AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ದಿನವೂ ಬಾಕ್ಸ್​ ಆಫೀಸ್​ನಲ್ಲಿ ರಾಬರ್ಟ್​ ಹವಾ..ಮೂರೇ ದಿನಕ್ಕೆ 50 ಕೋಟಿ ದಾಟಲಿದೆ ಕಲೆಕ್ಷನ್​?

Roberrt 2nd Day Collection: ಮೊದಲ ದಿನವಾದ ಗುರುವಾರ ರಾಬರ್ಟ್​ 17 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಎರಡನೇ ದಿನವೂ ರಾಬರ್ಟ್​ ತನ್ನ ನಾಗಾಲೋಟ ಮುಂದುವರಿಸಿದೆ.

ಎರಡನೇ ದಿನವೂ ಬಾಕ್ಸ್​ ಆಫೀಸ್​ನಲ್ಲಿ ರಾಬರ್ಟ್​ ಹವಾ..ಮೂರೇ ದಿನಕ್ಕೆ 50 ಕೋಟಿ ದಾಟಲಿದೆ ಕಲೆಕ್ಷನ್​?
ನಟ ದರ್ಶನ್
ರಾಜೇಶ್ ದುಗ್ಗುಮನೆ
| Edited By: |

Updated on: Mar 13, 2021 | 2:59 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ರಾಜ್ಯದ್ಯಂತ ದೊಡ್ಡ ಮಟ್ಟದಲ್ಲಿ ಹವಾ ಸೃಷ್ಟಿ ಮಾಡಿದೆ. ಮೊದಲ ದಿನ ಬಾಕ್ಸ್​ ಆಫೀಸ್​ನಲ್ಲಿ ದೂಳೆಬ್ಬಿಸಿದ್ದ ಈ ಸಿನಿಮಾ ಎರಡನೇ ದಿನವೂ ಅಬ್ಬರಿಸಿದೆ. ದರ್ಶನ್​ ಅಭಿಮಾನಿಗಳು ಅಕ್ಷರಶಃ ಹಬ್ಬದೂಟ ಸವಿದ ಖುಷಿಯಲ್ಲಿದ್ದಾರೆ. ಮೂರೇ ದಿನಕ್ಕೆ ರಾಬರ್ಟ್​ ಸಿನಿಮಾ ಕಲೆಕ್ಷನ್​ 50 ಕೋಟಿ ರೂಪಾಯಿ ದಾಟುವ ನಿರೀಕ್ಷೆ ಇದೆ. ಇಡೀ ಕರ್ನಾಟಕದಲ್ಲಿ ರಾಬರ್ಟ್​ ಬಿಡುಗಡೆಗೂ ಮುನ್ನವೇ ಹಬ್ಬದ ವಾತಾವರಣ ನಿರ್ಮಾಣ ಆಗಿತ್ತು. ಈ ಹಬ್ಬದ ವಾತಾವರಣ ಎರಡನೇ ದಿನವೂ ಮುಂದುವರಿದೆ. ಪ್ರತಿ ಜಿಲ್ಲೆಯಲ್ಲಿಯೂ ಡಿ ಬಾಸ್​ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಟೌಟ್​ ನಿಲ್ಲಿಸಿ ಸಂಭ್ರಮಿಸಲು ಆರಂಭಿಸಿದ್ದರು. ಅಷ್ಟೇ ಅಲ್ಲ, ಮೊದಲ ದಿನದ ಟಿಕೆಟ್​ಗಳನ್ನು ಎಲ್ಲರೂ ಮುಗಿಬಿದ್ದು ಖರೀದಿ ಮಾಡಿದ್ದರು. ಹಾಗಾಗಿ ರಾಜ್ಯಾದ್ಯಂತ ಎರಡನೇ ದಿನವೂ ಸಿನಿಮಾ ಕೋಟ್ಯಂತರ ರೂ. ಗಳಿಕೆ ಮಾಡಿದೆ.

ಮೊದಲ ದಿನವಾದ ಗುರುವಾರ ರಾಬರ್ಟ್​ 17 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಎರಡನೇ ದಿನವೂ ರಾಬರ್ಟ್​ ತನ್ನ ನಾಗಾಲೋಟ ಮುಂದುವರಿಸಿದೆ. ಕರ್ನಾಟಕದಲ್ಲಿ ಈ ಸಿನಿಮಾ ಶುಕ್ರವಾರ 12.78 ಕೋಟಿ ರೂಪಾಯಿ ತನ್ನ ಜೇಬಿಗೆ ಹಾಕಿಕೊಂಡಿದೆ. ಈ ಮೂಲಕ ಎರಡೇ ದಿನಕ್ಕೆ ಸಿನಿಮಾ ಕಲೆಕ್ಷನ್​ 30 ಕೋಟಿ ರೂಪಾಯಿ ಸಮೀಪಿಸಿದೆ.

ಗುರುವಾರ ಶಿವರಾತ್ರಿ ಹಬ್ಬದ ಪ್ರಯುಕ್ತ ತೆರೆಕಂಡಿದ್ದರಿಂದ ‘ರಾಬರ್ಟ್​’ಗೆ ರಜಾ ದಿನದ ಅನುಕೂಲ ಆಗಿತ್ತು. ಶುಕ್ರವಾರ ಚಿತ್ರರಂಗಕ್ಕೆ ವಿಶೇಷ ದಿನ. ಹೀಗಾಗಿ, ಅಭಿಮಾನಿಗಳು ಚಿತ್ರಮಂದಿರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಇನ್ನು ಇನ್ನು ವೀಕೆಂಡ್​ನಲ್ಲಿಯೂ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ಮಾಸ್​ ಅಭಿಮಾನಿಗಳಿಗೆ ಮಾತ್ರವಲ್ಲದೆ, ಫ್ಯಾಮಿಲಿ ಪ್ರೇಕ್ಷಕರನ್ನೂ ಈ ಸಿನಿಮಾ ಸೆಳೆದುಕೊಳ್ಳುತ್ತಿದೆ. ಇದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ಮೂರನೇ ದಿನವಾದ ಶನಿವಾರ (ಮಾ.13) ಸಿನಿಮಾ ಎಲ್ಲೆಡೆ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

Roberrt 2nd Day Collection

ತರುಣ್​ ಸುಧೀರ್​ ನಿರ್ದೇಶನದ ಈ ಚಿತ್ರದ ಮೂಲಕ ನಟಿ ಆಶಾ ಭಟ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಮೊದಲ ಸಿನಿಮಾದಲ್ಲಿಯೇ ಅವರಿಗೆ ಭರ್ಜರಿ ಗೆಲುವು ಸಿಕ್ಕಂತಾಗಿದೆ. ‘ಚೌಕ’ ಚಿತ್ರದ ನಂತರ ತರುಣ್​ ಸುಧೀರ್​ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಮೊಗದಲ್ಲಿ ಗೆಲುವಿನ ನಗು ಮೂಡಿದೆ.

ಇದನ್ನೂ ಓದಿ: ‘ರಾಬರ್ಟ್​ ಪೈರಸಿ ಮಾಡಿದವರಿಗೆ ಶಿಕ್ಷೆ ಕೊಡೋದು ದೊಡ್ಡ ವಿಚಾರವಲ್ಲ; ಆದ್ರೆ ಅದರಿಂದ ಬೇರೆ ನಟರ ಹೆಸರು ಬರುತ್ತವೆ’

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್