AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ‘ರಾಬರ್ಟ್​’ ಬಿಡುಗಡೆಗೂ ಮುನ್ನ ಮತ್ತೊಂದು ಮುಖ್ಯ ವಿಚಾರದ ಬಗ್ಗೆ ‘ಚಾಲೆಂಜಿಂಗ್​ ಸ್ಟಾರ್’​ ದರ್ಶನ್​ ಪ್ರಸ್ತಾಪ!

ನಟ ದರ್ಶನ್​ ಅವರ ಗಮನವೆಲ್ಲ ಈಗ 'ರಾಬರ್ಟ್​' ಸಿನಿಮಾ ಬಿಡುಗಡೆಯ ಕಡೆಗೆ ಇದೆ. ಅದರ ನಡುವೆಯೂ ಅವರು ಪರಿಸರ ಕಾಳಜಿ ವ್ಯಕ್ತಪಡಿಸಿದ್ದಾರೆ. ಅದನ್ನು ಕಂಡು ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

Darshan: 'ರಾಬರ್ಟ್​' ಬಿಡುಗಡೆಗೂ ಮುನ್ನ ಮತ್ತೊಂದು ಮುಖ್ಯ ವಿಚಾರದ ಬಗ್ಗೆ 'ಚಾಲೆಂಜಿಂಗ್​ ಸ್ಟಾರ್'​ ದರ್ಶನ್​ ಪ್ರಸ್ತಾಪ!
ರಾಬರ್ಟ್​ ಸಿನಿಮಾದಲ್ಲಿ ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 4:55 PM

Share

‘ಡಿ ಬಾಸ್​’ ದರ್ಶನ್​ಗೆ ಸಿನಿಮಾ ಮಾತ್ರವಲ್ಲದೆ ಇತರೆ ಕ್ಷೇತ್ರಗಳಲ್ಲೂ ಆಸಕ್ತಿ ಹೆಚ್ಚು. ಕೃಷಿ, ಹೈನುಗಾರಿಕೆ, ಫೋಟೋಗ್ರಫಿ, ಕಾರುಗಳ ಕ್ರೇಜ್​ ಜೊತೆಗೆ ವನ್ಯಜೀವಿ ಸಂರಕ್ಷಣೆ ಬಗ್ಗೆಯೂ ಅವರಿಗೆ ಅಪಾರ ಆಸಕ್ತಿ ಇದೆ. ಈ ಬಗ್ಗೆ ಅನೇಕ ಬಾರಿ ಅವರು ಮಾತನಾಡಿದ್ದುಂಟು. ಈಗ ಮತ್ತೊಮ್ಮೆ ಕಾಡುಪ್ರಾಣಿಗಳ ರಕ್ಷಣೆ ಕುರಿತು ದರ್ಶನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಮೂಲಕ ಮುಖ್ಯವಾದ ಸಂದೇಶ ರವಾನಿಸಿದ್ದಾರೆ.

‘ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ. ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ. ನಿಮಗೆ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ! ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ! ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ. ನಿಮ್ಮ ದಾಸ ದರ್ಶನ್’ ಎಂದು ಅವರು ಟ್ವೀಟ್​ ಮಾಡಿದ್ದಾರೆ. ಜೊತೆಗೆ ಹುಲಿ, ಚಿರತೆ, ಆನೆಯ ಆಕರ್ಷಕ ಫೋಟೋಗಳನ್ನು ಕೂಡ ಅವರು ಶೇರ್​ ಮಾಡಿಕೊಂಡಿದ್ದಾರೆ.

ದರ್ಶನ್​ ಅವರು ಈ ವಿಚಾರದ ಬಗ್ಗೆ ಈಗ ಪ್ರಸ್ತಾಪ ಮಾಡಲು ಕಾರಣ ಇದೆ. ಮಾ.3ರಂದು ‘ವಿಶ್ವ ವನ್ಯಜೀವಿ ದಿನ’. ಆ ಪ್ರಯುಕ್ತ ವಿಶ್ವಾದ್ಯಂತ ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ಜಾಗೃತಿ ಮೂಡಿಸುವ ಕೆಲಸ ಆಗುತ್ತಿದೆ. ಅದರಲ್ಲಿ ದರ್ಶನ್​ ಕೂಡ ಕೈ ಜೋಡಿಸಿದ್ದು, ವನ್ಯಜೀವಿಗಳ ರಕ್ಷಣೆಯ ಮಹತ್ವವನ್ನು ಎಲ್ಲರಿಗೂ ತಿಳಿಸಿಹೇಳುವ ಪ್ರಯತ್ನವನ್ನು ಅವರು ಮಾಡಿದ್ದಾರೆ. ತಮ್ಮ ಈ ಪರಿಸರ ಕಾಳಜಿಯ ಸಲುವಾಗಿಯೇ ಅವರು ಈಗಾಗಲೇ ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯ ರಾಯಭಾರಿಯಾಗಿಯೂ ಕೆಲಸ ಮಾಡುತ್ತಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಶಿವರಾತ್ರಿ ಹಬ್ಬದ ಪ್ರಯುಕ್ತ ಮಾ.11ರಂದು ‘ರಾಬರ್ಟ್​’ ಚಿತ್ರ ಅದ್ದೂರಿಯಾಗಿ ತೆರೆ ಕಾಣಲು ಸಜ್ಜಾಗಿದೆ. ಕನ್ನಡದ ಜೊತೆಗೆ ತೆಲುಗಿನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ದರ್ಶನ್​ಗೆ ಜೋಡಿಯಾಗಿ ಹೊಸ ನಟಿ ಆಶಾ ಭಟ್​ ಅಭಿನಯಿಸಿದ್ದಾರೆ. ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದಾರೆ. ಈ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ರವಿಶಂಕರ್​, ಜಗಪತಿ ಬಾಬು, ರವಿಕಿಶನ್​, ದೇವರಾಜ್​ ಮುಂತಾದ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ