AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’: ನಿರಂತರವಾಗಿ 2 ತಿಂಗಳು ಶೂಟ್ ಮಾಡಲಿದ್ದಾರೆ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. 60 ದಿನಗಳ ಚಿತ್ರೀಕರಣದಲ್ಲಿ ಅವರು ಭಾಗಿ ಆಗಲಿದ್ದಾರೆ. 2025ರಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದಲ್ಲಿ ಮೋಹನ್‌ಲಾಲ್ ಅವರ ಪಾತ್ರದ ಬಗ್ಗೆ ವದಂತಿಗಳಿವೆ ಆದರೆ ಇನ್ನೂ ಯಾವುದೇ ಅಧಿಕೃತ ಘೋಷಣೆ ಇಲ್ಲ.

‘ಕಾಂತಾರ: ಚಾಪ್ಟರ್ 1’: ನಿರಂತರವಾಗಿ 2 ತಿಂಗಳು ಶೂಟ್ ಮಾಡಲಿದ್ದಾರೆ ರಿಷಬ್ ಶೆಟ್ಟಿ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Nov 06, 2024 | 11:43 AM

Share

ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದು ‘ಕಾಂತಾರ’ ಚಿತ್ರದ ಪ್ರೀಕ್ವೆಲ್. ಈ ಸಿನಿಮಾ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಕೆಲ ಹಂತದಲ್ಲಿ ಶೂಟಿಂಗ್ ಪೂರ್ಣಗೊಳಿಸಲಾಗಿದೆ. ಈಗ ಮುಂದಿನ 60 ದಿನಗಳ ಕಾಲ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟ್​ನಲ್ಲಿ ರಿಷಬ್ ಬ್ಯುಸಿ ಆಗಲಿದ್ದಾರೆ ಎನ್ನಲಾಗಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಅರ್ಧದಷ್ಟು ಶೂಟ್​ನ ಪೂರ್ಣಗೊಳಿಸಿದ್ದಾರಂತೆ. ಮುಂದಿನ 60 ದಿನಗಳ ಕಾಲ ಅವರು ಆ್ಯಕ್ಷನ್ ಹಾಗೂ ಇತರ ಪ್ರಮುಖ ದೃಶ್ಯಗಳ ಶೂಟ್​ನಲ್ಲಿ ಭಾಗಿ ಆಗಲಿದ್ದಾರಂತೆ. ರಿಷಬ್ ಅವರು ಈಗಾಗಲೇ ಕುದುರೆ ಸವಾರಿ ಹಾಗೂ ಕಳರಿಪಯಟ್ಟು ವಿದ್ಯೆಗಳನ್ನು ಕಲಿತಿದ್ದಾರೆ. ಈ ಮೊದಲು ‘ಕಾಂತಾರ’ ಚಿತ್ರಕ್ಕಾಗಿ ಕೋಣ ಓಡಿಸುವುದನ್ನು ಕಲಿತಿದ್ದರು. ಇದು ಚಿತ್ರದಲ್ಲಿ ಉತ್ತಮವಾಗಿ ಮೂಡಿ ಬಂದಿತ್ತು.

ಕದಂಬರು ಬನವಾಸಿಯನ್ನು ಆಳಿದ್ದರು. ‘ಕಾಂತಾರ: ಚಾಪ್ಟರ್ 1’ ಕದಂಬರ ಕಾಲದಲ್ಲಿ ನಡೆಯುವ ಕಥೆ. ಅಂದರೆ ಇಡೀ ಸಿನಿಮಾ ರೆಟ್ರೋ ಶೈಲಿಯಲ್ಲಿ ಸಾಗಲಿದೆ. 60 ದಿನಗಳ ಬಳಿಕ ತಂಡ ಸಾಂಗ್ ಶೂಟ್​ ನಡೆಸಲಿದೆ. ‘ಕಾಂತಾರ’ ಸಿನಿಮಾದಲ್ಲಿ ಶಿವ ಹಾಗೂ ಪಂಜುರ್ಲಿ ದೈವದ ಕಥೆ ಇತ್ತು. ಪ್ರೀಕ್ವೆಲ್​ನಲ್ಲಿ ಅದು ಹೇಗೆ ಆರಂಭ ಆಯಿತು ಎನ್ನುವ ಬಗ್ಗೆ ಮಾಹಿತಿ ನೀಡೋ ಸಾಧ್ಯತೆ ಇದೆ.

‘ಕಾಂತಾರ: ಚಾಪ್ಟರ್ 1’ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಮೊದಲು ಸಿನಿಮಾದ ಫಸ್ಟ್​ ಪೋಸ್ಟರ್​​ನ ತಂಡ ರಿಲೀಸ್ ಮಾಡಿತ್ತು. ಇದಲ್ಲದೆ, ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಹನುಮಂತನ ಪಾತ್ರ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್, ಕೆಲವರ ಕೊಂಕು, ಹಲವರ ಸ್ವಾಗತ

ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಸೆಟ್​ಗಳನ್ನು ಕುಂದಾಪುರದಲ್ಲಿ ಹಾಕಿದ್ದಾರೆ. ಅವರ ತಂದೆ ಪಾತ್ರದಲ್ಲಿ ಮೋಹನ್​ಲಾಲ್ ನಟಿಸುತ್ತಾರೆ ಎನ್ನುವ ವದಂತಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!