AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಸ್ವಿಟ್ಜರ್​ಲೆಂಡ್​ನ ಜಿನೆವಾನಲ್ಲಿ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಸ್ವಿಟ್ಜರ್​ಲೆಂಡ್​ನ ಜೆನಿವಾನಲ್ಲಿ ವಿಶೇಷ ಪ್ರದರ್ಶನ ಕಾಣಲಿದೆ. ವಿಶೇಷ ಸ್ಕ್ರೀನಿಂಗ್ ಅನ್ನು ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದವರು ಆಯೋಜನೆ ಮಾಡಿದ್ದಾರೆ.

Kantara: ಸ್ವಿಟ್ಜರ್​ಲೆಂಡ್​ನ ಜಿನೆವಾನಲ್ಲಿ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ
ಕಾಂತಾರ ಸಿನಿಮಾ
ಮಂಜುನಾಥ ಸಿ.
|

Updated on: Mar 17, 2023 | 8:46 PM

Share

ನಟ ನಿರ್ದೇಶಕ ರಿಷಬ್ ಶೆಟ್ಟಿಯವರು (Rishab Setty) ಸ್ವಿಟ್ಜರ್​ಲೆಂಡ್​ನ ಜಿನೆವಾದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ  ವಾರ್ಷಿಕ ಸಭೆಯಲ್ಲಿ (UN Annual Meet) ಭಾಗವಹಿಸಿ ಕನ್ನಡದಲ್ಲಿ ಮಾತನಾಡಿದ್ದರು. ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಮಾಡಿದ ರಿಷಬ್​ಗೆ ಅಭಿನಂದನೆಗಳ ಸುರಿಮಳೆ ಸುರಿತ್ತಿರುವ ಬೆನ್ನಲ್ಲೆ ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಸ್ವಿಟ್ಜರ್​ಲೆಂಡ್​ನಲ್ಲಿ ವಿಶೇಷ ಪ್ರದರ್ಶನಗೊಳ್ಳಲು ಅಣಿಯಾಗಿದೆ. ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ದವರು ‘ಕಾಂತಾರ’ ಸಿನಿಮಾದ ವಿಶೇಷ ಸ್ಕ್ರೀನಿಂಗ್ ಅನ್ನು ಆಯೋಜಿಸಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಇರುವ ಜೆನಿವಾ ಬಳಿಯ ಬಲೆಕ್ಸರ್ಟ್ ಮಾಲ್​ನಲ್ಲಿ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದ್ದು ಕನ್ನಡದಲ್ಲಿಯೇ ಸಿನಿಮಾ ಪ್ರದರ್ಶನಗೊಳ್ಳಲಿದೆ. ಇಂಗ್ಲೀಷ್ ಸಬ್​ಟೈಟಲ್​ಗಳನ್ನು ಸಿನಿಮಾ ಒಳಗೊಂಡಿರಲಿದೆ. ರಿಷಬ್ ಶೆಟ್ಟಿ ಹಾಜರಿಯಲ್ಲಿ ಸಿನಿಮಾದ ಪ್ರದರ್ಶನ ನಡೆಯಲಿದ್ದು, ಸಿನಿಮಾ ಪ್ರದರ್ಶನಕ್ಕೆ ಮುನ್ನ ಕಾರ್ಯಕ್ರಮವನ್ನು ಸಹ ಆಯೋಜನೆ ಮಾಡಲಾಗಿದೆ.

ಈ ವಿಶೇಷ ಪ್ರದರ್ಶನಕ್ಕೆ ಆನ್​ಲೈನ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದ್ದು, ವಿಶ್ವಸಂಸ್ಥೆಯ ಕೆಲವು ಅಧಿಕಾರಿಗಳನ್ನು ಪರ್ಮನೆಂಟ್ ಮಿಷನ್ ಆಫ್ ಇಂಡಿಯಾ ಟು ದಿ ಯುಎನ್ ಹಾಗೂ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ದವರು ಆಹ್ವಾನಿಸಿರುವ ಸಾಧ್ಯತೆ ಇದೆ. ಭಾರತೀಯ ಕಾಲಮಾನ 17 ಮಾರ್ಚ್ 10:30ಗೆ ಸ್ವಿಟ್ಜರ್​ಲೆಂಡ್​ನಲ್ಲಿ ಕಾಂತಾರ ಸಿನಿಮಾ ಪ್ರದರ್ಶನಗೊಳ್ಳಲಿದೆ.

ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನವು ಜಿನೆವಾನಲ್ಲಿ ಆಯೋಜನೆಗೊಂಡಿರುವ ಬಗ್ಗೆ ರಿಷಬ್ ಶೆಟ್ಟಿ ತಮ್ಮ ಟ್ವೀಟ್​ನಲ್ಲಿ ಹಂಚಿಕೊಂಡಿದ್ದು ”ಜಿನೆವಾದಲ್ಲಿ ನಮ್ಮ ಕಾಂತಾರ ಸಿನಿಮಾದ ವಿಶೇಷ ಪ್ರದರ್ಶನ” ಎಂದು ಬರೆದುಕೊಂಡಿದ್ದಾರೆ ಜೊತೆಗೆ ಸಿನಿಮಾದ ವಿಶೇಷ ಪ್ರದರ್ಶನದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ.

ನಿನ್ನೆ (ಮಾರ್ಚ್ 16) ರಂದು ರಿಷಬ್ ಶೆಟ್ಟಿಯವರು ಜಿನೆವಾನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ವಾರ್ಷಿಕ ಸಭೆಯ ಯಲ್ಲಿ ಭಾಗವಹಿಸಿದ್ದರು. ಭಾರತ ಇಕೋಫಾರ್ಮ್ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗವಹಿಸಿದ್ದ ರಿಷಬ್ ಶೆಟ್ಟಿ ಕನ್ನಡದಲ್ಲಿ ಭಾಷಣ ಮಾಡಿದ್ದು ವಿಶೇಷವಾಗಿತ್ತು. ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗವಹಿಸಿದ್ದ ರಿಷಬ್, ”ನಮಸ್ಕಾರ ನಾನು ರಿಷಬ್ ಶೆಟ್ಟಿ. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ಪರಿಸರ ಸ್ವಚ್ಛತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ, ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದು ನನ್ನ ಉದ್ದೇಶ” ಎಂದಿದ್ದರು. ರಿಷಬ್ ಶೆಟ್ಟಿ ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ನೆಟ್ಟಿಗರಿಂದ ಪ್ರಶಂಸೆ ವ್ಯಕ್ತವಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್