AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ರಿಯಲ್ ಸಾರಥಿ ಜೊತೆ ರೀಲ್​ ಸಾರಥಿ ಭೇಟಿ! ಡಿ ಬಾಸ್​ ದರ್ಶನ್​ ಬಾಲ್ಯದ ವಿಶೇಷ ವ್ಯಕ್ತಿ ಇವರು

ಸದ್ಯ ದರ್ಶನ್​ ಭೇಟಿಯಾಗಿರುವ ವಿಶೇಷ ವ್ಯಕ್ತಿಯ ಹೆಸರು ಸುಂದರ್​ ರಾಜ್​. ಶಾಲೆ ಮಕ್ಕಳು ಅವರನ್ನು ಪ್ರೀತಿಯಿಂದ ಸುಂದರ್​ ಅಂಕಲ್​ ಎಂದು ಕರೆಯುತ್ತಿದ್ದರು. ಅದೇ ಪ್ರೀತಿಯನ್ನು ದರ್ಶನ್​ ಇಂದಿಗೂ ಇಟ್ಟುಕೊಂಡಿದ್ದಾರೆ.

Darshan: ರಿಯಲ್ ಸಾರಥಿ ಜೊತೆ ರೀಲ್​ ಸಾರಥಿ ಭೇಟಿ! ಡಿ ಬಾಸ್​ ದರ್ಶನ್​ ಬಾಲ್ಯದ ವಿಶೇಷ ವ್ಯಕ್ತಿ ಇವರು
ದರ್ಶನ್​ - ಸುಂದರ್​ ರಾಜ್​
ಮದನ್​ ಕುಮಾರ್​
| Edited By: |

Updated on: Mar 23, 2021 | 8:48 AM

Share

ನಟ ದರ್ಶನ್​ ಅವರು ಆಗಾಗ ತಮ್ಮ ಸರಳತೆಯ ಕಾರಣದಿಂದ ಸುದ್ದಿ ಆಗುತ್ತಿರುತ್ತಾರೆ. ಎಷ್ಟೇ ದೊಡ್ಡ ಸ್ಟಾರ್​ ಆಗಿದ್ದರೂ ಅವರು ತಮ್ಮ ಹಳೇ ದಿನಗಳನ್ನು ಮರೆತಿಲ್ಲ. ತಾವು ನಡೆದುಬಂದ ಕಷ್ಟದ ದಿನಗಳ ಬಗ್ಗೆ, ಜೊತೆಗಿದ್ದ ಸ್ನೇಹಿತರ ಬಗ್ಗೆ ಡಿ ಬಾಸ್​ ಆಗಾಗ ಮಾತನಾಡುತ್ತಾರೆ. ವಿಶೇಷ ಏನೆಂದರೆ, ಈಗ ಓರ್ವ ಸ್ಪೆಷಲ್​ ವ್ಯಕ್ತಿಯನ್ನು ದರ್ಶನ್​ ಭೇಟಿಯಾಗಿದ್ದಾರೆ. ಆ ಭೇಟಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

ದರ್ಶನ್​ ಅವರಿಗೆ ಮೈಸೂರಿನ ಜೊತೆ ವಿಶೇಷ ನಂಟು ಇದೆ. ಮೈಸೂರಿನಲ್ಲಿ ಅವರು ಬಾಲ್ಯ ಕಳೆದಿದ್ದಾರೆ. ಅಂದು ಅವರು ಶಾಲೆಗೆ ಹೋಗುತ್ತಿದ್ದ ಬಸ್​ನ ಚಾಲಕರನ್ನು ದರ್ಶನ್​ ಇಂದು ನೆನಪು ಮಾಡಿಕೊಂಡಿದ್ದಾರೆ. ಅವರ ಮನೆಗೆ ಭೇಟಿ ನೀಡಿ, ಕೆಲವು ಸಮಯ ಕಳೆದು ಬಂದಿದ್ದಾರೆ. ಆ ಖುಷಿಯನ್ನು ಅಭಿಮಾನಿಗಳ ಜೊತೆ ‘ಚಾಲೆಂಜಿಂಗ್​ ಸ್ಟಾರ್​’ ಹಂಚಿಕೊಂಡಿದ್ದಾರೆ.

‘ರಿಯಲ್​ ಸಾರಥಿ ಜೊತೆ ಸಾರಥಿಯ ಭೇಟಿ. ನಾವು ಶಾಲೆಗೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನ ಡ್ರೈವರ್​ ಇವರು. ಇಂದು ಅವರ 80ನೇ ಹುಟ್ಟುಹಬ್ಬದ ಸಲುವಾಗಿ ಭೇಟಿಯಾಗಿ ವಿಶ್​ ಮಾಡಿದ್ದೇನೆ. ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ’ ಎಂದು ಟ್ವಿಟರ್​ನಲ್ಲಿ ದರ್ಶನ್​ ಬರೆದುಕೊಂಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಎಲ್ಲೆಡೆ ಶೇರ್​ ಮಾಡುತ್ತಿದ್ದಾರೆ.

ಈಗಲೂ ದರ್ಶನ್​ಗೆ ಮೈಸೂರು ಎಂದರೆ ವಿಶೇಷ ಪ್ರೀತಿ. ಸಮಯ ಸಿಕ್ಕಾಗಲೆಲ್ಲ ಅವರು ಅಲ್ಲಿಗೆ ತೆರಳುತ್ತಾರೆ. ಶೂಟಿಂಗ್​ ಬಿಡುವಿನಲ್ಲಿ ಮೈಸೂರಿನ ತಮ್ಮ ಹಳೇ ಸ್ನೇಹಿತರನ್ನು ಭೇಟಿ ಮಾಡುತ್ತಾರೆ. ತಾವೊಬ್ಬ ಸೂಪರ್​ ಸ್ಟಾರ್​ ಎಂಬುದನ್ನು ಬದಿಗಿಟ್ಟು ಎಲ್ಲರ ಜೊತೆ ಬೆರೆಯುತ್ತಾರೆ. ಅದಕ್ಕೆ ಈ ಘಟನೆಯೇ ಲೇಟೆಸ್ಟ್​ ಉದಾಹರಣೆ. ಸದ್ಯ ದರ್ಶನ್​ ಭೇಟಿಯಾಗಿರುವ ವಿಶೇಷ ವ್ಯಕ್ತಿಯ ಹೆಸರು ಸುಂದರ್​ ರಾಜ್​. ಶಾಲೆ ಮಕ್ಕಳು ಅವರನ್ನು ಪ್ರೀತಿಯಿಂದ ಸುಂದರ್​ ಅಂಕಲ್​ ಎಂದು ಕರೆಯುತ್ತಿದ್ದರು. ಅದೇ ಪ್ರೀತಿಯನ್ನು ದರ್ಶನ್​ ಇಂದಿಗೂ ಇಟ್ಟುಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ದರ್ಶನ್​ ನಟನೆಯ ‘ರಾಬರ್ಟ್​’ ಚಿತ್ರ ಭಾರಿ ಯಶಸ್ಸು ಕಂಡಿದೆ. ಮೊದಲ ವಾರ 78.36 ಕೋಟಿ ರೂ. ಗಳಿಸಿದ ಈ ಸಿನಿಮಾ ದರ್ಶನ್​ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್​ ನೀಡಿದೆ. ಪ್ರೇಕ್ಷಕರು ಎರಡನೇ ವಾರ ಕೂಡ ಚಿತ್ರಮಂದಿರಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಫ್ಯಾಮಿಲಿ ಪ್ರೇಕ್ಷಕರು ಸಹ ರಾಬರ್ಟ್​ಗೆ ಮನ ಸೋತಿದ್ದಾರೆ. ಕೊರೊನಾ ಎರಡನೇ ಅಲೆ ಭೀತಿ ನಡುವೆಯೂ ಈ ಸಿನಿಮಾ ಸೂಪರ್​ ಹಿಟ್​ ಆಗಿದೆ.

ಇದನ್ನೂ ಓದಿ: ಮಂತ್ರಾಲಯದ ಗೋಶಾಲೆಯಲ್ಲಿ ಕಾಲ ಕಳೆದ ಡಿ ಬಾಸ್​ ದರ್ಶನ್​! ವಿಡಿಯೋ ವೈರಲ್​

Roberrt First Week Collection: ರಾಬರ್ಟ್​ ಗಳಿಕೆ ಒಂದು ವಾರಕ್ಕೆ 78.36 ಕೋಟಿ! ತೆಲುಗು ಕಲೆಕ್ಷನ್​ ಎಷ್ಟು?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ