AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ತೆಲುಗು ಸಿನಿಮಾಗೆ ಕರ್ನಾಟಕದಲ್ಲಿ ಮುಹೂರ್ತ; ಇದಕ್ಕಿದೆ ವಿಶೇಷ ಕಾರಣ

ಕಾಂತಾರ ಯಶಸ್ಸಿನ ನಂತರ ರಿಷಬ್ ಶೆಟ್ಟಿ 'ಜೈ ಹನುಮಾನ್' ಚಿತ್ರದ ಮೂಲಕ ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಪ್ರಶಾಂತ್ ವರ್ಮ ನಿರ್ದೇಶನದ, ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದ ಈ ಚಿತ್ರದ ಮುಹೂರ್ತ ಫೆಬ್ರವರಿ 22 ರಂದು ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನೆರವೇರಲಿದೆ. ಹನುಮಂತನ ಜನ್ಮಸ್ಥಳವೆಂದು ನಂಬಲಾಗಿರುವ ಈ ಪವಿತ್ರ ಸ್ಥಳದಲ್ಲಿ ರಿಷಬ್ ಶೆಟ್ಟಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಿಷಬ್ ತೆಲುಗು ಸಿನಿಮಾಗೆ ಕರ್ನಾಟಕದಲ್ಲಿ ಮುಹೂರ್ತ; ಇದಕ್ಕಿದೆ ವಿಶೇಷ ಕಾರಣ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Feb 21, 2026 | 2:32 PM

Share

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಕೂಡ ಹೇಳಿದ್ದರು. ಈ ಚಿತ್ರದ ಬಳಿಕ ಅವರು ಒಂದು ದೀರ್ಘ ಗ್ಯಾಪ್ ತೆಗೆದುಕೊಂಡರು. ಕುಟುಂಬದ ಜೊತೆ ಸಮಯ ಕಳೆದರು. ಈಗ ಅವರು ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ‘ಹನುಮಾನ್ 2’ ಚಿತ್ರದ ಶೂಟ್​​ನಲ್ಲಿ ಅವರು ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕೆ ಕರ್ನಾಟಕದಲ್ಲೇ ಮುಹೂರ್ತ ನಡೆಯಲಿದೆ ಎಂಬುದು ವಿಶೇಷ.

‘ಹನುಮಾನ್’ ಸಿನಿಮಾ 2024ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಸೂಪರ್ ಹಿಟ್ ಆಯಿತು. ಪ್ರಶಾಂತ್ ವರ್ಮ ಅವರು ಇದನ್ನು ನಿರ್ದೇಶನ ಮಾಡಿದ್ದರು. ಈಗ ಈ ಚಿತ್ರದ ಸೀಕ್ವೆಲ್​​ ‘ಜೈ ಹನುಮಾನ್’ ಸಿನಿಮಾಗೆ ಅವರೇ ನಿರ್ದೇಶನ ಮಾಡಲು ರೆಡಿ ಆಗಿದ್ದಾರೆ. ಈ ಸಿನಿಮಾ ಇದೇ ವರ್ಷ ತೆರೆಗೆ ತರುವ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಕೂಡ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಭಾನುವಾರ (ಫೆಬ್ರವರಿ 22) ನಡೆಯಲಿದೆ.

ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ‘ಜೈ ಹನುಮಾನ್’ ಸಿನಿಮಾದ ಮುಹೂರ್ತ ನಡೆಯಲಿದೆ. ಇದು ತೆಲುಗು ಸಿನಿಮಾ ಆದರೂ, ಕರ್ನಾಟಕದಲ್ಲಿ ಮುಹೂರ್ತ ನಡೆಯಲು ಕಾರಣವೂ ಇದೆ. ಹನುಮ ಹುಟ್ಟಿದ್ದು, ಹಂಪಿಯಲ್ಲಿ ಎಂಬುದು ಪುರಾಣದಲ್ಲಿ ಇದೆ. ಈ ಕಾರಣದಿಂದ ಈ ಜಾಗವನ್ನು ಮುಹೂರ್ತಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಸಿನಿಮಾನ ತೆಲುಗಿನಲ್ಲಿ ‘ಪುಷ್ಪ’ದಂತಹ ಚಿತ್ರಗಳನ್ನು ನೀಡಿದ ಮೈತ್ರಿ ಮೂವೀ ಮೇಕರ್ಸ್ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: ರಿಷಬ್ ಶೆಟ್ಟಿಗಾಗಿ ಪ್ರಭಾಸ್ ಸಿನಿಮಾ ಕೈಬಿಟ್ಟರೆ ಯುವ ನಿರ್ದೇಶಕ

ರಿಷಬ್ ಶೆಟ್ಟಿ ಹಾಗೂ ತಂಡ ಈಗಾಗಲೇ ಹಂಪಿ ತಲುಪಿದೆ. ರಿಷಬ್ ಅವರನ್ನು ಹನುಮಂತನ ಲುಕ್​ನಲ್ಲಿ ನೋಡಲು ಅಭಿಮಾನಿಗಳೂ ಕಾತುರದಿಂದ ಕಾಯುತ್ತಿದ್ದಾರೆ. ‘ಕಾಂತಾರ’ ಹಿಟ್ ಆದ ಬಳಿಕ ರಿಷಬ್ ಅವರನ್ನು ಇದೇ ಮಾದರಿಯ ಪಾತ್ರಗಳು ಅರಸಿ ಬರುತ್ತಿವೆ ಅನ್ನೋದು ವಿಶೇಷ. ಅವರು ಖುಷಿ ಖುಷಿಯಿಂದಲೇ ಈ ರೀತಿಯ ಪಾತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರ ಸಿನಿಮಾ ಆಯ್ಕೆ ಬಗ್ಗೆ ಅವರ ಅಭಿಮಾನಿಗಳಿಗೂ ಖುಷಿ ಇದೆ. ‘ಜೈ ಹನುಮಾನ್’ ಮಾತ್ರವಲ್ಲದೆ, ಶಿವಾಜಿ ಕುರಿತ ಸಿನಿಮಾದಲ್ಲೂ ರಿಷಬ್ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ