AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

Ra Ra Rakkamma | Riteish Deshmukh: ಕಿಚ್ಚ ಸುದೀಪ್​ ಮತ್ತು ರಿತೇಶ್​ ದೇಶಮುಖ್​ ಅವರ ಗೆಳೆತನ ಹಲವು ವರ್ಷಗಳದ್ದು. ಆ ಕಾರಣದಿಂದ ತಮ್ಮ ಗೆಳೆಯನ ಸಿನಿಮಾಗೆ ರಿತೇಶ್​ ಅವರು ಸಪೋರ್ಟ್​ ಮಾಡಿದ್ದಾರೆ.

Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​
ರಿತೇಶ್ ದೇಶಮುಖ್, ಕಿಚ್ಚ ಸುದೀಪ್
TV9 Web
| Edited By: |

Updated on:Jun 08, 2022 | 10:11 AM

Share

ಕನ್ನಡದ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿವೆ. ಸ್ಯಾಂಡಲ್​ವುಡ್​ನಿಂದ ಬ್ಯಾಕ್​ ಟು ಬ್ಯಾಕ್​ ಒಳ್ಳೊಳ್ಳೆಯ ಚಿತ್ರಗಳು ರಿಲೀಸ್​ ಆಗುತ್ತಿವೆ. ಕಿಚ್ಚ ಸುದೀಪ್ (Kichcha Sudeep)​ ನಟನೆಯ ‘ವಿಕ್ರಾಂತ್​ ರೋಣ’ ಬಗ್ಗೆ ಈಗಾಗಲೇ ದೊಡ್ಡ ಮಟ್ಟದ ಹೈಪ್​ ಸೃಷ್ಟಿ ಆಗಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ‘ರಾ ರಾ ರಕ್ಕಮ್ಮ’ ಹಾಡು ಮೂಡಿಬಂದಿದೆ. ಈ ಹಾಡಿಗೆ ಅನೇಕ ಸೆಲೆಬ್ರಿಟಿಗಳು ರೀಲ್ಸ್​ ಮಾಡಿದ್ದಾರೆ. ಆ ಕಾರಣದಿಂದಲೂ ಈ ಗೀತೆ ತುಂಬ ಫೇಮಸ್​ ಆಗಿದೆ. ಈಗ ಬಾಲಿವುಡ್​ನ ಖ್ಯಾತ ನಟ ರಿತೇಶ್​ ದೇಶಮುಖ್​ (Riteish Deshmukh) ಅವರು ಕೂಡ ‘ರಾ ರಾ ರಕ್ಕಮ್ಮ’ ಹಾಡಿಗೆ ಮರುಳಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈ ಸಾಂಗ್​ಗೆ ಅವರು ರೀಲ್ಸ್​ ಮಾಡುವ ಮೂಲಕ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರಕ್ಕೆ ತಮ್ಮ ಬೆಂಬಲ ನೀಡಿದ್ದಾರೆ. ರಿತೇಶ್​ ದೇಶಮುಖ್​ ಅವರ ಬೆಂಬಲ ನೋಡಿ ಕನ್ನಡಿಗರು ಫಿದಾ ಆಗಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗಿದೆ. 10 ಲಕ್ಷಕ್ಕೂ ಅಧಿಕ ಬಾರಿ ಇದು ವೀಕ್ಷಣೆ ಕಂಡಿದೆ.

ಕಿಚ್ಚ ಸುದೀಪ್​ ಅವರು ಕನ್ನಡದಲ್ಲಿ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಹಾಗಾಗಿ ಅವರಿಗೆ ಎಲ್ಲ ಚಿತ್ರರಂಗದಲ್ಲೂ ಸ್ನೇಹಿತರಿದ್ದಾರೆ. ಇನ್ನು, ಸಿಸಿಎಲ್​ ಕ್ರಿಕೆಟ್​ ಟೂರ್ನಿಯ ಮೂಲಕವೂ ಅವರು ಪರಭಾಷೆ ಸೆಲೆಬ್ರಿಟಿಗಳ ಸ್ನೇಹ ಸಂಪಾದಿಸಿದ್ದಾರೆ. ಸುದೀಪ್​ ಮತ್ತು ರಿತೇಶ್​ ದೇಶಮುಖ್​ ಅವರ ಗೆಳೆತನ ಹಲವು ವರ್ಷಗಳದ್ದು. ಆ ಕಾರಣದಿಂದ ತಮ್ಮ ಗೆಳೆಯನ ಸಿನಿಮಾಗೆ ರಿತೇಶ್​ ಅವರು ಸಪೋರ್ಟ್​ ಮಾಡಿದ್ದಾರೆ.

ರಿತೇಶ್ ದೇಶಮುಖ್ ‘ರಕ್ಕಮ್ಮ’ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಇಲ್ಲಿದೆ:

ಇದನ್ನೂ ಓದಿ
Image
ಕಿಚ್ಚನಿಗೆ ಸಲ್ಲು ಸಾಥ್​; ಹಿಂದಿಯಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್
Image
Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು
Image
Kichcha Sudeep: ‘ವಿಕ್ರಾಂತ್​ ರೋಣ’ ನೃತ್ಯ ನಿರ್ದೇಶಕನಿ​ಗೆ ಥಾರ್​ ಗಿಫ್ಟ್ ನೀಡಿದ ‘ಕಿಚ್ಚ’ ಸುದೀಪ್​

ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ನಟನೆಯ ಹಾಡು:

ಹಿಂದಿ ಪ್ರೇಕ್ಷಕರನ್ನು ‘ವಿಕ್ರಾಂತ್​ ರೋಣ’ ಸಿನಿಮಾ ವಿಶೇಷವಾಗಿ ಆಕರ್ಷಿಸಲಿದೆ. ಯಾಕೆಂದರೆ ಈ ಸಿನಿಮಾದಲ್ಲಿ ಖ್ಯಾತ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅಭಿನಯಿಸಿದ್ದಾರೆ. ರಕ್ಕಮ್ಮ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ‘ರಾ ರಾ ರಕ್ಕಮ್ಮ..’ ಹಾಡಿನಲ್ಲಿ ಅವರು ಸುದೀಪ್ ಜೊತೆ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ: ‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ

ಜು.28ಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​:

ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್​ ಅವತರಣಿಕೆಯಲ್ಲಿ ‘ವಿಕ್ರಾಂತ್​ ರೋಣ’ ಮೂಡಿಬಂದಿದೆ. ಜು.28ರಂದು 3ಡಿ ವರ್ಷನ್​ನಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಈಗಾಗಲೇ ಚಿತ್ರಕ್ಕೆ ಭರ್ಜರಿ ಡಿಮ್ಯಾಂಡ್​ ಸೃಷ್ಟಿ ಆಗಿದ್ದು, ವಿದೇಶದಲ್ಲಿ 10 ಕೋಟಿ ರೂಪಾಯಿಗೆ ವಿತರಣೆ ಹಕ್ಕುಗಳು ಮಾರಾಟ ಆಗಿವೆ ಎಂಬುದು ವಿಶೇಷ. ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:47 am, Wed, 8 June 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ