AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

Ra Ra Rakkamma | Riteish Deshmukh: ಕಿಚ್ಚ ಸುದೀಪ್​ ಮತ್ತು ರಿತೇಶ್​ ದೇಶಮುಖ್​ ಅವರ ಗೆಳೆತನ ಹಲವು ವರ್ಷಗಳದ್ದು. ಆ ಕಾರಣದಿಂದ ತಮ್ಮ ಗೆಳೆಯನ ಸಿನಿಮಾಗೆ ರಿತೇಶ್​ ಅವರು ಸಪೋರ್ಟ್​ ಮಾಡಿದ್ದಾರೆ.

Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​
ರಿತೇಶ್ ದೇಶಮುಖ್, ಕಿಚ್ಚ ಸುದೀಪ್
TV9 Web
| Edited By: |

Updated on:Jun 08, 2022 | 10:11 AM

Share

ಕನ್ನಡದ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿವೆ. ಸ್ಯಾಂಡಲ್​ವುಡ್​ನಿಂದ ಬ್ಯಾಕ್​ ಟು ಬ್ಯಾಕ್​ ಒಳ್ಳೊಳ್ಳೆಯ ಚಿತ್ರಗಳು ರಿಲೀಸ್​ ಆಗುತ್ತಿವೆ. ಕಿಚ್ಚ ಸುದೀಪ್ (Kichcha Sudeep)​ ನಟನೆಯ ‘ವಿಕ್ರಾಂತ್​ ರೋಣ’ ಬಗ್ಗೆ ಈಗಾಗಲೇ ದೊಡ್ಡ ಮಟ್ಟದ ಹೈಪ್​ ಸೃಷ್ಟಿ ಆಗಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ‘ರಾ ರಾ ರಕ್ಕಮ್ಮ’ ಹಾಡು ಮೂಡಿಬಂದಿದೆ. ಈ ಹಾಡಿಗೆ ಅನೇಕ ಸೆಲೆಬ್ರಿಟಿಗಳು ರೀಲ್ಸ್​ ಮಾಡಿದ್ದಾರೆ. ಆ ಕಾರಣದಿಂದಲೂ ಈ ಗೀತೆ ತುಂಬ ಫೇಮಸ್​ ಆಗಿದೆ. ಈಗ ಬಾಲಿವುಡ್​ನ ಖ್ಯಾತ ನಟ ರಿತೇಶ್​ ದೇಶಮುಖ್​ (Riteish Deshmukh) ಅವರು ಕೂಡ ‘ರಾ ರಾ ರಕ್ಕಮ್ಮ’ ಹಾಡಿಗೆ ಮರುಳಾಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈ ಸಾಂಗ್​ಗೆ ಅವರು ರೀಲ್ಸ್​ ಮಾಡುವ ಮೂಲಕ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರಕ್ಕೆ ತಮ್ಮ ಬೆಂಬಲ ನೀಡಿದ್ದಾರೆ. ರಿತೇಶ್​ ದೇಶಮುಖ್​ ಅವರ ಬೆಂಬಲ ನೋಡಿ ಕನ್ನಡಿಗರು ಫಿದಾ ಆಗಿದ್ದಾರೆ. ಸದ್ಯ ಈ ವಿಡಿಯೋ ವೈರಲ್​ ಆಗಿದೆ. 10 ಲಕ್ಷಕ್ಕೂ ಅಧಿಕ ಬಾರಿ ಇದು ವೀಕ್ಷಣೆ ಕಂಡಿದೆ.

ಕಿಚ್ಚ ಸುದೀಪ್​ ಅವರು ಕನ್ನಡದಲ್ಲಿ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಹಾಗಾಗಿ ಅವರಿಗೆ ಎಲ್ಲ ಚಿತ್ರರಂಗದಲ್ಲೂ ಸ್ನೇಹಿತರಿದ್ದಾರೆ. ಇನ್ನು, ಸಿಸಿಎಲ್​ ಕ್ರಿಕೆಟ್​ ಟೂರ್ನಿಯ ಮೂಲಕವೂ ಅವರು ಪರಭಾಷೆ ಸೆಲೆಬ್ರಿಟಿಗಳ ಸ್ನೇಹ ಸಂಪಾದಿಸಿದ್ದಾರೆ. ಸುದೀಪ್​ ಮತ್ತು ರಿತೇಶ್​ ದೇಶಮುಖ್​ ಅವರ ಗೆಳೆತನ ಹಲವು ವರ್ಷಗಳದ್ದು. ಆ ಕಾರಣದಿಂದ ತಮ್ಮ ಗೆಳೆಯನ ಸಿನಿಮಾಗೆ ರಿತೇಶ್​ ಅವರು ಸಪೋರ್ಟ್​ ಮಾಡಿದ್ದಾರೆ.

ರಿತೇಶ್ ದೇಶಮುಖ್ ‘ರಕ್ಕಮ್ಮ’ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಇಲ್ಲಿದೆ:

ಇದನ್ನೂ ಓದಿ
Image
ಕಿಚ್ಚನಿಗೆ ಸಲ್ಲು ಸಾಥ್​; ಹಿಂದಿಯಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್
Image
Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು
Image
Kichcha Sudeep: ‘ವಿಕ್ರಾಂತ್​ ರೋಣ’ ನೃತ್ಯ ನಿರ್ದೇಶಕನಿ​ಗೆ ಥಾರ್​ ಗಿಫ್ಟ್ ನೀಡಿದ ‘ಕಿಚ್ಚ’ ಸುದೀಪ್​

ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ನಟನೆಯ ಹಾಡು:

ಹಿಂದಿ ಪ್ರೇಕ್ಷಕರನ್ನು ‘ವಿಕ್ರಾಂತ್​ ರೋಣ’ ಸಿನಿಮಾ ವಿಶೇಷವಾಗಿ ಆಕರ್ಷಿಸಲಿದೆ. ಯಾಕೆಂದರೆ ಈ ಸಿನಿಮಾದಲ್ಲಿ ಖ್ಯಾತ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅಭಿನಯಿಸಿದ್ದಾರೆ. ರಕ್ಕಮ್ಮ ಎಂಬ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ‘ರಾ ರಾ ರಕ್ಕಮ್ಮ..’ ಹಾಡಿನಲ್ಲಿ ಅವರು ಸುದೀಪ್ ಜೊತೆ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ: ‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ

ಜು.28ಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​:

ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್​ ಅವತರಣಿಕೆಯಲ್ಲಿ ‘ವಿಕ್ರಾಂತ್​ ರೋಣ’ ಮೂಡಿಬಂದಿದೆ. ಜು.28ರಂದು 3ಡಿ ವರ್ಷನ್​ನಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಈಗಾಗಲೇ ಚಿತ್ರಕ್ಕೆ ಭರ್ಜರಿ ಡಿಮ್ಯಾಂಡ್​ ಸೃಷ್ಟಿ ಆಗಿದ್ದು, ವಿದೇಶದಲ್ಲಿ 10 ಕೋಟಿ ರೂಪಾಯಿಗೆ ವಿತರಣೆ ಹಕ್ಕುಗಳು ಮಾರಾಟ ಆಗಿವೆ ಎಂಬುದು ವಿಶೇಷ. ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:47 am, Wed, 8 June 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ