‘ನನ್ನ ಹೇಳಿಕೆ ತಿರುಚಲಾಗಿದೆ’; ಬಾಲಿವುಡ್ ಟೀಕೆ ಬಗ್ಗೆ ರಿಷಬ್ ಶೆಟ್ಟಿ ಸ್ಪಷ್ಟನೆ

ಬಾಲಿವುಡ್​ನವರು ಸಿನಿಮಾ ಮಾಡುವುದಕ್ಕೂ ದಕ್ಷಿಣ ಭಾರತದವರು ಸಿನಿಮಾ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ರಿಷಬ್ ಶೆಟ್ಟಿ ಅವರು ಈ ಬಗ್ಗೆ ಮಾತನಾಡಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ.

‘ನನ್ನ ಹೇಳಿಕೆ ತಿರುಚಲಾಗಿದೆ’; ಬಾಲಿವುಡ್ ಟೀಕೆ ಬಗ್ಗೆ ರಿಷಬ್ ಶೆಟ್ಟಿ ಸ್ಪಷ್ಟನೆ
ರಿಷಬ್

Updated on: Sep 28, 2024 | 7:23 AM

ನಟ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ‘ಬಾಲಿವುಡ್​ ಸಿನಿಮಾಗಳು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಿಗೆ ಆಯ್ಕೆ ಆಗುತ್ತವೆ. ಆದರೆ, ಅಲ್ಲಿ ಭಾರತದವನ್ನು ಕೆಟ್ಟದಾಗಿ ತೋರಿಸಿವೆ’ ಎಂದು ಹೇಳಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬಗ್ಗೆ ರಿಷಬ್ ಶೆಟ್ಟಿ ಅವರು ಈಗ ಸ್ಪಷ್ಟನೆ ಒಂದನ್ನು ನೀಡಿದ್ದಾರೆ.

ರಿಷಬ್ ಶೆಟ್ಟಿ ಹೇಳಿದ್ದು ಏನು?

ಮೆಟ್ರೋ ಸಾಗಾ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ರಿಷಬ್ ಶೆಟ್ಟಿ ಅವರು, ‘ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಸಿನಿಮಾಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ. ಇದೇ ಸಿನಿಮಾ ಆರ್ಟ್ಸ್​ ಎಂದುಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್​ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ, ನನ್ನ ರಾಜ್ಯ ನನ್ನ ಹೆಮ್ಮೆ, ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರೋದನ್ನು ಪಾಸಿಟಿವ್ ನೋಟ್​ನಲ್ಲಿ ತೋರಿಸಬಹುದಲ್ಲ’ ಎಂದಿದ್ದರು ರಿಷಬ್.

ಈಗ ಹೇಳಿದ್ದು ಏನು?

ಐಐಎಫ್​ಎ 2024 ಕಾರ್ಯಕ್ರಮದಲ್ಲಿ ಭಾಗಿ ಆದ ರಿಷಬ್​ಗೆ ಈ ಬಗ್ಗೆ ಕೇಳಲಾಗಿದೆ. ಅವರು ಇದಕ್ಕೆ ಉತ್ತರ ನೀಡಿದ್ದಾರೆ. ‘ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಶೀಘ್ರವೇ ನಾನು ಈ ಬಗ್ಗೆ ಸ್ಪಷ್ಟನೆ ಅಥವಾ ವಿವರಣೆ ನೀಡುವೆ’ ಎಂದಿದ್ದಾರೆ.

‘ಐಐಎಫ್​ಎ ಅವಾರ್ಡ್ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿಗೆ ‘ಔಟ್​ಸ್ಟ್ಯಾಂಡಿಂಗ್ ಎಕ್ಸಲೆನ್ಸ್ ಇನ್ ಕನ್ನಡ ಸಿನಿಮಾ’ ಅವಾರ್ಡ್ ನೀಡಿ ಗೌರವಿಸಲಾಗಿದೆ. ಅವರಿಗೆ ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ‘ಕಾಂತಾರ’ ಸಿನಿಮಾದ ನಟನೆಗ ಈ ಅವಾರ್ಡ್ ಕೊಟ್ಟು ಗೌರವಿಸಲಾಗಿದೆ.

ಇದನ್ನೂ ಓದಿ: ರಿಷಬ್​ನ ತಮ್ಮ ಎಂದು ಕರೆದ ಸುದೀಪ್; ಕಿಚ್ಚನ ಮಾತಿಗೊಂದು ಅರ್ಥವಿದೆ..

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಬಳಿಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ಕದಂಬರ ಕಾಲದ ಕಥೆ ಹೇಳುತ್ತಿದ್ದಾರೆ. ಅವರು ಪಂಜುರ್ಲಿ ದೈವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಮೊದಲ ಭಾಗ ಹಾಡುಗಳು ಸೂಪರ್ ಹಿಟ್ ಆಗಿವೆ. ಎರಡನೇ ಭಾಗದಲ್ಲೂ ಹಾಗೆಯೇ ಇರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us