ಆಗಸ್ಟ್ 28ರಂದು ಬೆಂಗಳೂರಿನ ಹೊರ ವಲಯದಲ್ಲಿ ಅದ್ದೂರಿಯಾಗಿ ವಿವಾಹ ಆದರು. ಈ ವೇಳೆ ಅನೇಕ ಸೆಲೆಬ್ರಿಟಿಗಳು ಮದುವೆಗೆ ಹಾಜರಿ ಹಾಕಿದ್ದರು. ಆದರೆ, ರಿಷಬ್ ಶೆಟ್ಟಿ ಬಂದಿರಲಿಲ್ಲ. ಅನುಶ್ರೀ ಕಡೆಯಿಂದ ರಿಷಬ್​ಗೆ ಆಮಂತ್ರಣ ಪತ್ರಿಕೆಯೇನೋ ಹೋಗಿತ್ತು. ಆದರೆ, ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೊನೆಯ ಹಂತದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಿದ್ದರಿಂದ ಅವರಿಗೆ ಬರೋಕೆ ಸಾಧ್ಯವೇ ಆಗಿಲ್ಲ.

ಇದನ್ನೂ ಓದಿ
Image
‘BBK 12’ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಬಂತು ಸ್ಪರ್ಧಿಗಳ ಹೊಸ ಪಟ್ಟಿ
Image
ಗಾಯಕ ಜುಬೀನ್ ಗಾರ್ಗ್ ಸಾಯಲು ಅಸಲಿ ಕಾರಣ ಏನು? ರಿವೀಲ್ ಮಾಡಿದ ಪತ್ನಿ
Image
‘ಲೋಕಃ’ ಸಿನಿಮಾ ಒಟಿಟಿ ರಿಲೀಸ್ ವಿಚಾರದಲ್ಲಿ ಪ್ರೇಕ್ಷಕರಿಗೆ ಬೇಸರದ ಸುದ್ದಿ
Image
ಬಾಲಿವುಡ್​ನಲ್ಲಿ ಗೆಲ್ಲೋ ಕನಸು ಕಂಡಿದ್ದ ಹರ್ಷಗೆ ಭಾರೀ ನಿರಾಸೆ

ವೇದಿಕೆ ಮೇಲೆ ಮಾತು ಮುಗಿಸುವಾಗ, ‘ಕಳೆದ ಮೂರು ವರ್ಷಗಳಿಂದ ನಾನು ಹೊರ ಜಗತ್ತಿನ ಎಲ್ಲಾ ವಿಚಾರಗಳಿಂದ ದೂರ ಇದ್ದೆ. ಹೀಗಾಗಿ ಸಾಮಾನ್ಯ ಜ್ಞಾನವೇ ಕಡಿಮೆ ಆಗಿದೆ. ಅನುಶ್ರೀ ಅವರೇ ನಿಮ್ಮ ಮದುವೆಗೂ ಬರೋಕೆ ಆಗಿಲ್ಲ, ಸಾರಿ. ಹ್ಯಾಪಿ ಮ್ಯಾರೀಡ್ ಲೈಫ್’ ಎಂದು ಅನುಶ್ರೀಗೆ ಹೇಳಿದರು.

ಇದನ್ನೂ ಓದಿ: ಮದುವೆ ಬಳಿಕ ಗುಡ್ ನ್ಯೂಸ್ ನೀಡಿದ ನಿರೂಪಕಿ ಅನುಶ್ರೀ

ಇದರಿಂದ ಅನುಶ್ರೀ ಅವರಿಗೆ ಖುಷಿ ಆಯಿತು. ‘ಇಷ್ಟು ದೊಡ್ಡ ವೇದಿಕೆ ಮೇಲೆ ನನಗೆ ರಿಷಬ್ ಅವರಿಂದ ವಿಶ್ ಸಿಕ್ಕಿದೆ’ ಎಂದು ಹೆಮ್ಮೆಯಿಂದ ಅನುಶ್ರೀ ಅವರು ಹೇಳಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Tue, 23 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!