AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಿ ನಟನೆಯ ಹೊಸ ಸಿನಿಮಾ ‘ಮಂಗಳಾಪುರಂ’; ಕುತೂಹಲ ಮೂಡಿಸಿದ ಫಸ್ಟ್ ಲುಕ್

ನಟ ರಿಷಿ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಸಿನಿಮಾಗೆ ‘ಮಂಗಳಾಪುರಂ’ ಎಂದು ಟೈಟಲ್ ಇಡಲಾಗಿದೆ. ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾದಲ್ಲಿ ರಿಷಿ ಜೊತೆ ಅಭಿಮನ್ಯು ಕಾಶಿನಾಥ್ ಕೂಡ ಅಭಿನಯಿಸುತ್ತಿದ್ದಾರೆ. ಜೂನ್​ನಲ್ಲಿ ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ.

ರಿಷಿ ನಟನೆಯ ಹೊಸ ಸಿನಿಮಾ ‘ಮಂಗಳಾಪುರಂ’; ಕುತೂಹಲ ಮೂಡಿಸಿದ ಫಸ್ಟ್ ಲುಕ್
Rishi
ಮದನ್​ ಕುಮಾರ್​
|

Updated on: Apr 21, 2025 | 4:14 PM

Share

‘ಆಪರೇಷನ್ ಅಲಮೇಲಮ್ಮ’, ‘ಕವಲುದಾರಿ’ ಮುಂತಾದ ಸಿನಿಮಾಗಳ ಮೂಲಕ ಹೆಸರು ಮಾಡಿದ ನಟ ರಿಷಿ (Rishi) ಅವರು ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸದ್ಯ ಅವರು ಒಂದಷ್ಟು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡ (Kannada Cinema) ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ರಿಷಿ ಅವರಿಗೆ ಬೇಡಿಕೆ ಇದೆ. ಈ ನಡುವೆ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಮಂಗಳಾಪುರಂ’ (Mangalapuram) ಎಂಬುದು ಈ ಸಿನಿಮಾದ ಶೀರ್ಷಿಕೆ. ಈಗ ಈ ಚಿತ್ರದ ಫಸ್ಟ್​ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

‘ಮಂಗಳಾಪುರಂ’ ಪೋಸ್ಟರ್ ನೋಡಿದ ಸಿನಿಪ್ರಿಯರಿಗೆ ಕುತೂಹಲ ಹೆಚ್ಚಾಗಿದೆ. ಈ ಸಿನಿಮಾಗಾಗಿ ರಿಷಿ ಅವರು ಮಂಗಳೂರು ಮೂಲದ ಹೊಸ ಟೀಮ್ ಜೊತೆ ಕೈ ಜೋಡಿಸಿದ್ದಾರೆ. ಈ ಮೊದಲು ತುಳು ಭಾಷೆಯಲ್ಲಿ ‘ಉಮಿಲ್’ ಮತ್ತು ‘ದೊಂಬರಾಟ’ ಸಿನಿಮಾಗಳಿಗೆ ಆ್ಯಕ್ಷನ್-ಕಟ್ ಹೇಳಿ ಯಶಸ್ಸು ಕಂಡಿರುವ ರಂಜಿತ್ ರಾವ್ ಸುವರ್ಣ ಅವರು ಈಗ ‘ಮಂಗಳಾಪುರಂ’ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ.

ಟೈಟಲ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ‘ಮಂಗಳಾಪುರಂ’ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಅಂದಹಾಗೆ, ಈ ಸಿನಿಮಾದಲ್ಲಿ ರಿಷಿ ಜೊತೆಗೆ ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಕೂಡ ನಟಿಸುತ್ತಾರೆ ಎಂಬುದು ವಿಶೇಷ. ಇದೇ ಮೊದಲ ಬಾರಿಗೆ ಈ ನಟರಿಬ್ಬರು ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ. ಆ ಕಾರಣದಿಂದಲೂ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಈ ಸಿನಿಮಾದಲ್ಲಿ ಮರ್ಡರ್ ಮಿಸ್ಟರಿ ಕಹಾನಿ ಇರಲಿದೆ. ಅಷ್ಟೇ ಅಲ್ಲದೇ ನಂಬಿಕೆ-ಮೂಢನಂಬಿಕೆ, ಕೈವಾಡ-ಪವಾಡ ಮುಂತಾದ ವಿಷಯಗಳ ಕುರಿತು ಸಿನಿಮಾದಲ್ಲಿ ತೋರಿಸಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ. ವಿದ್ವಾನ್ ಪ್ರಸನ್ನ ತಂತ್ರಿ ಮೂಡುಬಿದ್ರೆ ಮತ್ತು ರಾಮ್ ಪ್ರಸಾದ್ ಅವರು ‘ಮಂಗಳಾಪುರಂ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣದಲ್ಲಿ ಇದು ಅವರ ಚೊಚ್ಚಲ ಪ್ರಯತ್ನ.

ಇದನ್ನೂ ಓದಿ: ‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ ಬಳಿಕ ಯಶ್ ಮಾತು

ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ‘ಮಂಗಳಪುರಂ’ ಸಿನಿಮಾಗೆ ಜೂನ್ ತಿಂಗಳಲ್ಲಿ ಶೂಟಿಂಗ್ ಆರಂಭ ಆಗಲಿದೆ. ತೀರ್ಥಹಳ್ಳಿ‌, ಕಾರ್ಕಳ, ಮಡಿಕೇರಿ, ಬೆಂಗಳೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ಈ ಸಿನಿಮಾಗೆ ಅನೂಪ್ ಸಿಳೀನ್ ಅವರು ಸಂಗೀತ ನೀಡಲಿದ್ದಾರೆ. ಅಭಿಷೇಕ್ ಕಾಸರಗೋಡು ಅವರು ಛಾಯಾಗ್ರಹಣ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ