AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರುದ್ರ ಗರುಡ ಪುರಾಣ’ ರೋಚಕ ಟೀಸರ್​; ಸಿನಿಮಾ ಸಕ್ಸಸ್​ ಎಂದು ಭವಿಷ್ಯ ನುಡಿದ ಪ್ರೇಕ್ಷಕ

ಪ್ರೇಕ್ಷಕರಿಗೆ ರೋಚಕ ಅನುಭವ ನೀಡುವಲ್ಲಿ ‘ರುದ್ರ ಗರುಡ ಪುರಾಣ’ ಸಿನಿಮಾದ ಟೀಸರ್​ ಯಶಸ್ವಿ ಆಗಿದೆ. ಈ ಸಿನಿಮಾದಲ್ಲಿ ರಿಷಿ ಅವರು ಹೀರೋ ಆಗಿದ್ದು, ಪೊಲೀಸ್ ಆಫೀಸರ್​ ಪಾತ್ರ ಮಾಡಿದ್ದಾರೆ. ನಂದೀಶ್ ಅವರ ನಿರ್ದೇಶನ ಈ ಸಿನಿಮಾಗಿದೆ. ಶಿವರಾಜ್​ಕುಮಾರ್​ ಅವರು ಟೀಸರ್​ ಅನಾವರಣ ಮಾಡಿದ್ದಾರೆ. ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

‘ರುದ್ರ ಗರುಡ ಪುರಾಣ’ ರೋಚಕ ಟೀಸರ್​; ಸಿನಿಮಾ ಸಕ್ಸಸ್​ ಎಂದು ಭವಿಷ್ಯ ನುಡಿದ ಪ್ರೇಕ್ಷಕ
‘ರುದ್ರ ಗರುಡ ಪುರಾಣ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Aug 22, 2024 | 10:48 PM

Share

ಕನ್ನಡದ ಯುವ ನಟ ರಿಷಿ ಅಭಿನಯದ ಸಿನಿಮಾಗಳಲ್ಲಿ ಏನಾದರೂ ಸ್ಪೆಷಲ್​ ಇದ್ದೇ ಇರುತ್ತದೆ ಎಂಬ ಭಾವನೆ ಪ್ರೇಕ್ಷಕರ ಮನದಲ್ಲಿ ಬೇರೂರಿದೆ. ಆ ಭಾವನೆಯನ್ನು ಇನ್ನಷ್ಟು ಬಲಪಡಿಸುವ ರೀತಿಯಲ್ಲಿ ಈಗ ‘ರುದ್ರ ಗರುಡ ಪುರಾಣ’ ಸಿನಿಮಾದ ಟೀಸರ್​ ಮೂಡಿಬಂದಿದೆ. ಇದು ರಿಷಿ ನಟನೆಯ ಹೊಸ ಸಿನಿಮಾ. ಇತ್ತೀಚೆಗೆ ಈ ಸಿನಿಮಾದ ಟೀಸರ್​ ಅನಾವರಣ ಮಾಡಲಾಯಿತು. ಹಲವು ಕಾರಣಗಳಿಂದಾಗಿ ‘ರುದ್ರ ಗರುಡ ಪುರಾಣ’ ಚಿತ್ರ ಕೌತುಕ ಹುಟ್ಟುಹಾಕಿದೆ. ಟೀಸರ್​ ನೋಡಿದ ಪ್ರೇಕ್ಷಕರು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿರುವುದೂ ಅಲ್ಲದೇ, ಈ ಸಿನಿಮಾ ಖಂಡಿತಾ ಸೂಪರ್​ ಹಿಟ್​ ಆಗಲಿದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ.

ರಿಷಿ ಅವರು ಈಗ ಕನ್ನಡಕ್ಕೆ ಮಾತ್ರ ಸೀಮಿತವಾಗಿಲ್ಲ. ತೆಲುಗಿನಲ್ಲಿಯೂ ನಟಿಸಿ ಅವರು ಫೇಮಸ್​ ಆಗಿದ್ದಾರೆ. ‘ಆಪರೇಷನ್​ ಅಲಮೇಲಮ್ಮ’, ‘ಕವಲುದಾರಿ’ ಮುಂತಾದ ಸಿನಿಮಾಗಳ ಮೂಲಕ ಅವರು ತಮ್ಮ ಛಾಪು ಮೂಡಿಸಿದ್ದಾರೆ. ಈಗ ಅವರು ‘ರುದ್ರ ಗರುಡ ಪುರಾಣ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರಿಗೆ ಪೊಲೀಸ್​ ಅಧಿಕಾರಿಯ ಪಾತ್ರವಿದೆ. ಟೀಸರ್​ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ನಮ್ಮ‌ ಸುತ್ತಮುತ್ತವೇ ನಡೆಯುವ ಹಲವು ಸಮಸ್ಯೆಗಳನ್ನು ಕೇಂದ್ರವಾಗಿ ಇಟ್ಟುಕೊಂಡು ನಂದೀಶ್ ಅವರು ಈ ಸಿನಿಮಾ ಕಥೆ ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್ ಅವರು ನಿರ್ಮಾಣ ಮಾಡಿದ್ದ ‘ಕವಲುದಾರಿ’ ಸಿನಿಮಾದ ಬಳಿಕ ನಾನು ಈಗ ಮತ್ತೊಮ್ಮೆ ಪೊಲೀಸ್​ ಆಫೀಸರ್​ ಪಾತ್ರ ಮಾಡಿದ್ದೇನೆ. ರುದ್ರ ಎಂಬುದು ನನ್ನ ಪಾತ್ರದ ಹೆಸರು’ ಎಂದು ರಿಷಿ ಹೇಳಿದ್ದಾರೆ. ಅವರಿಗೆ ಜೋಡಿಯಾಗಿ ಪ್ರಿಯಾಂಕಾ ಕುಮಾರ್​ ಅವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ಪ್ರಕರಣ ತನಿಖಾ ಹಂತದಲ್ಲಿದೆ’ ಎನ್ನುತ್ತ ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ಹೊಸಬರ ತಂಡ

‘ರುದ್ರ ಗರುಡ ಪುರಾಣ’ ಸಿನಿಮಾದ ಟೀಸರ್ ಅನ್ನು ‘ಸೆಂಚುರಿ ಸ್ಟಾರ್​’ ಶಿವರಾಜ್​ಕುಮಾರ್ ಅವರು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಜೇಕಬ್ ವರ್ಗೀಸ್ ಕೂಡ ಟೀಸರ್​ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ನಂದೀಶ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಎರಡು ಪ್ರತ್ಯೇಕ ಕಥೆಗಳು ಈ ಸಿನಿಮಾದಲ್ಲಿ ಇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರುದ್ರ ಗರುಡ ಪುರಾಣ ಸಿನಿಮಾದ ಟೀಸರ್:

‘ಅಶ್ವಿನಿ ಆರ್ಟ್ಸ್’ ಮೂಲಕ ಅಶ್ವಿನಿ ಲೋಹಿತ್ ಅವರು ‘ರುದ್ರ ಗರುಡ ಪುರಾಣ’ ಸಿನಿಮಾವನ್ನು ನಿರ್ಮಿಸಿದ್ದಾರೆ. ರಿಷಿ, ಪ್ರಿಯಾಂಕಾ ಕುಮಾರ್​ ಮಾತ್ರವಲ್ಲದೇ ವಿನೋದ್ ಆಳ್ವಾ, ಕೆ.ಎಸ್. ಶ್ರೀಧರ್, ಶಿವರಾಜ ಕೆ.ಆರ್. ಪೇಟೆ, ಗಿರೀಶ್ ಶಿವಣ್ಣ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸಂಗೀತ ನಿರ್ದೇಶಕ ಕೆಪಿ, ಛಾಯಾಗ್ರಾಹಕ ಸಂದೀಪ್ ಕುಮಾರ್, ಸಂಭಾಷಣೆ ಬರೆದ ರಘು ನಿಡುವಳ್ಳಿ ಕೂಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!