Rakshita Prem: ‘ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ’: ರಕ್ಷಿತಾ ಜನ್ಮದಿನಕ್ಕೆ ದರ್ಶನ್​ ವಿಶೇಷ ಮಾತು!

Darshan: ಸುಂಟರಗಾಳಿ, ಮಂಡ್ಯ, ಕಲಾಸಿಪಾಳ್ಯ, ಅಯ್ಯ ಸಿನಿಮಾಗಳಲ್ಲಿ ದರ್ಶನ್​ ಮತ್ತು ರಕ್ಷಿತಾ ಜೊತೆಯಾಗಿ ಮೋಡಿ ಮಾಡಿದ್ದರು. ಅಂದಿನಿಂದಲೂ ಇಬ್ಬರ ನಡುವೆ ಒಳ್ಳೆಯ ಸ್ನೇಹ ಮನೆ ಮಾಡಿದೆ.

Rakshita Prem: ‘ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ’: ರಕ್ಷಿತಾ ಜನ್ಮದಿನಕ್ಕೆ ದರ್ಶನ್​ ವಿಶೇಷ ಮಾತು!
ದರ್ಶನ್​ - ರಕ್ಷಿತಾ ಪ್ರೇಮ್​
Follow us
|

Updated on: Mar 31, 2021 | 11:28 AM

ನಟಿ ರಕ್ಷಿತಾ ಪ್ರೇಮ್​ ಅವರಿಗೆ ಇಂದು (ಮಾ.31) ಜನ್ಮದಿನದ ಸಂಭ್ರಮ. ಅಭಿಮಾನಿಗಳು, ಸ್ನೇಹಿತರು ಮತ್ತು ಅನೇಕ ಸೆಲೆಬ್ರಿಟಿಗಳು ರಕ್ಷಿತಾಗೆ ವಿಶ್​ ಮಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರಿಗೆ ಶುಭಾಶಯಗಳ ಮಹಾಪೂರ ಹರಿದುಬಂದಿದೆ. ಅದರಲ್ಲಿ ಹೆಚ್ಚು ಗಮನ ಸೆಳೆಯುತ್ತಿರುವುದು ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಮಾಡಿರುವ ವಿಶ್​. ತಮ್ಮ ಸ್ನೇಹಿತೆಗೆ ತುಂಬ ಪ್ರೀತಿಪೂರ್ವಕ ಮಾತುಗಳಿಂದ ‘ಡಿ ಬಾಸ್​’ ಶುಭಾಶಯ ಕೋರಿದ್ದಾರೆ.

‘ಹುಟ್ಟುಹಬ್ಬದ ಶುಭಾಶಯಗಳು. ಪ್ರತಿವರ್ಷ ಜನ್ಮದಿನಗಳು ಬರುತ್ತವೆ. ಆದರೆ ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ. ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಕ್ರೇಜಿ ಕ್ವೀನ್’ ಎಂದು ದರ್ಶನ್​ ಟ್ವೀಟ್​ ಮಾಡಿದ್ದಾರೆ. ರಕ್ಷಿತಾ ಜೊತೆಗಿರುವ ಒಂದು ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್​ ವೈರಲ್​ ಆಗುತ್ತಿದೆ.

ದರ್ಶನ್​ ಮಾಡಿರುವ ಈ ಟ್ವೀಟ್​ ಕಂಡು ರಕ್ಷಿತಾ ಪ್ರೇಮ್​ ಸಖತ್​ ಖುಷಿ ಆಗಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ‘ಥ್ಯಾಂಕ್ಯು ಮೈ ಡಿಯರೆಸ್ಟ್​… ನಿಮ್ಮ ಶುಭಾಶಯ ಎಂದರೆ ನನ್ನ ಪಾಲಿಗೆ ಇಡೀ ಜಗತ್ತು ಇದ್ದಂತೆ’ ಎಂದು ಟ್ವೀಟ್​ ಮಾಡಿದ್ದಾರೆ. ರಕ್ಷಿತಾ ಮತ್ತು ದರ್ಶನ್​ ಅವರದ್ದು ಬಹುಕಾಲದ ಗೆಳತನ. ಈಗಲೂ ಅವರ ನಡುವೆ ಅಷ್ಟೇ ಆಪ್ತತೆ ಇದೆ.

ದರ್ಶನ್​ ಅವರ ಸಿನಿಮಾಗಳ ಬಗ್ಗೆ ರಕ್ಷಿತಾ ಒಳ್ಳೆಯ ಮಾತುಗಳನ್ನು ಹೇಳುತ್ತಲೇ ಬಂದಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ‘ರಾಬರ್ಟ್​’ ಚಿತ್ರಕ್ಕೂ ಅವರು ಶುಭ ಕೋರಿದ್ದರು. ಮೊದಲ ದಿನವೇ ಈ ಸಿನಿಮಾಗೆ ಒಳ್ಳೆಯ ವಿಮರ್ಶೆಗಳು ಸಿಕ್ಕಿದ್ದರಿಂದ ಖುಷಿಯಾಗಿದ್ದ ರಕ್ಷಿತಾ ಅವರು ಇಡೀ ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು. ದರ್ಶನ್​ ಅವರ ಪ್ರತಿ ಯಶಸ್ಸನ್ನೂ ಅವರು ಸಂಭ್ರಮಿಸುತ್ತ, ತಮ್ಮ ಸ್ನೇಹಿತನನ್ನು ಸದಾ ಹುರಿದುಂಬಿಸುತ್ತಿದ್ದಾರೆ.

ಸ್ಯಾಂಡಲ್​ವುಡ್​ನ ಯಶಸ್ವಿ ಜೋಡಿಗಳಲ್ಲಿ ರಕ್ಷಿತಾ ಮತ್ತು ದರ್ಶನ್​ ಕೂಡ ಪ್ರಮುಖರು. ಅವರಿಬ್ಬರ ಕೆಮಿಸ್ಟ್ರೀಯನ್ನು ಪ್ರೇಕ್ಷಕರು ತುಂಬ ಇಷ್ಟಪಟ್ಟಿದ್ದರು. ಸುಂಟರಗಾಳಿ, ಮಂಡ್ಯ, ಕಲಾಸಿಪಾಳ್ಯ, ಅಯ್ಯ ಸಿನಿಮಾಗಳಲ್ಲಿ ದರ್ಶನ್​ ಮತ್ತು ರಕ್ಷಿತಾ ಜೊತೆಯಾಗಿ ಮೋಡಿ ಮಾಡಿದ್ದರು. ಅಂದಿನಿಂದಲೂ ಇಬ್ಬರ ನಡುವೆ ಒಳ್ಳೆಯ ಸ್ನೇಹ ಮನೆ ಮಾಡಿದೆ.

ಇದನ್ನೂ ಓದಿ: 100 ಕೋಟಿ ರೂ. ಬಾಚಿಕೊಂಡ ರಾಬರ್ಟ್​! ಸ್ಯಾಂಡಲ್​ವುಡ್​ನಲ್ಲಿ ದರ್ಶನ್​ ಹೊಸ ದಾಖಲೆ

ಕ್ರಿಕೆಟ್​ ಆಡುವಾಗ ಮೈದಾನದಲ್ಲೇ ಕಿತ್ತಾಡಿಕೊಂಡ ದರ್ಶನ್​-ಅಭಿಷೇಕ್​; ಅಸಲಿಗೆ ಅಲ್ಲಿ ನಡೆದಿದ್ದೇನು?

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ