AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಹೇಳಿಕೆ ತಿರುಚಲಾಗಿದೆ’; ಬಾಲಿವುಡ್ ಟೀಕೆ ಬಗ್ಗೆ ರಿಷಬ್ ಶೆಟ್ಟಿ ಸ್ಪಷ್ಟನೆ

ಬಾಲಿವುಡ್​ನವರು ಸಿನಿಮಾ ಮಾಡುವುದಕ್ಕೂ ದಕ್ಷಿಣ ಭಾರತದವರು ಸಿನಿಮಾ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ರಿಷಬ್ ಶೆಟ್ಟಿ ಅವರು ಈ ಬಗ್ಗೆ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ.

‘ನನ್ನ ಹೇಳಿಕೆ ತಿರುಚಲಾಗಿದೆ’; ಬಾಲಿವುಡ್ ಟೀಕೆ ಬಗ್ಗೆ ರಿಷಬ್ ಶೆಟ್ಟಿ ಸ್ಪಷ್ಟನೆ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Sep 28, 2024 | 7:23 AM

Share

ನಟ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ‘ಬಾಲಿವುಡ್​ ಸಿನಿಮಾಗಳು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಿಗೆ ಆಯ್ಕೆ ಆಗುತ್ತವೆ. ಆದರೆ, ಅಲ್ಲಿ ಭಾರತದವನ್ನು ಕೆಟ್ಟದಾಗಿ ತೋರಿಸಿವೆ’ ಎಂದು ಹೇಳಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬಗ್ಗೆ ರಿಷಬ್ ಶೆಟ್ಟಿ ಅವರು ಈಗ ಸ್ಪಷ್ಟನೆ ಒಂದನ್ನು ನೀಡಿದ್ದಾರೆ.

ರಿಷಬ್ ಶೆಟ್ಟಿ ಹೇಳಿದ್ದು ಏನು?

ಮೆಟ್ರೋ ಸಾಗಾ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ರಿಷಬ್ ಶೆಟ್ಟಿ ಅವರು, ‘ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಸಿನಿಮಾಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ. ಇದೇ ಸಿನಿಮಾ ಆರ್ಟ್ಸ್​ ಎಂದುಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್​ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ, ನನ್ನ ರಾಜ್ಯ ನನ್ನ ಹೆಮ್ಮೆ, ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರೋದನ್ನು ಪಾಸಿಟಿವ್ ನೋಟ್​ನಲ್ಲಿ ತೋರಿಸಬಹುದಲ್ಲ’ ಎಂದಿದ್ದರು ರಿಷಬ್.

ಈಗ ಹೇಳಿದ್ದು ಏನು?

ಐಐಎಫ್​ಎ 2024 ಕಾರ್ಯಕ್ರಮದಲ್ಲಿ ಭಾಗಿ ಆದ ರಿಷಬ್​ಗೆ ಈ ಬಗ್ಗೆ ಕೇಳಲಾಗಿದೆ. ಅವರು ಇದಕ್ಕೆ ಉತ್ತರ ನೀಡಿದ್ದಾರೆ. ‘ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಶೀಘ್ರವೇ ನಾನು ಈ ಬಗ್ಗೆ ಸ್ಪಷ್ಟನೆ ಅಥವಾ ವಿವರಣೆ ನೀಡುವೆ’ ಎಂದಿದ್ದಾರೆ.

‘ಐಐಎಫ್​ಎ ಅವಾರ್ಡ್ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿಗೆ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಅವಾರ್ಡ್ ನೀಡಿ ಗೌರವಿಸಲಾಗಿದೆ. ಅವರಿಗೆ ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ‘ಕಾಂತಾರ’ ಸಿನಿಮಾದ ನಟನೆಗ ಈ ಅವಾರ್ಡ್ ಕೊಟ್ಟು ಗೌರವಿಸಲಾಗಿದೆ.

ಇದನ್ನೂ ಓದಿ: ರಿಷಬ್​ನ ತಮ್ಮ ಎಂದು ಕರೆದ ಸುದೀಪ್; ಕಿಚ್ಚನ ಮಾತಿಗೊಂದು ಅರ್ಥವಿದೆ..

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಬಳಿಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ಕದಂಬರ ಕಾಲದ ಕಥೆ ಹೇಳುತ್ತಿದ್ದಾರೆ. ಅವರು ಪಂಜುರ್ಲಿ ದೈವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಮೊದಲ ಭಾಗ ಹಾಡುಗಳು ಸೂಪರ್ ಹಿಟ್ ಆಗಿವೆ. ಎರಡನೇ ಭಾಗದಲ್ಲೂ ಹಾಗೆಯೇ ಇರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ