AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರಿವರ ಕೈಕಾಲು ಹಿಡಿದಿದ್ದಕ್ಕೆ ಒಂದು ಶೋ ಸಿಕ್ತು’; ಯಶಸ್ಸಿನ ಬೆನ್ನಲ್ಲೇ ರಿಷಬ್ ಹಳೆಯ ಟ್ವೀಟ್ ವೈರಲ್

ರಿಷಬ್ ಶೆಟ್ಟಿ ಅವರು ಮೊದಲು ನಿರ್ದೇಶನ ಮಾಡಿದ ಚಿತ್ರ ‘ರಿಕ್ಕಿ’. ಈ ಸಿನಿಮಾ ತೆರೆಗೆ ಬಂದಿದ್ದು 2016ರಲ್ಲಿ. ನಕ್ಸಲೈಟ್ಸ್ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರ ಮಾಡುವಾಗ ಅವರಿಗೆ ದೊಡ್ಡ ಗುರುತು ಸಿಕ್ಕಿರಲಿಲ್ಲ. ಒಂದು ಶೋ ಪಡೆಯಬೇಕು ಎಂದರೆ ಸಾಕಷ್ಟು ಕಷ್ಟಪಡಬೇಕಿತ್ತು. ಇದಕ್ಕೆ ಅವರು ಮಾಡಿರುವ ಟ್ವೀಟ್ ಸಾಕ್ಷಿ.

‘ಅವರಿವರ ಕೈಕಾಲು ಹಿಡಿದಿದ್ದಕ್ಕೆ ಒಂದು ಶೋ ಸಿಕ್ತು’; ಯಶಸ್ಸಿನ ಬೆನ್ನಲ್ಲೇ ರಿಷಬ್ ಹಳೆಯ ಟ್ವೀಟ್ ವೈರಲ್
ರಿಷಬ್
ರಾಜೇಶ್ ದುಗ್ಗುಮನೆ
|

Updated on:Oct 03, 2025 | 3:00 PM

Share

ರಿಷಬ್ ಶೆಟ್ಟಿ ಅವರು ‘ಕಾಂತರ: ಚಾಪ್ಟರ್ 1’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ನಮ್ಮ ರಾಜ್ಯ ಮಾತ್ರವಲ್ಲ, ಪರ ರಾಜ್ಯಗಳಲ್ಲೂ ಈ ಸಿನಿಮಾ ಅಬ್ಬರಿಸುತ್ತಿದೆ. ಅವರ ಭಾಷೆಯ ಸಿನಿಮಾಗಳನ್ನು ತೆಗೆದು ಈ ಚಿತ್ರವನ್ನು ಪ್ರದರ್ಶನ ಮಾಡಲಾಗುತ್ತಿದೆ. ಇದು ರಿಷಬ್ ಚಿತ್ರದ ಹೆಚ್ಚುಗಾರಿಕೆ. ಹೀಗಿರುವಾಗಲೇ ರಿಷಬ್ ಶೆಟ್ಟಿ ಈ ಮೊದಲು ಮಾಡಿದ್ದ ಟ್ವೀಟ್ ಒಂದು ವೈರಲ್ ಆಗಿದೆ. ಈ ಟ್ವೀಟ್ ನೋಡಿದ ಫ್ಯಾನ್ಸ್, ‘ಬೆಳವಣಿಗೆ ಅಂದರೆ ಇದು’ ಎಂದಿದ್ದಾರೆ.

ರಿಷಬ್ ಶೆಟ್ಟಿ ಅವರು ಮೊದಲು ನಿರ್ದೇಶನ ಮಾಡಿದ ಚಿತ್ರ ‘ರಿಕ್ಕಿ’. ಈ ಸಿನಿಮಾ ತೆರೆಗೆ ಬಂದಿದ್ದು 2016ರಲ್ಲಿ. ನಕ್ಸಲೈಟ್ಸ್ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರ ಮಾಡುವಾಗ ಅವರಿಗೆ ದೊಡ್ಡ ಗುರುತು ಸಿಕ್ಕಿರಲಿಲ್ಲ. ಒಂದು ಶೋ ಪಡೆಯಬೇಕು ಎಂದರೆ ಸಾಕಷ್ಟು ಕಷ್ಟಪಡಬೇಕಿತ್ತು. ಇದಕ್ಕೆ ಅವರು ಮಾಡಿರುವ ಟ್ವೀಟ್ ಸಾಕ್ಷಿ.

ಇದನ್ನೂ ಓದಿ
Image
ರಚಿತಾ ರಾಮ್​ಗೆ ಡಿ ಬಾಸ್ ದರ್ಶನ್ ಮೇಲೆ ಯಾಕೆ ಅಷ್ಟು ವಿಶೇಷ ಗೌರವ ಗೊತ್ತಾ?
Image
ಕಾಕ್ರೋಚ್ ಸುಧಿ ಕಾರಣಕ್ಕೆ ಹೊತ್ತಿ ಉರಿಯಿತು ಬಿಗ್ ಬಾಸ್ ಮನೆ
Image
‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

‘ರಿಕ್ಕಿ’ ಸಿನಿಮಾ 2016ರ ಜನವರಿ 22ರಂದು ರಿಲೀಸ್ ಆಯಿತು. ಫೆಬ್ರವರಿ 6ರಂದು ಅವರು ಟ್ವೀಟ್ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ, ‘ಅಂತು ಇಂತು ಅವರಿವರ ಕಾಲು ಹಿಡಿದು ಮಂಗಳೂರಿನ ಬಿಗ್ ಸಿನಿಮಾಸ್​ನಲ್ಲಿ ನಾಳೆಯಿಂದ ಸಂಜೆ 7 ಗಂಟೆ ಶೋ ಸಿಕ್ಕಿದೆ. ನೋಡಲು ಇಚ್ಚಿಸುವವರು..’ ಎಂದು ಬುಕಿಂಗ್ ಲಿಂಕ್ ನೀಡಿದ್ದರು.

ಅಂದು ರಿಷಬ್ ಶೆಟ್ಟಿ ಅವರು ಒಂದು ಶೋಗಾಗಿ ಅಂಗಲಾಚಿದ್ದರು. ಆದರೆ, ಈಗ ರಿಷಬ್ ಚಾರ್ಮ್ ಬದಲಾಗಿದೆ. ಅವರು ಜನಪ್ರಿಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಐದು ಸಾವಿರಕ್ಕೂ ಅಧಿಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡಿವೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್; ‘ಪಠಾಣ್’ ದಾಖಲೆಯೇ ಉಡೀಸ್

ರಿಷಬ್​ ಶೆಟ್ಟಿಗೆ ನಿರ್ದೇಶಕನಾಗಿ ಗೆಲುವು ತಂದುಕೊಟ್ಟಿದ್ದರು. ‘ಕಿರಿಕ್ ಪಾರ್ಟಿ’ ಸಿನಿಮಾ. ಈ ಚಿತ್ರ ಕೂಡ 2016ರಲ್ಲೇ ರಿಲೀಸ್ ಆಯಿತು. ‘ಸಹಿಪ್ರಾ ಶಾಲೆ’ (2018) ಸಿನಿಮಾ ಕೂಡ ಗಮನ ಸೆಳೆಯಿತು. 2022ರ ‘ಕಾಂತಾರ’ ಚಿತ್ರ ಸೂಪರ್ ಹಿಟ್ ಆಯಿತು. ಈಗ ಅವರು ‘ಕಾಂತಾರ: ಚಾಪ್ಟರ್ 1’ ಮಾಡಿ ಯಶಸ್ಸಿನ ಉತ್ತುಂಗ ತಲುಪಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:00 pm, Fri, 3 October 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!