AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದಗಜ’ ನಿರ್ದೇಶಕ ಮಹೇಶ್​ಗೆ ‘ರಾಬರ್ಟ್’​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!

ಮದಗಜ ಚಿತ್ರದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್​ ಕಾಣಿಸಿಕೊಂಡಿದ್ದಾರೆ. ಜಗಪತಿ ಬಾಬು ಚಿತ್ರದಲ್ಲಿ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ.

'ಮದಗಜ' ನಿರ್ದೇಶಕ ಮಹೇಶ್​ಗೆ 'ರಾಬರ್ಟ್'​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!
ಮಹೇಶ್​ ಕುಮಾರ್​ಗೆ ಕಾರ್​ ಗಿಫ್ಟ್​ ಮಾಡಿದ ಉಮಾಪತಿ ಶ್ರೀನಿವಾಸ್
Follow us
ರಾಜೇಶ್ ದುಗ್ಗುಮನೆ
|

Updated on: Mar 24, 2021 | 9:18 PM

ರಾಬರ್ಟ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಈ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಇದೇ ಖುಷಿಗೆ ಚಿತ್ರತಂಡ ಸಕ್ಸಸ್​ ಮೀಟ್​ ಕೂಡ ಮಾಡಿತ್ತು. ಅಚ್ಚರಿ ಎಂದರೆ, ಮದಗಜ ನಿರ್ದೇಶಕ ಮಹೇಶ್​ ಕುಮಾರ್​​ಗೆ ‘ರಾಬರ್ಟ್​’ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಕಾರ್ ಗಿಫ್ಟ್ ಮಾಡಿದ್ದಾರೆ. ಅಷ್ಟಕ್ಕೂ ಇದಕ್ಕೆ ಕಾರಣ ಏನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ರಾಬರ್ಟ್​’ ಸಿನಿಮಾ ನಿರ್ಮಾಣ ಮಾಡಿ ಯಶಸ್ಸು ಕಂಡಿರುವ ಉಮಾಪತಿ ಶ್ರೀನಿವಾಸ್​ ಅವರೇ ಶ್ರೀಮುರುಳಿ ನಟನೆಯ ‘ಮದಗಜ’ ಚಿತ್ರಕ್ಕೂ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರದ ಡಬ್ಬಿಂಗ್​ ರೈಟ್ಸ್​ ಸೇರಿ ಅನೇಕ ವಿಚಾರದಲ್ಲಿ ಒಳ್ಳೆಯ ಗಳಿಕೆ ಮಾಡಿದೆ. ಇದೇ ಖುಷಿಗೆ ಉಮಾಪತಿ ಅವರು ಮಹೇಶ್​ಗೆ ಹ್ಯುಂಡೈ ವೆನ್ಯು ಕಾರನ್ನು ಗಿಫ್ಟ್​ ಆಗಿ ನೀಡಿದ್ದಾರೆ.

ಮಹೇಶ್​ ಅವರಿಗೆ ಕಾರ್ ಗಿಫ್ಟ್​ ನೀಡೋಕೆ ಮತ್ತೊಂದು ಕಾರಣವಿದೆ. ರಾಬರ್ಟ್​ ಸಿನಿಮಾ ಸಂದರ್ಭದಲ್ಲಿ ಸಾಕಷ್ಟು ಜವಾಬ್ದಾರಿಗಳನ್ನು ಮಹೇಶ್​ ತಾವೇ ತೆಗೆದುಕೊಂಡು ಅದನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ರಾಬರ್ಟ್​ ಸಕ್ಸಸ್​ ಮೀಟ್​ನ ವೇದಿಕೆಯಲ್ಲಿ ಈ ಬಗ್ಗೆ ದರ್ಶನ್​ ಹಾಗೂ ಉಮಾಪತಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಮಹೇಶ್​ಗೆ ಕಾರನ್ನು ಗಿಫ್ಟ್​ ನೀಡೋಕೆ ಇದು ಕೂಡ ಒಂದು ಕಾರಣವಾಗಿದೆ. ಸದ್ಯ, ಕಾರನ್ನು ಗಿಫ್ಟ್​ ಪಡೆದಿರುವ ಮಹೇಶ್​ ಸಖತ್​ ಖುಷಿಯಾಗಿದ್ದಾರೆ. ಅಷ್ಟೇ ಅಲ್ಲ, ಉಮಾಪತಿ ಅವರಿಗೆ ಧನ್ಯವಾದ ಕೂಡ ಹೇಳಿದ್ದಾರೆ.

ಮದಗಜ ಚಿತ್ರದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್​ ಕಾಣಿಸಿಕೊಂಡಿದ್ದಾರೆ. ಜಗಪತಿ ಬಾಬು ಚಿತ್ರದಲ್ಲಿ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರ್​ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ನವೀನ್​ ಕುಮಾರ್​ ಕ್ಯಾಮರಾ ಕೈಚಳಕ ಈ ಸಿನಿಮಾಗೆ ಇರಲಿದೆ.

ರಾಬರ್ಟ್​ ವಿಜಯ ಯಾತ್ರೆ

ರಾಬರ್ಟ್​ ಸಿನಿಮಾ ಗೆದ್ದರೆ ರಾಜ್ಯಾದ್ಯಂತ ಸಂಚರಿಸಿ ವಿಜಯ ಯಾತ್ರೆ ಮಾಡಬೇಕು ಎಂಬ ಆಲೋಚನೆ ಚಿತ್ರತಂಡಕ್ಕಿತ್ತು. ಆ ಬಗ್ಗೆ ಆಲೋಚನೆ ಮಾಡುವುದಾಗಿ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಕೂಡ ಹೇಳಿದ್ದರು. ಆ ಕುರಿತು ತಂಡ ನಿರ್ಧಾರ ತೆಗೆದುಕೊಂಡಿದ್ದು, ಈಗ ವಿಜಯ ಯಾತ್ರೆಯ ವೇಳಾಪಟ್ಟಿಯನ್ನು ಹಂಚಿಕೊಂಡಿದೆ. ಮಾ.29ರಿಂದ ದರ್ಶನ್​ ರಾಜ್ಯ ಸಂಚಾರ ಶುರು ಮಾಡಲಿದ್ದಾರೆ.

ಮಾ.29ರಂದು ತುಮಕೂರು, ಚಿತ್ರದುರ್ಗ, ದಾವಣಗೆರೆಗೆ ರಾಬರ್ಟ್​ ತಂಡದ ಜೊತೆ ದರ್ಶನ್​ ತೆರಳಲಿದ್ದಾರೆ. ಮಾ.30ರಂದು ಧಾರವಾಡ, ಹುಬ್ಬಳ್ಳಿ, ಹಾವೇರಿಗೆ ಭೇಟಿ ನೀಡಲಿದ್ದಾರೆ. ಮಾ.31ರಂದು ತಿಪಟೂರು, ಹಾಸನ ಹಾಗೂ ಶಿವಮೊಗ್ಗದ ಅಭಿಮಾನಿಗಳನ್ನು ದರ್ಶನ್​ ಭೇಟಿ ಆಗಲಿದ್ದಾರೆ. ಏ.1ರಂದು ಗಂಡ್ಲುಪೇಟೆ, ಮಂಡ್ಯ, ಮೈಸೂರು ಹಾಗೂ ಮದ್ದೂರಿಗೆ ಡಿ ಬಾಸ್​ ಭೇಟಿ ನೀಡಿದ್ದಾರೆ.

ರಾಜ್ಯಾದ್ಯಂತ ದರ್ಶನ್​ಗೆ ಅಭಿಮಾನಿಗಳಿದ್ದಾರೆ. ಅವರೆಲ್ಲರೂ ಪ್ರತಿ ವರ್ಷ ತಮ್ಮ ನೆಚ್ಚಿನ ನಟನ ಬರ್ತ್​ಡೇ ಆಚರಿಸಲು ಬೆಂಗಳೂರಿಗೆ ಬರುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಈ ಬಾರಿ ಸಾಧ್ಯವಾಗಿರಲಿಲ್ಲ. ಈಗ ಸ್ವತಃ ದರ್ಶನ್​ ಅವರೇ ಎಲ್ಲ ಜಿಲ್ಲೆಗಳಿಗೂ ತೆರಳಿ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡುತ್ತಿರುವುದು ವಿಶೇಷ. ರಾಬರ್ಟ್​ ಸಿನಿಮಾದ ಅಭೂತಪೂರ್ವ ಗೆಲುವಿಗೆ ಕಾರಣರಾದ ತಮ್ಮ ಎಲ್ಲ ಅಭಿಮಾನಿಗಳಿಗೆ ಈ ವೇಳೆ ದರ್ಶನ್​ ಧನ್ಯವಾದ ತಿಳಿಸಲಿದ್ದಾರೆ.

ಇದನ್ನೂ ಓದಿ: ‘ರಾಬರ್ಟ್​’ ಸೂಪರ್​ ಹಿಟ್​ ಆದಮೇಲೂ ಚಿತ್ರತಂಡದಿಂದ ಅಭಿಮಾನಿಗಳಿಗೆ ಮತ್ತೊಂದು ಗುಡ್​ ನ್ಯೂಸ್​! ಏನದು?

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ