Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’: ನಿರಂತರವಾಗಿ 2 ತಿಂಗಳು ಶೂಟ್ ಮಾಡಲಿದ್ದಾರೆ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. 60 ದಿನಗಳ ಚಿತ್ರೀಕರಣದಲ್ಲಿ ಅವರು ಭಾಗಿ ಆಗಲಿದ್ದಾರೆ. 2025ರಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದಲ್ಲಿ ಮೋಹನ್‌ಲಾಲ್ ಅವರ ಪಾತ್ರದ ಬಗ್ಗೆ ವದಂತಿಗಳಿವೆ ಆದರೆ ಇನ್ನೂ ಯಾವುದೇ ಅಧಿಕೃತ ಘೋಷಣೆ ಇಲ್ಲ.

‘ಕಾಂತಾರ: ಚಾಪ್ಟರ್ 1’: ನಿರಂತರವಾಗಿ 2 ತಿಂಗಳು ಶೂಟ್ ಮಾಡಲಿದ್ದಾರೆ ರಿಷಬ್ ಶೆಟ್ಟಿ
ರಿಷಬ್
Follow us
ರಾಜೇಶ್ ದುಗ್ಗುಮನೆ
|

Updated on: Nov 06, 2024 | 11:43 AM

ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್. ಈ ಸಿನಿಮಾ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಕೆಲ ಹಂತದಲ್ಲಿ ಶೂಟಿಂಗ್ ಪೂರ್ಣಗೊಳಿಸಲಾಗಿದೆ. ಈಗ ಮುಂದಿನ 60 ದಿನಗಳ ಕಾಲ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟ್​ನಲ್ಲಿ ರಿಷಬ್ ಬ್ಯುಸಿ ಆಗಲಿದ್ದಾರೆ ಎನ್ನಲಾಗಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಅರ್ಧದಷ್ಟು ಶೂಟ್​ನ ಪೂರ್ಣಗೊಳಿಸಿದ್ದಾರಂತೆ. ಮುಂದಿನ 60 ದಿನಗಳ ಕಾಲ ಅವರು ಆ್ಯಕ್ಷನ್ ಹಾಗೂ ಇತರ ಪ್ರಮುಖ ದೃಶ್ಯಗಳ ಶೂಟ್​ನಲ್ಲಿ ಭಾಗಿ ಆಗಲಿದ್ದಾರಂತೆ. ರಿಷಬ್ ಅವರು ಈಗಾಗಲೇ ಕುದುರೆ ಸವಾರಿ ಹಾಗೂ ಕಳರಿಪಯಟ್ಟು ವಿದ್ಯೆಗಳನ್ನು ಕಲಿತಿದ್ದಾರೆ. ಈ ಮೊದಲು ‘ಕಾಂತಾರ’ ಚಿತ್ರಕ್ಕಾಗಿ ಕೋಣ ಓಡಿಸುವುದನ್ನು ಕಲಿತಿದ್ದರು. ಇದು ಚಿತ್ರದಲ್ಲಿ ಉತ್ತಮವಾಗಿ ಮೂಡಿ ಬಂದಿತ್ತು.

ಕದಂಬರು ಬನವಾಸಿಯನ್ನು ಆಳಿದ್ದರು. ‘ಕಾಂತಾರ: ಚಾಪ್ಟರ್ 1’ ಕದಂಬರ ಕಾಲದಲ್ಲಿ ನಡೆಯುವ ಕಥೆ. ಅಂದರೆ ಇಡೀ ಸಿನಿಮಾ ರೆಟ್ರೋ ಶೈಲಿಯಲ್ಲಿ ಸಾಗಲಿದೆ. 60 ದಿನಗಳ ಬಳಿಕ ತಂಡ ಸಾಂಗ್ ಶೂಟ್​ ನಡೆಸಲಿದೆ. ‘ಕಾಂತಾರ’ ಸಿನಿಮಾದಲ್ಲಿ ಶಿವ ಹಾಗೂ ಪಂಜುರ್ಲಿ ದೈವದ ಕಥೆ ಇತ್ತು. ಪ್ರೀಕ್ವೆಲ್​ನಲ್ಲಿ ಅದು ಹೇಗೆ ಆರಂಭ ಆಯಿತು ಎನ್ನುವ ಬಗ್ಗೆ ಮಾಹಿತಿ ನೀಡೋ ಸಾಧ್ಯತೆ ಇದೆ.

‘ಕಾಂತಾರ: ಚಾಪ್ಟರ್ 1’ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಮೊದಲು ಸಿನಿಮಾದ ಫಸ್ಟ್​ ಪೋಸ್ಟರ್​​ನ ತಂಡ ರಿಲೀಸ್ ಮಾಡಿತ್ತು. ಇದಲ್ಲದೆ, ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಹನುಮಂತನ ಪಾತ್ರ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್, ಕೆಲವರ ಕೊಂಕು, ಹಲವರ ಸ್ವಾಗತ

ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಸೆಟ್​ಗಳನ್ನು ಕುಂದಾಪುರದಲ್ಲಿ ಹಾಕಿದ್ದಾರೆ. ಅವರ ತಂದೆ ಪಾತ್ರದಲ್ಲಿ ಮೋಹನ್​ಲಾಲ್ ನಟಿಸುತ್ತಾರೆ ಎನ್ನುವ ವದಂತಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ