AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರಿವರ ಕೈಕಾಲು ಹಿಡಿದಿದ್ದಕ್ಕೆ ಒಂದು ಶೋ ಸಿಕ್ತು’; ಯಶಸ್ಸಿನ ಬೆನ್ನಲ್ಲೇ ರಿಷಬ್ ಹಳೆಯ ಟ್ವೀಟ್ ವೈರಲ್

ರಿಷಬ್ ಶೆಟ್ಟಿ ಅವರು ಮೊದಲು ನಿರ್ದೇಶನ ಮಾಡಿದ ಚಿತ್ರ ‘ರಿಕ್ಕಿ’. ಈ ಸಿನಿಮಾ ತೆರೆಗೆ ಬಂದಿದ್ದು 2016ರಲ್ಲಿ. ನಕ್ಸಲೈಟ್ಸ್ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರ ಮಾಡುವಾಗ ಅವರಿಗೆ ದೊಡ್ಡ ಗುರುತು ಸಿಕ್ಕಿರಲಿಲ್ಲ. ಒಂದು ಶೋ ಪಡೆಯಬೇಕು ಎಂದರೆ ಸಾಕಷ್ಟು ಕಷ್ಟಪಡಬೇಕಿತ್ತು. ಇದಕ್ಕೆ ಅವರು ಮಾಡಿರುವ ಟ್ವೀಟ್ ಸಾಕ್ಷಿ.

‘ಅವರಿವರ ಕೈಕಾಲು ಹಿಡಿದಿದ್ದಕ್ಕೆ ಒಂದು ಶೋ ಸಿಕ್ತು’; ಯಶಸ್ಸಿನ ಬೆನ್ನಲ್ಲೇ ರಿಷಬ್ ಹಳೆಯ ಟ್ವೀಟ್ ವೈರಲ್
ರಿಷಬ್
ರಾಜೇಶ್ ದುಗ್ಗುಮನೆ
|

Updated on:Oct 03, 2025 | 3:00 PM

Share

ರಿಷಬ್ ಶೆಟ್ಟಿ ಅವರು ‘ಕಾಂತರ: ಚಾಪ್ಟರ್ 1’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ನಮ್ಮ ರಾಜ್ಯ ಮಾತ್ರವಲ್ಲ, ಪರ ರಾಜ್ಯಗಳಲ್ಲೂ ಈ ಸಿನಿಮಾ ಅಬ್ಬರಿಸುತ್ತಿದೆ. ಅವರ ಭಾಷೆಯ ಸಿನಿಮಾಗಳನ್ನು ತೆಗೆದು ಈ ಚಿತ್ರವನ್ನು ಪ್ರದರ್ಶನ ಮಾಡಲಾಗುತ್ತಿದೆ. ಇದು ರಿಷಬ್ ಚಿತ್ರದ ಹೆಚ್ಚುಗಾರಿಕೆ. ಹೀಗಿರುವಾಗಲೇ ರಿಷಬ್ ಶೆಟ್ಟಿ ಈ ಮೊದಲು ಮಾಡಿದ್ದ ಟ್ವೀಟ್ ಒಂದು ವೈರಲ್ ಆಗಿದೆ. ಈ ಟ್ವೀಟ್ ನೋಡಿದ ಫ್ಯಾನ್ಸ್, ‘ಬೆಳವಣಿಗೆ ಅಂದರೆ ಇದು’ ಎಂದಿದ್ದಾರೆ.

ರಿಷಬ್ ಶೆಟ್ಟಿ ಅವರು ಮೊದಲು ನಿರ್ದೇಶನ ಮಾಡಿದ ಚಿತ್ರ ‘ರಿಕ್ಕಿ’. ಈ ಸಿನಿಮಾ ತೆರೆಗೆ ಬಂದಿದ್ದು 2016ರಲ್ಲಿ. ನಕ್ಸಲೈಟ್ಸ್ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರ ಮಾಡುವಾಗ ಅವರಿಗೆ ದೊಡ್ಡ ಗುರುತು ಸಿಕ್ಕಿರಲಿಲ್ಲ. ಒಂದು ಶೋ ಪಡೆಯಬೇಕು ಎಂದರೆ ಸಾಕಷ್ಟು ಕಷ್ಟಪಡಬೇಕಿತ್ತು. ಇದಕ್ಕೆ ಅವರು ಮಾಡಿರುವ ಟ್ವೀಟ್ ಸಾಕ್ಷಿ.

ಇದನ್ನೂ ಓದಿ
Image
ರಚಿತಾ ರಾಮ್​ಗೆ ಡಿ ಬಾಸ್ ದರ್ಶನ್ ಮೇಲೆ ಯಾಕೆ ಅಷ್ಟು ವಿಶೇಷ ಗೌರವ ಗೊತ್ತಾ?
Image
ಕಾಕ್ರೋಚ್ ಸುಧಿ ಕಾರಣಕ್ಕೆ ಹೊತ್ತಿ ಉರಿಯಿತು ಬಿಗ್ ಬಾಸ್ ಮನೆ
Image
‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

‘ರಿಕ್ಕಿ’ ಸಿನಿಮಾ 2016ರ ಜನವರಿ 22ರಂದು ರಿಲೀಸ್ ಆಯಿತು. ಫೆಬ್ರವರಿ 6ರಂದು ಅವರು ಟ್ವೀಟ್ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ, ‘ಅಂತು ಇಂತು ಅವರಿವರ ಕಾಲು ಹಿಡಿದು ಮಂಗಳೂರಿನ ಬಿಗ್ ಸಿನಿಮಾಸ್​ನಲ್ಲಿ ನಾಳೆಯಿಂದ ಸಂಜೆ 7 ಗಂಟೆ ಶೋ ಸಿಕ್ಕಿದೆ. ನೋಡಲು ಇಚ್ಚಿಸುವವರು..’ ಎಂದು ಬುಕಿಂಗ್ ಲಿಂಕ್ ನೀಡಿದ್ದರು.

ಅಂದು ರಿಷಬ್ ಶೆಟ್ಟಿ ಅವರು ಒಂದು ಶೋಗಾಗಿ ಅಂಗಲಾಚಿದ್ದರು. ಆದರೆ, ಈಗ ರಿಷಬ್ ಚಾರ್ಮ್ ಬದಲಾಗಿದೆ. ಅವರು ಜನಪ್ರಿಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಐದು ಸಾವಿರಕ್ಕೂ ಅಧಿಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡಿವೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್; ‘ಪಠಾಣ್’ ದಾಖಲೆಯೇ ಉಡೀಸ್

ರಿಷಬ್​ ಶೆಟ್ಟಿಗೆ ನಿರ್ದೇಶಕನಾಗಿ ಗೆಲುವು ತಂದುಕೊಟ್ಟಿದ್ದರು. ‘ಕಿರಿಕ್ ಪಾರ್ಟಿ’ ಸಿನಿಮಾ. ಈ ಚಿತ್ರ ಕೂಡ 2016ರಲ್ಲೇ ರಿಲೀಸ್ ಆಯಿತು. ‘ಸಹಿಪ್ರಾ ಶಾಲೆ’ (2018) ಸಿನಿಮಾ ಕೂಡ ಗಮನ ಸೆಳೆಯಿತು. 2022ರ ‘ಕಾಂತಾರ’ ಚಿತ್ರ ಸೂಪರ್ ಹಿಟ್ ಆಯಿತು. ಈಗ ಅವರು ‘ಕಾಂತಾರ: ಚಾಪ್ಟರ್ 1’ ಮಾಡಿ ಯಶಸ್ಸಿನ ಉತ್ತುಂಗ ತಲುಪಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:00 pm, Fri, 3 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ