AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’: ನಿರಂತರವಾಗಿ 2 ತಿಂಗಳು ಶೂಟ್ ಮಾಡಲಿದ್ದಾರೆ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. 60 ದಿನಗಳ ಚಿತ್ರೀಕರಣದಲ್ಲಿ ಅವರು ಭಾಗಿ ಆಗಲಿದ್ದಾರೆ. 2025ರಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದಲ್ಲಿ ಮೋಹನ್‌ಲಾಲ್ ಅವರ ಪಾತ್ರದ ಬಗ್ಗೆ ವದಂತಿಗಳಿವೆ ಆದರೆ ಇನ್ನೂ ಯಾವುದೇ ಅಧಿಕೃತ ಘೋಷಣೆ ಇಲ್ಲ.

‘ಕಾಂತಾರ: ಚಾಪ್ಟರ್ 1’: ನಿರಂತರವಾಗಿ 2 ತಿಂಗಳು ಶೂಟ್ ಮಾಡಲಿದ್ದಾರೆ ರಿಷಬ್ ಶೆಟ್ಟಿ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Nov 06, 2024 | 11:43 AM

Share

ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್. ಈ ಸಿನಿಮಾ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಕೆಲ ಹಂತದಲ್ಲಿ ಶೂಟಿಂಗ್ ಪೂರ್ಣಗೊಳಿಸಲಾಗಿದೆ. ಈಗ ಮುಂದಿನ 60 ದಿನಗಳ ಕಾಲ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟ್​ನಲ್ಲಿ ರಿಷಬ್ ಬ್ಯುಸಿ ಆಗಲಿದ್ದಾರೆ ಎನ್ನಲಾಗಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಅರ್ಧದಷ್ಟು ಶೂಟ್​ನ ಪೂರ್ಣಗೊಳಿಸಿದ್ದಾರಂತೆ. ಮುಂದಿನ 60 ದಿನಗಳ ಕಾಲ ಅವರು ಆ್ಯಕ್ಷನ್ ಹಾಗೂ ಇತರ ಪ್ರಮುಖ ದೃಶ್ಯಗಳ ಶೂಟ್​ನಲ್ಲಿ ಭಾಗಿ ಆಗಲಿದ್ದಾರಂತೆ. ರಿಷಬ್ ಅವರು ಈಗಾಗಲೇ ಕುದುರೆ ಸವಾರಿ ಹಾಗೂ ಕಳರಿಪಯಟ್ಟು ವಿದ್ಯೆಗಳನ್ನು ಕಲಿತಿದ್ದಾರೆ. ಈ ಮೊದಲು ‘ಕಾಂತಾರ’ ಚಿತ್ರಕ್ಕಾಗಿ ಕೋಣ ಓಡಿಸುವುದನ್ನು ಕಲಿತಿದ್ದರು. ಇದು ಚಿತ್ರದಲ್ಲಿ ಉತ್ತಮವಾಗಿ ಮೂಡಿ ಬಂದಿತ್ತು.

ಕದಂಬರು ಬನವಾಸಿಯನ್ನು ಆಳಿದ್ದರು. ‘ಕಾಂತಾರ: ಚಾಪ್ಟರ್ 1’ ಕದಂಬರ ಕಾಲದಲ್ಲಿ ನಡೆಯುವ ಕಥೆ. ಅಂದರೆ ಇಡೀ ಸಿನಿಮಾ ರೆಟ್ರೋ ಶೈಲಿಯಲ್ಲಿ ಸಾಗಲಿದೆ. 60 ದಿನಗಳ ಬಳಿಕ ತಂಡ ಸಾಂಗ್ ಶೂಟ್​ ನಡೆಸಲಿದೆ. ‘ಕಾಂತಾರ’ ಸಿನಿಮಾದಲ್ಲಿ ಶಿವ ಹಾಗೂ ಪಂಜುರ್ಲಿ ದೈವದ ಕಥೆ ಇತ್ತು. ಪ್ರೀಕ್ವೆಲ್​ನಲ್ಲಿ ಅದು ಹೇಗೆ ಆರಂಭ ಆಯಿತು ಎನ್ನುವ ಬಗ್ಗೆ ಮಾಹಿತಿ ನೀಡೋ ಸಾಧ್ಯತೆ ಇದೆ.

‘ಕಾಂತಾರ: ಚಾಪ್ಟರ್ 1’ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಮೊದಲು ಸಿನಿಮಾದ ಫಸ್ಟ್​ ಪೋಸ್ಟರ್​​ನ ತಂಡ ರಿಲೀಸ್ ಮಾಡಿತ್ತು. ಇದಲ್ಲದೆ, ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಹನುಮಂತನ ಪಾತ್ರ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್, ಕೆಲವರ ಕೊಂಕು, ಹಲವರ ಸ್ವಾಗತ

ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಸೆಟ್​ಗಳನ್ನು ಕುಂದಾಪುರದಲ್ಲಿ ಹಾಕಿದ್ದಾರೆ. ಅವರ ತಂದೆ ಪಾತ್ರದಲ್ಲಿ ಮೋಹನ್​ಲಾಲ್ ನಟಿಸುತ್ತಾರೆ ಎನ್ನುವ ವದಂತಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!