ರಿಷಿ ನಟನೆಯ ಹೊಸ ಸಿನಿಮಾ ‘ಮಂಗಳಾಪುರಂ’; ಕುತೂಹಲ ಮೂಡಿಸಿದ ಫಸ್ಟ್ ಲುಕ್

|

Updated on: Apr 21, 2025 | 4:14 PM

ನಟ ರಿಷಿ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಸಿನಿಮಾಗೆ ‘ಮಂಗಳಾಪುರಂ’ ಎಂದು ಟೈಟಲ್ ಇಡಲಾಗಿದೆ. ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾದಲ್ಲಿ ರಿಷಿ ಜೊತೆ ಅಭಿಮನ್ಯು ಕಾಶಿನಾಥ್ ಕೂಡ ಅಭಿನಯಿಸುತ್ತಿದ್ದಾರೆ. ಜೂನ್​ನಲ್ಲಿ ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ.

ರಿಷಿ ನಟನೆಯ ಹೊಸ ಸಿನಿಮಾ ‘ಮಂಗಳಾಪುರಂ’; ಕುತೂಹಲ ಮೂಡಿಸಿದ ಫಸ್ಟ್ ಲುಕ್
Rishi
Follow us on

‘ಆಪರೇಷನ್ ಅಲಮೇಲಮ್ಮ’, ‘ಕವಲುದಾರಿ’ ಮುಂತಾದ ಸಿನಿಮಾಗಳ ಮೂಲಕ ಹೆಸರು ಮಾಡಿದ ನಟ ರಿಷಿ (Rishi) ಅವರು ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸದ್ಯ ಅವರು ಒಂದಷ್ಟು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡ (Kannada Cinema) ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ರಿಷಿ ಅವರಿಗೆ ಬೇಡಿಕೆ ಇದೆ. ಈ ನಡುವೆ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಮಂಗಳಾಪುರಂ’ (Mangalapuram) ಎಂಬುದು ಈ ಸಿನಿಮಾದ ಶೀರ್ಷಿಕೆ. ಈಗ ಈ ಚಿತ್ರದ ಫಸ್ಟ್​ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

‘ಮಂಗಳಾಪುರಂ’ ಪೋಸ್ಟರ್ ನೋಡಿದ ಸಿನಿಪ್ರಿಯರಿಗೆ ಕುತೂಹಲ ಹೆಚ್ಚಾಗಿದೆ. ಈ ಸಿನಿಮಾಗಾಗಿ ರಿಷಿ ಅವರು ಮಂಗಳೂರು ಮೂಲದ ಹೊಸ ಟೀಮ್ ಜೊತೆ ಕೈ ಜೋಡಿಸಿದ್ದಾರೆ. ಈ ಮೊದಲು ತುಳು ಭಾಷೆಯಲ್ಲಿ ‘ಉಮಿಲ್’ ಮತ್ತು ‘ದೊಂಬರಾಟ’ ಸಿನಿಮಾಗಳಿಗೆ ಆ್ಯಕ್ಷನ್-ಕಟ್ ಹೇಳಿ ಯಶಸ್ಸು ಕಂಡಿರುವ ರಂಜಿತ್ ರಾವ್ ಸುವರ್ಣ ಅವರು ಈಗ ‘ಮಂಗಳಾಪುರಂ’ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ.

ಟೈಟಲ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ‘ಮಂಗಳಾಪುರಂ’ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಅಂದಹಾಗೆ, ಈ ಸಿನಿಮಾದಲ್ಲಿ ರಿಷಿ ಜೊತೆಗೆ ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಕೂಡ ನಟಿಸುತ್ತಾರೆ ಎಂಬುದು ವಿಶೇಷ. ಇದೇ ಮೊದಲ ಬಾರಿಗೆ ಈ ನಟರಿಬ್ಬರು ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ. ಆ ಕಾರಣದಿಂದಲೂ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಈ ಸಿನಿಮಾದಲ್ಲಿ ಮರ್ಡರ್ ಮಿಸ್ಟರಿ ಕಹಾನಿ ಇರಲಿದೆ. ಅಷ್ಟೇ ಅಲ್ಲದೇ ನಂಬಿಕೆ-ಮೂಢನಂಬಿಕೆ, ಕೈವಾಡ-ಪವಾಡ ಮುಂತಾದ ವಿಷಯಗಳ ಕುರಿತು ಸಿನಿಮಾದಲ್ಲಿ ತೋರಿಸಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ. ವಿದ್ವಾನ್ ಪ್ರಸನ್ನ ತಂತ್ರಿ ಮೂಡುಬಿದ್ರೆ ಮತ್ತು ರಾಮ್ ಪ್ರಸಾದ್ ಅವರು ‘ಮಂಗಳಾಪುರಂ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣದಲ್ಲಿ ಇದು ಅವರ ಚೊಚ್ಚಲ ಪ್ರಯತ್ನ.

ಇದನ್ನೂ ಓದಿ: ‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ ಬಳಿಕ ಯಶ್ ಮಾತು

ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ‘ಮಂಗಳಪುರಂ’ ಸಿನಿಮಾಗೆ ಜೂನ್ ತಿಂಗಳಲ್ಲಿ ಶೂಟಿಂಗ್ ಆರಂಭ ಆಗಲಿದೆ. ತೀರ್ಥಹಳ್ಳಿ‌, ಕಾರ್ಕಳ, ಮಡಿಕೇರಿ, ಬೆಂಗಳೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ಈ ಸಿನಿಮಾಗೆ ಅನೂಪ್ ಸಿಳೀನ್ ಅವರು ಸಂಗೀತ ನೀಡಲಿದ್ದಾರೆ. ಅಭಿಷೇಕ್ ಕಾಸರಗೋಡು ಅವರು ಛಾಯಾಗ್ರಹಣ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.