AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಸರ್​ ಮೂಲಕ ಗಮನ ಸೆಳೆದ ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’; ಹೊಂಬಾಳೆ ಫಿಲ್ಮ್ಸ್​ ಪ್ರಯತ್ನಕ್ಕೆ ಸಿಕ್ತು ಮೆಚ್ಚುಗೆ

ಭಿನ್ನ ರೀತಿಯ ಚಿತ್ರಗಳನ್ನು ತೆರೆಗೆ ತರೋಕೆ ವಿಜಯ್ ಕಿರಗಂದೂರು ಅವರು ಪ್ರಯತ್ನಿಸುತ್ತಿದ್ದಾರೆ. ಅವರ ಈ ಪ್ರಯತ್ನ ಎಷ್ಟು ಭಿನ್ನವಾದುದು ಎಂಬುದಕ್ಕೆ ‘ಕಾಂತಾರ’ ಹಾಗೂ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದ ಟೀಸರ್​ಗಳೇ ಸಾಕ್ಷಿ.

ಟೀಸರ್​ ಮೂಲಕ ಗಮನ ಸೆಳೆದ ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’; ಹೊಂಬಾಳೆ ಫಿಲ್ಮ್ಸ್​ ಪ್ರಯತ್ನಕ್ಕೆ ಸಿಕ್ತು ಮೆಚ್ಚುಗೆ
ರಿಷಬ್-ಜಗ್ಗೇಶ್
TV9 Web
| Edited By: |

Updated on:Apr 14, 2022 | 3:32 PM

Share

‘ಹೊಂಬಾಳೆ ಫಿಲ್ಮ್ಸ್​’ ಸಿನಿ (Hombale Fimls) ಪ್ರಿಯರಿಗೆ ಮತ್ತೆ ರಸದೌತಣ ಬಡಿಸಲು ರೆಡಿ ಆಗಿದೆ. ‘ಕೆಜಿಎಫ್ ಚಾಪ್ಟರ್​ 2’ (KGF Chapter 2) ಚಿತ್ರದ ಮೂಲಕ ಹೊಸ ಇತಿಹಾಸ ಬರೆಯುತ್ತಿರುವ ಈ ಸಿನಿಮಾ ನಿರ್ಮಾಣ ಸಂಸ್ಥೆ, ಮತ್ತಷ್ಟು ಹೊಸಹೊಸ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದೆ. ಭಿನ್ನ ರೀತಿಯ ಚಿತ್ರಗಳನ್ನು ತೆರೆಗೆ ತರೋಕೆ ವಿಜಯ್ ಕಿರಗಂದೂರು ಅವರು ಪ್ರಯತ್ನಿಸುತ್ತಿದ್ದಾರೆ. ಅವರ ಈ ಪ್ರಯತ್ನ ಎಷ್ಟು ಭಿನ್ನವಾದುದು ಎಂಬುದಕ್ಕೆ ‘ಕಾಂತಾರ’ (Kanatara Movie)ಹಾಗೂ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾದ ಟೀಸರ್​ಗಳೇ ಸಾಕ್ಷಿ. ‘ಕೆಜಿಎಫ್ 2’ ರಿಲೀಸ್​ಗೂ ಮುನ್ನ ಈ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಎರಡೂ ಟೀಸರ್​ಗಳು ‘ಕೆಜಿಎಫ್​ 2’ ಸಿನಿಮಾ ಜತೆ ಅಟ್ಯಾಚ್​ ಆಗಿ ಪ್ರದರ್ಶನ ಕಾಣಲಿವೆ.

‘ಕಾಂತಾರ’

‘ಕಾಂತಾರ’ ಇದೊಂದು ಹಳ್ಳಿಯಲ್ಲಿ ನಡೆಯುವ, ಹಳ್ಳಿಯ ಜನರ ನಂಬಿಕೆಯ ಕಥೆ. ಹಳ್ಳಿಯ ಆಚರಣೆಗಳನ್ನು ಮಾಡುತ್ತಾ, ಕಾಡನ್ನೇ ನಂಬಿ ಜೀವನ ನಡೆಸುವ ಒಂದು ತಂಡ. ಆ ಊರಿಗೆ ಹೊಸ ಫಾರೆಸ್ಟ್​ ಅಧಿಕಾರಿಯ ಆಗಮನವಾಗುತ್ತದೆ. ಏನೇ ನಡೆಯಬೇಕಿದ್ದರೂ ತನ್ನ ಅನುಮತಿ ಪಡೆಯಬೇಕು ಎನ್ನುವ ಆಜ್ಞೆಯನ್ನು ಆತ ಹೊರಡಿಸುತ್ತಾನೆ. ಅಲ್ಲಿಂದ ತಿಕ್ಕಾಟ ಶುರು. ಈ ಟೀಸರ್​ನಲ್ಲಿ ಹಲವು ವಿಚಾರಗಳನ್ನು ತೋರಿಸಲಾಗಿದೆ. ಕಂಬಳ, ಕಾಡಿನ ಜನರ ನಂಬಿಕೆ, ಅಧಿಕಾರಿಯ ದರ್ಪವನ್ನು ತೋರಿಸಲಾಗಿದೆ. ರಿಷಬ್ ಶೆಟ್ಟಿ ಅವರು ಹೀರೋ ಆಗಿ ಮಿಂಚಿದ್ದಾರೆ. ಫಾರೆಸ್ಟ್​ ಅಧಿಕಾರಿಯಾಗಿ ಕಿಶೋರ್ ಗಮನ ಸೆಳೆಯುತ್ತಾರೆ.

ರಿಷನ್ ಶೆಟ್ಟಿ ಅವರು ನಿರ್ದೇಶನದ ವಿಚಾರದಲ್ಲಿ ಸಾಕಷ್ಟು ಪಳಗಿದ್ದಾರೆ. ಒಂದು ಸಿನಿಮಾದಿಂದ ಮತ್ತೊಂದು ಸಿನಿಮಾಗೆ ಭಿನ್ನ ಕಥೆ ಹೇಳುತ್ತಾರೆ. ಈ ಬಾರಿ ‘ಕಾಂತಾರ’ ಮೂಲಕ ಬರುತ್ತಿದ್ದಾರೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡುತ್ತಿದೆ. ಇದೇ ವರ್ಷ ಚಿತ್ರ ತೆರೆಗೆ ಬರುತ್ತಿದೆ.

‘ರಾಘವೇಂದ್ರ ಸ್ಟೋರ್ಸ್​’

‘ರಾಘವೇಂದ್ರ ಸ್ಟೋರ್ಸ್​ ’ ಸಿನಿಮಾ ಮೂಲಕ ನಟ ಜಗ್ಗೇಶ್ ಹಾಗೂ ನಿರ್ದೇಶಕ ಸಂತೋಷ್ ಆನಂದ್​ರಾಮ್​ ಮೊದಲ ಬಾರಿಗೆ ಒಂದಾಗಿದ್ದಾರೆ. ಇದು ಔಟ್​ ಆ್ಯಂಡ್ ಔಟ್ ಕಾಮಿಡಿ ಸಿನಿಮಾ ಅನ್ನೋದಕ್ಕೆ ಟೀಸರ್ ಸಾಕ್ಷ್ಯ ನೀಡಿದೆ. ಟೀಸರ್​ನಲ್ಲಿ ಹಲವು ಪಂಚಿಂಗ್​ ಹಾಗೂ ಡಬ್ಬಲ್ ಮೀನಿಂಗ್​ ಡೈಲಾಗ್​ಗಳು ಇವೆ. 40 ವರ್ಷವಾದರೂ ಮದುವೆ ಆಗದೆ ಇರುವ ಬಾಣಸಿಗನ ಪಾತ್ರದಲ್ಲಿ ಜಗ್ಗೇಶ್​ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: KGF Chapter 2 Leak: ಯಶ್ ನಟನೆಯ ಚಿತ್ರಕ್ಕೆ ಪೈರಸಿ ಸಮಸ್ಯೆ; ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ‘ಕೆಜಿಎಫ್ 2’ ಲೀಕ್

KGF Chapter 2 Review: ಕೆಜಿಎಫ್​ ಚಾಪ್ಟರ್​ 2 ವಿಮರ್ಶೆ; ಪ್ರಶಾಂತ್ ನೀಲ್ ಕೈಚಳಕ, ಯಶ್ ಫ್ಯಾನ್ಸ್​ಗೆ ಧಮಾಕ

Published On - 1:49 pm, Thu, 14 April 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ