AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maarnami Movie: ‘ಮಾರ್ನಮಿ’ ಸಿನಿಮಾಗೆ ಪ್ರೇಕ್ಷಕರಿಂದ ಸಿಕ್ತು ಭರ್ಜರಿ ರೆಸ್ಪಾನ್ಸ್

‘ಮಾರ್ನಮಿ’ ಸಿನಿಮಾದ ಕಥೆಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಕಥೆ ರಿಯಲ್ ಆಗಿದೆ ಎಂದು ಜನರು ಹೇಳುತ್ತಿದ್ದಾರೆ. ಮೊದಲ ದಿನ ಸಿನಿಮಾ ನೋಡಿದ ಜನರಿಗೆ ಇಷ್ಟ ಆಗಿದೆ. ಪ್ರೇಮಿಗಳಿಗೆ ಈ ಸಿನಿಮಾದಲ್ಲಿ ನೀಡಿರುವ ಮೆಸೇಜ್ ಗಮನ ಸೆಳೆದಿದೆ. ಕರಾವಳಿ ಸೊಗಡನ್ನು ಕಂಡು ಪ್ರೇಕ್ಷಕರು ಖುಷಿ ಆಗಿದ್ದಾರೆ.

Maarnami Movie: ‘ಮಾರ್ನಮಿ’ ಸಿನಿಮಾಗೆ ಪ್ರೇಕ್ಷಕರಿಂದ ಸಿಕ್ತು ಭರ್ಜರಿ ರೆಸ್ಪಾನ್ಸ್
Chaithra J Achar, Ritvvikk
ಮದನ್​ ಕುಮಾರ್​
|

Updated on: Feb 20, 2026 | 9:43 PM

Share

ಕರಾವಳಿ ಭಾಗದ ಕತೆ ಹೊಂದಿರುವ ‘ಮಾರ್ನಮಿ’ (Maarnami) ಸಿನಿಮಾ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ರಿತ್ವಿಕ್ ಮಠದ್ ಮತ್ತು ಚೈತ್ರಾ ಆಚಾರ್ ಅವರು ಜೋಡಿಯಾಗಿ ನಟಿಸಿದ್ದಾರೆ. ಸೋನು ಗೌಡ, ಪ್ರಕಾಶ್ ತುಮ್ಮಿನಾಡು, ಸುಮನ್ ತಲ್ವಾರ್, ಜ್ಯೋತಿ ಶೆಟ್ಟಿ, ಸ್ವರಾಜ್ ಶೆಟ್ಟಿ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಶಿಲ್ಪಾ ನಿಶಾಂತ್ ನಿರ್ಮಾಣ ಮಾಡಿದ ಈ ಚಿತ್ರಕ್ಕೆ ರಿಷಿತ್ ಶೆಟ್ಟಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಫೆಬ್ರವರಿ 20ರಂದು ತೆರೆಕಂಡ ಈ ಸಿನಿಮಾಗೆ ಪ್ರೇಕ್ಷಕರಿಗೆ ಮೆಚ್ಚುಗೆ ಸಿಕ್ಕಿದೆ.

ನಟಿ ಚೈತ್ರಾ ಆಚಾರ್ ಅವರು ಒಳ್ಳೆಯ ಕಥೆ ಇರುವ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಆ ಸಾಲಿಗೆ ‘ಮಾರ್ನಮಿ’ ಕೂಡ ಸೇರ್ಪಡೆ ಆಗಿದೆ. ‘ಈ ಸಿನಿಮಾದ ಕತೆ ಚೆನ್ನಾಗಿದೆ. ನೀಡಿರುವ ಮೆಸೇಜ್ ಕೂಡ ಉತ್ತಮವಾಗಿದೆ. ಫೈಟಿಂಗ್ ಕೂಡ ಚೆನ್ನಾಗಿ ಮಾಡಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ನೋಡುವಂತಹ ಸಿನಿಮಾ ಇದು. ಮಾಮೂಲಿ ಎಂಬಂತಹ ಸಿನಿಮಾ ಅಲ್ಲ’ ಎಂದು ಪ್ರೇಕ್ಷಕರು ಪ್ರತಿಕ್ರಿಯಿಸಿದ್ದಾರೆ.

‘ಸೆಕೆಂಡ್ ಹಾಫ್​​ನಲ್ಲಿ ಅನಿರೀಕ್ಷಿತ ಟ್ವಿಸ್ಟ್ ಇದೆ. ತಾಯಿ ಸೆಂಟಿಮೆಂಟ್ ದೃಶ್ಯಗಳು ಪ್ರೇಕ್ಷಕರಿಗೆ ಕನೆಕ್ಟ್ ಆಗುತ್ತವೆ. ಎಲ್ಲ ದೃಶ್ಯದಲ್ಲೂ ಕುತೂಹಲ ಇದೆ. ರೂಪಕದ ರೀತಿ ಮೂಡಿಬಂದಿದೆ. ನಿರೀಕ್ಷಿಸಿಯೇ ಇಲ್ಲದ ರೀತಿಯಲ್ಲಿ ಕ್ಲೈಮ್ಯಾಕ್ಸ್ ಮೂಡಿಬಂದಿದೆ. ಫ್ಯಾಮಿಲಿಗೋಸ್ಕರ ಹೀರೋ ಏನೆಲ್ಲ ಮಾಡುತ್ತಾನೆ ಎಂಬುದನ್ನು ತೋರಿಸಲಾಗಿದೆ. ಚಿತ್ರದ ಸೆಕೆಂಡ್ ಹಾಫ್ ಬಹಳ ಚೆನ್ನಾಗಿದೆ’ ಎಂದು ಕೂಡ ಪ್ರೇಕ್ಷಕರು ಹೇಳಿದ್ದಾರೆ.

View this post on Instagram

A post shared by @blocklenscreation

‘ಕಾಂತಾರ ರೀತಿಯ ಸಿನಿಮಾಗಳು ಕರಾವಳಿ ಶೈಲಿಯಲ್ಲಿ ಬಂದಿದ್ದವು. ಮಾರ್ನಮಿ ಸಿನಿಮಾ ಕೂಡ ಅದೇ ರೀತಿ ಮೂಡಿಬಂದಿದೆ. ಚಿತ್ರತಂಡದವರು ಚೆನ್ನಾಗಿ ಮಾಡಿದ್ದಾರೆ. ಸೈಲೆಂಟ್ ಆಗಿಯೇ ಈ ಸಿನಿಮಾ ನಮ್ಮನ್ನು ಆವರಿಸುತ್ತದೆ. ಕರಾವಳಿ ಸೊಗಡನ್ನು ಈ ಸಿನಿಮಾದಲ್ಲಿ ಎತ್ತಿ ಹಿಡಿದಿದ್ದಾರೆ. ಹೆಣ್ಣು ಯಾಕೆ ಚಂಚಲ ಆಗುತ್ತಾಳೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರೆ’ ಎಂಬ ಪ್ರತಿಕ್ರಿಯೆ ಸಹ ಬಂದಿದೆ.

ಇದನ್ನೂ ಓದಿ: ‘ಮಾರ್ನಮಿ’ ನೋಡಲು ಬನ್ನಿ: ಅಭಿಮಾನಿಗಳಿಗೆ ಚೈತ್ರಾ ಜೆ. ಆಚಾರ್ ಆಹ್ವಾನ

ಈ ವಾರ ಕನ್ನಡದ 7 ಸಿನಿಮಾಗಳು ಬಿಡುಗಡೆ ಆದವು. ಹಾಗಾಗಿ ಪೈಪೋಟಿ ಜಾಸ್ತಿ ಇದೆ. ಅವುಗಳ ನಡುವೆ ‘ಮಾರ್ನಮಿ’ ಸಿನಿಮಾ ಭಿನ್ನವಾಗಿ ಗುರುತಿಸಿಕೊಂಡಿದೆ. ಪ್ರೀಮಿಯರ್ ಶೋ ಮತ್ತು ಫಸ್ಟ್ ಡೇ ಸಿನಿಮಾ ನೋಡಿದ ಪ್ರೇಕ್ಷಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!