AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಸ್ವಿಟ್ಜರ್​ಲೆಂಡ್​ನ ಜಿನೆವಾನಲ್ಲಿ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಸ್ವಿಟ್ಜರ್​ಲೆಂಡ್​ನ ಜೆನಿವಾನಲ್ಲಿ ವಿಶೇಷ ಪ್ರದರ್ಶನ ಕಾಣಲಿದೆ. ವಿಶೇಷ ಸ್ಕ್ರೀನಿಂಗ್ ಅನ್ನು ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದವರು ಆಯೋಜನೆ ಮಾಡಿದ್ದಾರೆ.

Kantara: ಸ್ವಿಟ್ಜರ್​ಲೆಂಡ್​ನ ಜಿನೆವಾನಲ್ಲಿ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ
ಕಾಂತಾರ ಸಿನಿಮಾ
ಮಂಜುನಾಥ ಸಿ.
|

Updated on: Mar 17, 2023 | 8:46 PM

Share

ನಟ ನಿರ್ದೇಶಕ ರಿಷಬ್ ಶೆಟ್ಟಿಯವರು (Rishab Setty) ಸ್ವಿಟ್ಜರ್​ಲೆಂಡ್​ನ ಜಿನೆವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ  ವಾರ್ಷಿಕ ಸಭೆಯಲ್ಲಿ (UN Annual Meet) ಭಾಗವಹಿಸಿ ಕನ್ನಡದಲ್ಲಿ ಮಾತನಾಡಿದ್ದರು. ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಮಾಡಿದ ರಿಷಬ್​ಗೆ ಅಭಿನಂದನೆಗಳ ಸುರಿಮಳೆ ಸುರಿತ್ತಿರುವ ಬೆನ್ನಲ್ಲೆ ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಸ್ವಿಟ್ಜರ್​ಲೆಂಡ್​ನಲ್ಲಿ ವಿಶೇಷ ಪ್ರದರ್ಶನಗೊಳ್ಳಲು ಅಣಿಯಾಗಿದೆ. ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ದವರು ‘ಕಾಂತಾರ’ ಸಿನಿಮಾದ ವಿಶೇಷ ಸ್ಕ್ರೀನಿಂಗ್ ಅನ್ನು ಆಯೋಜಿಸಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಇರುವ ಜೆನಿವಾ ಬಳಿಯ ಬಲೆಕ್ಸರ್ಟ್ ಮಾಲ್​ನಲ್ಲಿ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದ್ದು ಕನ್ನಡದಲ್ಲಿಯೇ ಸಿನಿಮಾ ಪ್ರದರ್ಶನಗೊಳ್ಳಲಿದೆ. ಇಂಗ್ಲೀಷ್ ಸಬ್​ಟೈಟಲ್​ಗಳನ್ನು ಸಿನಿಮಾ ಒಳಗೊಂಡಿರಲಿದೆ. ರಿಷಬ್ ಶೆಟ್ಟಿ ಹಾಜರಿಯಲ್ಲಿ ಸಿನಿಮಾದ ಪ್ರದರ್ಶನ ನಡೆಯಲಿದ್ದು, ಸಿನಿಮಾ ಪ್ರದರ್ಶನಕ್ಕೆ ಮುನ್ನ ಕಾರ್ಯಕ್ರಮವನ್ನು ಸಹ ಆಯೋಜನೆ ಮಾಡಲಾಗಿದೆ.

ಈ ವಿಶೇಷ ಪ್ರದರ್ಶನಕ್ಕೆ ಆನ್​ಲೈನ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದ್ದು, ವಿಶ್ವಸಂಸ್ಥೆಯ ಕೆಲವು ಅಧಿಕಾರಿಗಳನ್ನು ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ದಿ ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ದವರು ಆಹ್ವಾನಿಸಿರುವ ಸಾಧ್ಯತೆ ಇದೆ. ಭಾರತೀಯ ಕಾಲಮಾನ 17 ಮಾರ್ಚ್ 10:30ಗೆ ಸ್ವಿಟ್ಜರ್​ಲೆಂಡ್​ನಲ್ಲಿ ಕಾಂತಾರ ಸಿನಿಮಾ ಪ್ರದರ್ಶನಗೊಳ್ಳಲಿದೆ.

ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನವು ಜಿನೆವಾನಲ್ಲಿ ಆಯೋಜನೆಗೊಂಡಿರುವ ಬಗ್ಗೆ ರಿಷಬ್ ಶೆಟ್ಟಿ ತಮ್ಮ ಟ್ವೀಟ್​ನಲ್ಲಿ ಹಂಚಿಕೊಂಡಿದ್ದು ”ಜಿನೆವಾದಲ್ಲಿ ನಮ್ಮ ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನ” ಎಂದು ಬರೆದುಕೊಂಡಿದ್ದಾರೆ ಜೊತೆಗೆ ಸಿನಿಮಾದ ವಿಶೇಷ ಪ್ರದರ್ಶನದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ.

ನಿನ್ನೆ (ಮಾರ್ಚ್ 16) ರಂದು ರಿಷಬ್ ಶೆಟ್ಟಿಯವರು ಜಿನೆವಾನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ವಾರ್ಷಿಕ ಸಭೆಯ ಯಲ್ಲಿ ಭಾಗವಹಿಸಿದ್ದರು. ಭಾರತ ಇಕೋಫಾರ್ಮ್ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗವಹಿಸಿದ್ದ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ ಮಾಡಿದ್ದು ವಿಶೇಷವಾಗಿತ್ತು. ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗವಹಿಸಿದ್ದ ರಿಷಬ್, ”ನಮಸ್ಕಾರ ನಾನು ರಿಷಬ್ ಶೆಟ್ಟಿ. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ಪರಿಸರ ಸ್ವಚ್ಛತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ, ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದು ನನ್ನ ಉದ್ದೇಶ” ಎಂದಿದ್ದರು. ರಿಷಬ್ ಶೆಟ್ಟಿ ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ನೆಟ್ಟಿಗರಿಂದ ಪ್ರಶಂಸೆ ವ್ಯಕ್ತವಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್