AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಿ ನಟನೆಯ ಹೊಸ ಸಿನಿಮಾ ‘ಮಂಗಳಾಪುರಂ’; ಕುತೂಹಲ ಮೂಡಿಸಿದ ಫಸ್ಟ್ ಲುಕ್

ನಟ ರಿಷಿ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಸಿನಿಮಾಗೆ ‘ಮಂಗಳಾಪುರಂ’ ಎಂದು ಟೈಟಲ್ ಇಡಲಾಗಿದೆ. ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾದಲ್ಲಿ ರಿಷಿ ಜೊತೆ ಅಭಿಮನ್ಯು ಕಾಶಿನಾಥ್ ಕೂಡ ಅಭಿನಯಿಸುತ್ತಿದ್ದಾರೆ. ಜೂನ್​ನಲ್ಲಿ ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ.

ರಿಷಿ ನಟನೆಯ ಹೊಸ ಸಿನಿಮಾ ‘ಮಂಗಳಾಪುರಂ’; ಕುತೂಹಲ ಮೂಡಿಸಿದ ಫಸ್ಟ್ ಲುಕ್
Rishi
Follow us
ಮದನ್​ ಕುಮಾರ್​
|

Updated on: Apr 21, 2025 | 4:14 PM

‘ಆಪರೇಷನ್ ಅಲಮೇಲಮ್ಮ’, ‘ಕವಲುದಾರಿ’ ಮುಂತಾದ ಸಿನಿಮಾಗಳ ಮೂಲಕ ಹೆಸರು ಮಾಡಿದ ನಟ ರಿಷಿ (Rishi) ಅವರು ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸದ್ಯ ಅವರು ಒಂದಷ್ಟು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡ (Kannada Cinema) ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ರಿಷಿ ಅವರಿಗೆ ಬೇಡಿಕೆ ಇದೆ. ಈ ನಡುವೆ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಮಂಗಳಾಪುರಂ’ (Mangalapuram) ಎಂಬುದು ಈ ಸಿನಿಮಾದ ಶೀರ್ಷಿಕೆ. ಈಗ ಈ ಚಿತ್ರದ ಫಸ್ಟ್​ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

‘ಮಂಗಳಾಪುರಂ’ ಪೋಸ್ಟರ್ ನೋಡಿದ ಸಿನಿಪ್ರಿಯರಿಗೆ ಕುತೂಹಲ ಹೆಚ್ಚಾಗಿದೆ. ಈ ಸಿನಿಮಾಗಾಗಿ ರಿಷಿ ಅವರು ಮಂಗಳೂರು ಮೂಲದ ಹೊಸ ಟೀಮ್ ಜೊತೆ ಕೈ ಜೋಡಿಸಿದ್ದಾರೆ. ಈ ಮೊದಲು ತುಳು ಭಾಷೆಯಲ್ಲಿ ‘ಉಮಿಲ್’ ಮತ್ತು ‘ದೊಂಬರಾಟ’ ಸಿನಿಮಾಗಳಿಗೆ ಆ್ಯಕ್ಷನ್-ಕಟ್ ಹೇಳಿ ಯಶಸ್ಸು ಕಂಡಿರುವ ರಂಜಿತ್ ರಾವ್ ಸುವರ್ಣ ಅವರು ಈಗ ‘ಮಂಗಳಾಪುರಂ’ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ.

ಟೈಟಲ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ‘ಮಂಗಳಾಪುರಂ’ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಅಂದಹಾಗೆ, ಈ ಸಿನಿಮಾದಲ್ಲಿ ರಿಷಿ ಜೊತೆಗೆ ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಕೂಡ ನಟಿಸುತ್ತಾರೆ ಎಂಬುದು ವಿಶೇಷ. ಇದೇ ಮೊದಲ ಬಾರಿಗೆ ಈ ನಟರಿಬ್ಬರು ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ. ಆ ಕಾರಣದಿಂದಲೂ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಈ ಸಿನಿಮಾದಲ್ಲಿ ಮರ್ಡರ್ ಮಿಸ್ಟರಿ ಕಹಾನಿ ಇರಲಿದೆ. ಅಷ್ಟೇ ಅಲ್ಲದೇ ನಂಬಿಕೆ-ಮೂಢನಂಬಿಕೆ, ಕೈವಾಡ-ಪವಾಡ ಮುಂತಾದ ವಿಷಯಗಳ ಕುರಿತು ಸಿನಿಮಾದಲ್ಲಿ ತೋರಿಸಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ. ವಿದ್ವಾನ್ ಪ್ರಸನ್ನ ತಂತ್ರಿ ಮೂಡುಬಿದ್ರೆ ಮತ್ತು ರಾಮ್ ಪ್ರಸಾದ್ ಅವರು ‘ಮಂಗಳಾಪುರಂ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣದಲ್ಲಿ ಇದು ಅವರ ಚೊಚ್ಚಲ ಪ್ರಯತ್ನ.

ಇದನ್ನೂ ಓದಿ: ‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ ಬಳಿಕ ಯಶ್ ಮಾತು

ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ‘ಮಂಗಳಪುರಂ’ ಸಿನಿಮಾಗೆ ಜೂನ್ ತಿಂಗಳಲ್ಲಿ ಶೂಟಿಂಗ್ ಆರಂಭ ಆಗಲಿದೆ. ತೀರ್ಥಹಳ್ಳಿ‌, ಕಾರ್ಕಳ, ಮಡಿಕೇರಿ, ಬೆಂಗಳೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ಈ ಸಿನಿಮಾಗೆ ಅನೂಪ್ ಸಿಳೀನ್ ಅವರು ಸಂಗೀತ ನೀಡಲಿದ್ದಾರೆ. ಅಭಿಷೇಕ್ ಕಾಸರಗೋಡು ಅವರು ಛಾಯಾಗ್ರಹಣ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ