AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ದಿನವೂ ಬಾಕ್ಸ್​ ಆಫೀಸ್​ನಲ್ಲಿ ರಾಬರ್ಟ್​ ಹವಾ..ಮೂರೇ ದಿನಕ್ಕೆ 50 ಕೋಟಿ ದಾಟಲಿದೆ ಕಲೆಕ್ಷನ್​?

Roberrt 2nd Day Collection: ಮೊದಲ ದಿನವಾದ ಗುರುವಾರ ರಾಬರ್ಟ್​ 17 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಎರಡನೇ ದಿನವೂ ರಾಬರ್ಟ್​ ತನ್ನ ನಾಗಾಲೋಟ ಮುಂದುವರಿಸಿದೆ.

ಎರಡನೇ ದಿನವೂ ಬಾಕ್ಸ್​ ಆಫೀಸ್​ನಲ್ಲಿ ರಾಬರ್ಟ್​ ಹವಾ..ಮೂರೇ ದಿನಕ್ಕೆ 50 ಕೋಟಿ ದಾಟಲಿದೆ ಕಲೆಕ್ಷನ್​?
ನಟ ದರ್ಶನ್
ರಾಜೇಶ್ ದುಗ್ಗುಮನೆ
| Edited By: |

Updated on: Mar 13, 2021 | 2:59 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ರಾಜ್ಯದ್ಯಂತ ದೊಡ್ಡ ಮಟ್ಟದಲ್ಲಿ ಹವಾ ಸೃಷ್ಟಿ ಮಾಡಿದೆ. ಮೊದಲ ದಿನ ಬಾಕ್ಸ್​ ಆಫೀಸ್​ನಲ್ಲಿ ದೂಳೆಬ್ಬಿಸಿದ್ದ ಈ ಸಿನಿಮಾ ಎರಡನೇ ದಿನವೂ ಅಬ್ಬರಿಸಿದೆ. ದರ್ಶನ್​ ಅಭಿಮಾನಿಗಳು ಅಕ್ಷರಶಃ ಹಬ್ಬದೂಟ ಸವಿದ ಖುಷಿಯಲ್ಲಿದ್ದಾರೆ. ಮೂರೇ ದಿನಕ್ಕೆ ರಾಬರ್ಟ್​ ಸಿನಿಮಾ ಕಲೆಕ್ಷನ್​ 50 ಕೋಟಿ ರೂಪಾಯಿ ದಾಟುವ ನಿರೀಕ್ಷೆ ಇದೆ. ಇಡೀ ಕರ್ನಾಟಕದಲ್ಲಿ ರಾಬರ್ಟ್​ ಬಿಡುಗಡೆಗೂ ಮುನ್ನವೇ ಹಬ್ಬದ ವಾತಾವರಣ ನಿರ್ಮಾಣ ಆಗಿತ್ತು. ಈ ಹಬ್ಬದ ವಾತಾವರಣ ಎರಡನೇ ದಿನವೂ ಮುಂದುವರಿದೆ. ಪ್ರತಿ ಜಿಲ್ಲೆಯಲ್ಲಿಯೂ ಡಿ ಬಾಸ್​ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಟೌಟ್​ ನಿಲ್ಲಿಸಿ ಸಂಭ್ರಮಿಸಲು ಆರಂಭಿಸಿದ್ದರು. ಅಷ್ಟೇ ಅಲ್ಲ, ಮೊದಲ ದಿನದ ಟಿಕೆಟ್​ಗಳನ್ನು ಎಲ್ಲರೂ ಮುಗಿಬಿದ್ದು ಖರೀದಿ ಮಾಡಿದ್ದರು. ಹಾಗಾಗಿ ರಾಜ್ಯಾದ್ಯಂತ ಎರಡನೇ ದಿನವೂ ಸಿನಿಮಾ ಕೋಟ್ಯಂತರ ರೂ. ಗಳಿಕೆ ಮಾಡಿದೆ.

ಮೊದಲ ದಿನವಾದ ಗುರುವಾರ ರಾಬರ್ಟ್​ 17 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಎರಡನೇ ದಿನವೂ ರಾಬರ್ಟ್​ ತನ್ನ ನಾಗಾಲೋಟ ಮುಂದುವರಿಸಿದೆ. ಕರ್ನಾಟಕದಲ್ಲಿ ಈ ಸಿನಿಮಾ ಶುಕ್ರವಾರ 12.78 ಕೋಟಿ ರೂಪಾಯಿ ತನ್ನ ಜೇಬಿಗೆ ಹಾಕಿಕೊಂಡಿದೆ. ಈ ಮೂಲಕ ಎರಡೇ ದಿನಕ್ಕೆ ಸಿನಿಮಾ ಕಲೆಕ್ಷನ್​ 30 ಕೋಟಿ ರೂಪಾಯಿ ಸಮೀಪಿಸಿದೆ.

ಗುರುವಾರ ಶಿವರಾತ್ರಿ ಹಬ್ಬದ ಪ್ರಯುಕ್ತ ತೆರೆಕಂಡಿದ್ದರಿಂದ ‘ರಾಬರ್ಟ್​’ಗೆ ರಜಾ ದಿನದ ಅನುಕೂಲ ಆಗಿತ್ತು. ಶುಕ್ರವಾರ ಚಿತ್ರರಂಗಕ್ಕೆ ವಿಶೇಷ ದಿನ. ಹೀಗಾಗಿ, ಅಭಿಮಾನಿಗಳು ಚಿತ್ರಮಂದಿರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಇನ್ನು ಇನ್ನು ವೀಕೆಂಡ್​ನಲ್ಲಿಯೂ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ಮಾಸ್​ ಅಭಿಮಾನಿಗಳಿಗೆ ಮಾತ್ರವಲ್ಲದೆ, ಫ್ಯಾಮಿಲಿ ಪ್ರೇಕ್ಷಕರನ್ನೂ ಈ ಸಿನಿಮಾ ಸೆಳೆದುಕೊಳ್ಳುತ್ತಿದೆ. ಇದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ಮೂರನೇ ದಿನವಾದ ಶನಿವಾರ (ಮಾ.13) ಸಿನಿಮಾ ಎಲ್ಲೆಡೆ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

Roberrt 2nd Day Collection

ತರುಣ್​ ಸುಧೀರ್​ ನಿರ್ದೇಶನದ ಈ ಚಿತ್ರದ ಮೂಲಕ ನಟಿ ಆಶಾ ಭಟ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಮೊದಲ ಸಿನಿಮಾದಲ್ಲಿಯೇ ಅವರಿಗೆ ಭರ್ಜರಿ ಗೆಲುವು ಸಿಕ್ಕಂತಾಗಿದೆ. ‘ಚೌಕ’ ಚಿತ್ರದ ನಂತರ ತರುಣ್​ ಸುಧೀರ್​ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಮೊಗದಲ್ಲಿ ಗೆಲುವಿನ ನಗು ಮೂಡಿದೆ.

ಇದನ್ನೂ ಓದಿ: ‘ರಾಬರ್ಟ್​ ಪೈರಸಿ ಮಾಡಿದವರಿಗೆ ಶಿಕ್ಷೆ ಕೊಡೋದು ದೊಡ್ಡ ವಿಚಾರವಲ್ಲ; ಆದ್ರೆ ಅದರಿಂದ ಬೇರೆ ನಟರ ಹೆಸರು ಬರುತ್ತವೆ’

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು