Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಸ್ವಿಟ್ಜರ್​ಲೆಂಡ್​ನ ಜಿನೆವಾನಲ್ಲಿ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಸ್ವಿಟ್ಜರ್​ಲೆಂಡ್​ನ ಜೆನಿವಾನಲ್ಲಿ ವಿಶೇಷ ಪ್ರದರ್ಶನ ಕಾಣಲಿದೆ. ವಿಶೇಷ ಸ್ಕ್ರೀನಿಂಗ್ ಅನ್ನು ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದವರು ಆಯೋಜನೆ ಮಾಡಿದ್ದಾರೆ.

Kantara: ಸ್ವಿಟ್ಜರ್​ಲೆಂಡ್​ನ ಜಿನೆವಾನಲ್ಲಿ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ
ಕಾಂತಾರ ಸಿನಿಮಾ
Follow us
ಮಂಜುನಾಥ ಸಿ.
|

Updated on: Mar 17, 2023 | 8:46 PM

ನಟ ನಿರ್ದೇಶಕ ರಿಷಬ್ ಶೆಟ್ಟಿಯವರು (Rishab Setty) ಸ್ವಿಟ್ಜರ್​ಲೆಂಡ್​ನ ಜಿನೆವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ  ವಾರ್ಷಿಕ ಸಭೆಯಲ್ಲಿ (UN Annual Meet) ಭಾಗವಹಿಸಿ ಕನ್ನಡದಲ್ಲಿ ಮಾತನಾಡಿದ್ದರು. ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಮಾಡಿದ ರಿಷಬ್​ಗೆ ಅಭಿನಂದನೆಗಳ ಸುರಿಮಳೆ ಸುರಿತ್ತಿರುವ ಬೆನ್ನಲ್ಲೆ ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಸ್ವಿಟ್ಜರ್​ಲೆಂಡ್​ನಲ್ಲಿ ವಿಶೇಷ ಪ್ರದರ್ಶನಗೊಳ್ಳಲು ಅಣಿಯಾಗಿದೆ. ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ದವರು ‘ಕಾಂತಾರ’ ಸಿನಿಮಾದ ವಿಶೇಷ ಸ್ಕ್ರೀನಿಂಗ್ ಅನ್ನು ಆಯೋಜಿಸಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಇರುವ ಜೆನಿವಾ ಬಳಿಯ ಬಲೆಕ್ಸರ್ಟ್ ಮಾಲ್​ನಲ್ಲಿ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದ್ದು ಕನ್ನಡದಲ್ಲಿಯೇ ಸಿನಿಮಾ ಪ್ರದರ್ಶನಗೊಳ್ಳಲಿದೆ. ಇಂಗ್ಲೀಷ್ ಸಬ್​ಟೈಟಲ್​ಗಳನ್ನು ಸಿನಿಮಾ ಒಳಗೊಂಡಿರಲಿದೆ. ರಿಷಬ್ ಶೆಟ್ಟಿ ಹಾಜರಿಯಲ್ಲಿ ಸಿನಿಮಾದ ಪ್ರದರ್ಶನ ನಡೆಯಲಿದ್ದು, ಸಿನಿಮಾ ಪ್ರದರ್ಶನಕ್ಕೆ ಮುನ್ನ ಕಾರ್ಯಕ್ರಮವನ್ನು ಸಹ ಆಯೋಜನೆ ಮಾಡಲಾಗಿದೆ.

ಈ ವಿಶೇಷ ಪ್ರದರ್ಶನಕ್ಕೆ ಆನ್​ಲೈನ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದ್ದು, ವಿಶ್ವಸಂಸ್ಥೆಯ ಕೆಲವು ಅಧಿಕಾರಿಗಳನ್ನು ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ದಿ ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ದವರು ಆಹ್ವಾನಿಸಿರುವ ಸಾಧ್ಯತೆ ಇದೆ. ಭಾರತೀಯ ಕಾಲಮಾನ 17 ಮಾರ್ಚ್ 10:30ಗೆ ಸ್ವಿಟ್ಜರ್​ಲೆಂಡ್​ನಲ್ಲಿ ಕಾಂತಾರ ಸಿನಿಮಾ ಪ್ರದರ್ಶನಗೊಳ್ಳಲಿದೆ.

ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನವು ಜಿನೆವಾನಲ್ಲಿ ಆಯೋಜನೆಗೊಂಡಿರುವ ಬಗ್ಗೆ ರಿಷಬ್ ಶೆಟ್ಟಿ ತಮ್ಮ ಟ್ವೀಟ್​ನಲ್ಲಿ ಹಂಚಿಕೊಂಡಿದ್ದು ”ಜಿನೆವಾದಲ್ಲಿ ನಮ್ಮ ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನ” ಎಂದು ಬರೆದುಕೊಂಡಿದ್ದಾರೆ ಜೊತೆಗೆ ಸಿನಿಮಾದ ವಿಶೇಷ ಪ್ರದರ್ಶನದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ.

ನಿನ್ನೆ (ಮಾರ್ಚ್ 16) ರಂದು ರಿಷಬ್ ಶೆಟ್ಟಿಯವರು ಜಿನೆವಾನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ವಾರ್ಷಿಕ ಸಭೆಯ ಯಲ್ಲಿ ಭಾಗವಹಿಸಿದ್ದರು. ಭಾರತ ಇಕೋಫಾರ್ಮ್ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗವಹಿಸಿದ್ದ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ ಮಾಡಿದ್ದು ವಿಶೇಷವಾಗಿತ್ತು. ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗವಹಿಸಿದ್ದ ರಿಷಬ್, ”ನಮಸ್ಕಾರ ನಾನು ರಿಷಬ್ ಶೆಟ್ಟಿ. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ಪರಿಸರ ಸ್ವಚ್ಛತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ, ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದು ನನ್ನ ಉದ್ದೇಶ” ಎಂದಿದ್ದರು. ರಿಷಬ್ ಶೆಟ್ಟಿ ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ನೆಟ್ಟಿಗರಿಂದ ಪ್ರಶಂಸೆ ವ್ಯಕ್ತವಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!