AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ರಹ್ಮಕಲಶ’ ಹಾಡಿನಲ್ಲಿ ವಾಟರ್ ಕ್ಯಾನ್ ಇದೆ ಎಂದು ಗೊತ್ತಾಗಲು ಕಾರಣ ಆಗಿದ್ದು ಆ ವ್ಯಕ್ತಿ

ಕಾಂತಾರ: ಚಾಪ್ಟರ್ 1 ಚಿತ್ರದ 'ಬ್ರಹ್ಮಕಳಶ' ಹಾಡಿನಲ್ಲಿ ಕಾಣಿಸಿದ್ದ ನೀರಿನ ಕ್ಯಾನ್ ವಿವಾದದ ಕುರಿತು ಛಾಯಾಗ್ರಾಹಕ ಅರವಿಂದ್ ಕಶ್ಯಪ್ ಸ್ಪಷ್ಟನೆ ನೀಡಿದ್ದಾರೆ. ಗುಣಮಟ್ಟ ನಿಯಂತ್ರಣ ತಂಡದ ಲೋಪದಿಂದಾಗಿ ಕ್ಯಾನ್ ಕಾಣುವ ಶಾಟ್ ಬಳಕೆಯಾಗಿತ್ತು. ಬಳಿಕ ಅದನ್ನು ಸರಿಪಡಿಸಲಾಗಿದೆ. ಜೂನಿಯರ್ ಕಲಾವಿದರೊಬ್ಬರು ಸ್ಕ್ರೀನ್‌ಶಾಟ್ ಹಂಚಿಕೊಂಡಾಗ ಈ ದೋಷ ಬೆಳಕಿಗೆ ಬಂದಿತ್ತು ಎಂದು ವಿವರಿಸಿದ್ದಾರೆ.

‘ಬ್ರಹ್ಮಕಲಶ’ ಹಾಡಿನಲ್ಲಿ ವಾಟರ್ ಕ್ಯಾನ್ ಇದೆ ಎಂದು ಗೊತ್ತಾಗಲು ಕಾರಣ ಆಗಿದ್ದು ಆ ವ್ಯಕ್ತಿ
ಬ್ರಹ್ಮಕಲಶ
ರಾಜೇಶ್ ದುಗ್ಗುಮನೆ
|

Updated on:Nov 05, 2025 | 10:36 AM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆ ಬಳಿಕ ಸಿನಿಮಾ ಒಟಿಟಿಗೂ ಕಾಲಿಟ್ಟು ಗಮನ ಸೆಳೆಯುತ್ತಿದೆ. ಈ ಚಿತ್ರವನ್ನು ಎಲ್ಲರೂ ಕೊಂಡಾಡಿದರು. ಈ ಚಿತ್ರಕ್ಕೆ ಒಂದು ಕಪ್ಪು ಚುಪ್ಪೆ ಬಿದ್ದಿತ್ತು. ಅದುವೇ ‘ಬ್ರಹ್ಮಕಲಶ’ ಹಾಡಿನಲ್ಲಿ (Brahmakalasha Song) ಬರೋ ನೀರಿನ ಕ್ಯಾನ್ ದೃಶ್ಯ. ಇದನ್ನು ಅನೇಕರು ಟ್ರೋಲ್ ಮಾಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆ ಆಯಿತು. ಈ ಬಗ್ಗೆ ತಂಡದ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

ರಿಷಬ್ ಶೆಟ್ಟಿ ಅವರು ತುಂಬಾನೇ ಶ್ರದ್ಧೆಯಿಂದ ಸಿನಿಮಾ ಮಾಡುತ್ತಾರೆ. ‘ಕಾಂತಾರ’ ಹಾಗೂ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲೂ ಅವರು ಸಾಕಷ್ಟು ಶ್ರಮ ಹಾಕಿದ್ದರು. ಎಲ್ಲವೂ ಅಚ್ಚುಕಟ್ಟಾಗಿ ಮೂಡಿಬರುವಂತೆ ನೋಡಿಕೊಂಡಿದ್ದರು. ಆದರೆ, ಅಲ್ಲಾಗಿದ್ದೇ ಬೇರೆ. ನೂರಾರು ಕೋಟಿ ರೂಪಾಯಿ ಬಜೆಟ್ ಹಾಕಿ ಅದ್ದೂರಿಯಾಗಿ ಮೂಡಿ ಬಂದ ಸಿನಿಮಾದಲ್ಲಿ ನೀರಿನ ಕ್ಯಾನ್ ಕಾಣಿಸಿಕೊಂಡಿದ್ದು ತಂಡವನ್ನು ಮುಜುಗರಕ್ಕೆ ಈಡು ಮಾಡಿತ್ತು. ಈ ಬಗ್ಗೆ ಚಿತ್ರದ ಛಾಯಾಗ್ರಾಹಕ ಅರವಿಂದ್ ಕಶ್ಯಪ್ ಅವರು ‘ಗೌರೀಶ್ ಅಕ್ಕಿ ಸ್ಟುಡಿಯೋ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದರು.

‘ನಮ್ಮ ಗುಣಮಟ್ಟ ನಿಯಂತ್ರಕ ತಂಡ ಸ್ಟ್ರಾಂಗ್ ಆಗಿದೆ. ಪ್ರತಿ ಫ್ರೇಮ್ ಕೂಡ ನೋಡಿಯೇ ಮುಂದಿನ ಪ್ರಕ್ರಿಯೆ ಮಾಡುತ್ತಿತ್ತು. ಮೊದಲು ಓಕೆ ಆದ ಶಾಟ್​ ಅಲ್ಲಿ ಹಾಕಿರಲಿಲ್ಲ. ಅದರಲ್ಲಿ ವಾಟರ್ ಕ್ಯಾನ್ ಕೂಡ ಇರಲಿಲ್ಲ. ನಂತರ ಓಕೆ ಅಲ್ಲದೆ ಇರೋ ಶಾಟ್​ನ ನಾವು ಅಲ್ಲಿ ಕೂರಿಸಿದೆವು. ಆಗ ವಾಟರ್ ಕ್ಯಾನ್ ಕಾಣಿಸಿತು. ಈಗ ವಾಟರ್ ಕ್ಯಾನ್ ಇಲ್ಲ’ ಎಂದರು ಅವರು.

ವಾಟರ್ ಕ್ಯಾನ್ ವಿಚಾರಕ್ಕೆ ಸ್ಪಷ್ಟನೆ

‘ಅಲ್ಲಿ ನೋಡಲು ತುಂಬಾ ವಿಷಯಗಳಿವೆ. ಆದರೂ ಈ ವಾಟರ್ ಕ್ಯಾನ್ ಕಾಣಿಸಿದ್ದು ಹೇಗೆ ಎಂಬುದೇ ಕುತೂಹಲಕಾರಿ. ಈ ಹಾಡಿನಲ್ಲಿ ಕಾಣಿಸಿಕೊಂಡ ಜೂನಿಯರ್ ಆರ್ಟಿಸ್ಟ್ ತಾನು ಎಲ್ಲಿದ್ದೇನೆ ಎಂಬುದನ್ನು ತೋರಿಸಲು ಜೂಮ್ ಮಾಡಿ ಸ್ಕ್ರೀನ್​ಶಾಟ್ ಹಂಚಿಕೊಂಡಿದ್ದ. ಈ ವೇಳೆ ಆತನಿಗೆ ವಾಟರ್ ಕ್ಯಾನ್ ಕಾಣಿಸಿದೆ. ಸಾಂಗ್ ರಿಲೀಸ್ ಆಗಿ 10 ದಿನ ಆದ ಬಳಿಕ ಈ ವಾಟರ ಕ್ಯಾನ್ ವಿಚಾರ ಗೊತ್ತಾಗಿದೆ’ ಎಂದು ಸ್ಪಷ್ಟನೆ ಕೊಟ್ಟರು ಅರವಿಂದ್ ಕಶ್ಯಪ್.

ಇದನ್ನೂ ಓದಿ: ‘ಕಾಂತಾರ’ದಲ್ಲಿ ವಾಟರ್ ಕ್ಯಾನ್: ಈ ರೀತಿ ತಪ್ಪು ಮಾಡಿದ ದೊಡ್ಡ ಸಿನಿಮಾಗಳ ಪಟ್ಟಿ ಇಲ್ಲಿದೆ

ಕಾಂತಾರ: ಚಾಪ್ಟರ್ 1 ಚಿತ್ರದ ‘ಬ್ರಹ್ಮಕಲಶ’ ಹಾಡಿನಲ್ಲಿ ಕಾಣಿಸಿದ್ದ ನೀರಿನ ಕ್ಯಾನ್ ವಿವಾದದ ಕುರಿತು ಛಾಯಾಗ್ರಾಹಕ ಅರವಿಂದ್ ಕಶ್ಯಪ್ ಸ್ಪಷ್ಟನೆ ನೀಡಿದ್ದಾರೆ. ಗುಣಮಟ್ಟ ನಿಯಂತ್ರಣ ತಂಡದ ಲೋಪದಿಂದಾಗಿ ಕ್ಯಾನ್ ಕಾಣುವ ಶಾಟ್ ಬಳಕೆಯಾಗಿತ್ತು. ಬಳಿಕ ಅದನ್ನು ಸರಿಪಡಿಸಲಾಗಿದೆ. ಜೂನಿಯರ್ ಕಲಾವಿದರೊಬ್ಬರು ಸ್ಕ್ರೀನ್‌ಶಾಟ್ ಹಂಚಿಕೊಂಡಾಗ ಈ ದೋಷ ಬೆಳಕಿಗೆ ಬಂದಿತ್ತು ಎಂದು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:05 am, Wed, 5 November 25

ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​