AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ‘ರಾಬರ್ಟ್​’ ಬಿಡುಗಡೆಗೂ ಮುನ್ನ ಮತ್ತೊಂದು ಮುಖ್ಯ ವಿಚಾರದ ಬಗ್ಗೆ ‘ಚಾಲೆಂಜಿಂಗ್​ ಸ್ಟಾರ್’​ ದರ್ಶನ್​ ಪ್ರಸ್ತಾಪ!

ನಟ ದರ್ಶನ್​ ಅವರ ಗಮನವೆಲ್ಲ ಈಗ 'ರಾಬರ್ಟ್​' ಸಿನಿಮಾ ಬಿಡುಗಡೆಯ ಕಡೆಗೆ ಇದೆ. ಅದರ ನಡುವೆಯೂ ಅವರು ಪರಿಸರ ಕಾಳಜಿ ವ್ಯಕ್ತಪಡಿಸಿದ್ದಾರೆ. ಅದನ್ನು ಕಂಡು ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

Darshan: 'ರಾಬರ್ಟ್​' ಬಿಡುಗಡೆಗೂ ಮುನ್ನ ಮತ್ತೊಂದು ಮುಖ್ಯ ವಿಚಾರದ ಬಗ್ಗೆ 'ಚಾಲೆಂಜಿಂಗ್​ ಸ್ಟಾರ್'​ ದರ್ಶನ್​ ಪ್ರಸ್ತಾಪ!
ರಾಬರ್ಟ್​ ಸಿನಿಮಾದಲ್ಲಿ ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 4:55 PM

Share

‘ಡಿ ಬಾಸ್​’ ದರ್ಶನ್​ಗೆ ಸಿನಿಮಾ ಮಾತ್ರವಲ್ಲದೆ ಇತರೆ ಕ್ಷೇತ್ರಗಳಲ್ಲೂ ಆಸಕ್ತಿ ಹೆಚ್ಚು. ಕೃಷಿ, ಹೈನುಗಾರಿಕೆ, ಫೋಟೋಗ್ರಫಿ, ಕಾರುಗಳ ಕ್ರೇಜ್​ ಜೊತೆಗೆ ವನ್ಯಜೀವಿ ಸಂರಕ್ಷಣೆ ಬಗ್ಗೆಯೂ ಅವರಿಗೆ ಅಪಾರ ಆಸಕ್ತಿ ಇದೆ. ಈ ಬಗ್ಗೆ ಅನೇಕ ಬಾರಿ ಅವರು ಮಾತನಾಡಿದ್ದುಂಟು. ಈಗ ಮತ್ತೊಮ್ಮೆ ಕಾಡುಪ್ರಾಣಿಗಳ ರಕ್ಷಣೆ ಕುರಿತು ದರ್ಶನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಮೂಲಕ ಮುಖ್ಯವಾದ ಸಂದೇಶ ರವಾನಿಸಿದ್ದಾರೆ.

‘ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ. ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ. ನಿಮಗೆ ಕಾಳಜಿಯನ್ನು ತೋರಿಸುತ್ತದೆ, ಅಪರಿಚಿತರಾಗಬೇಡಿ! ಪ್ರಾಣಿಗಳನ್ನು ಉಳಿಸಿ ಏಕೆಂದರೆ ಅವು ಈ ಪ್ರಪಂಚದ ಒಂದು ಭಾಗವಾಗಿದೆ! ವನ್ಯಜೀವಿಗಳಿಗಾಗಿ ನಿಲ್ಲುವ ಸಮಯ. ನಿಮ್ಮ ದಾಸ ದರ್ಶನ್’ ಎಂದು ಅವರು ಟ್ವೀಟ್​ ಮಾಡಿದ್ದಾರೆ. ಜೊತೆಗೆ ಹುಲಿ, ಚಿರತೆ, ಆನೆಯ ಆಕರ್ಷಕ ಫೋಟೋಗಳನ್ನು ಕೂಡ ಅವರು ಶೇರ್​ ಮಾಡಿಕೊಂಡಿದ್ದಾರೆ.

ದರ್ಶನ್​ ಅವರು ಈ ವಿಚಾರದ ಬಗ್ಗೆ ಈಗ ಪ್ರಸ್ತಾಪ ಮಾಡಲು ಕಾರಣ ಇದೆ. ಮಾ.3ರಂದು ‘ವಿಶ್ವ ವನ್ಯಜೀವಿ ದಿನ’. ಆ ಪ್ರಯುಕ್ತ ವಿಶ್ವಾದ್ಯಂತ ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ಜಾಗೃತಿ ಮೂಡಿಸುವ ಕೆಲಸ ಆಗುತ್ತಿದೆ. ಅದರಲ್ಲಿ ದರ್ಶನ್​ ಕೂಡ ಕೈ ಜೋಡಿಸಿದ್ದು, ವನ್ಯಜೀವಿಗಳ ರಕ್ಷಣೆಯ ಮಹತ್ವವನ್ನು ಎಲ್ಲರಿಗೂ ತಿಳಿಸಿಹೇಳುವ ಪ್ರಯತ್ನವನ್ನು ಅವರು ಮಾಡಿದ್ದಾರೆ. ತಮ್ಮ ಈ ಪರಿಸರ ಕಾಳಜಿಯ ಸಲುವಾಗಿಯೇ ಅವರು ಈಗಾಗಲೇ ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯ ರಾಯಭಾರಿಯಾಗಿಯೂ ಕೆಲಸ ಮಾಡುತ್ತಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಶಿವರಾತ್ರಿ ಹಬ್ಬದ ಪ್ರಯುಕ್ತ ಮಾ.11ರಂದು ‘ರಾಬರ್ಟ್​’ ಚಿತ್ರ ಅದ್ದೂರಿಯಾಗಿ ತೆರೆ ಕಾಣಲು ಸಜ್ಜಾಗಿದೆ. ಕನ್ನಡದ ಜೊತೆಗೆ ತೆಲುಗಿನಲ್ಲಿಯೂ ಈ ಚಿತ್ರ ಬಿಡುಗಡೆ ಆಗಲಿದೆ. ದರ್ಶನ್​ಗೆ ಜೋಡಿಯಾಗಿ ಹೊಸ ನಟಿ ಆಶಾ ಭಟ್​ ಅಭಿನಯಿಸಿದ್ದಾರೆ. ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದಾರೆ. ಈ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ರವಿಶಂಕರ್​, ಜಗಪತಿ ಬಾಬು, ರವಿಕಿಶನ್​, ದೇವರಾಜ್​ ಮುಂತಾದ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ