AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದಗಜ’ ನಿರ್ದೇಶಕ ಮಹೇಶ್​ಗೆ ‘ರಾಬರ್ಟ್’​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!

ಮದಗಜ ಚಿತ್ರದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್​ ಕಾಣಿಸಿಕೊಂಡಿದ್ದಾರೆ. ಜಗಪತಿ ಬಾಬು ಚಿತ್ರದಲ್ಲಿ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ.

'ಮದಗಜ' ನಿರ್ದೇಶಕ ಮಹೇಶ್​ಗೆ 'ರಾಬರ್ಟ್'​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!
ಮಹೇಶ್​ ಕುಮಾರ್​ಗೆ ಕಾರ್​ ಗಿಫ್ಟ್​ ಮಾಡಿದ ಉಮಾಪತಿ ಶ್ರೀನಿವಾಸ್
ರಾಜೇಶ್ ದುಗ್ಗುಮನೆ
|

Updated on: Mar 24, 2021 | 9:18 PM

Share

ರಾಬರ್ಟ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಈ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಇದೇ ಖುಷಿಗೆ ಚಿತ್ರತಂಡ ಸಕ್ಸಸ್​ ಮೀಟ್​ ಕೂಡ ಮಾಡಿತ್ತು. ಅಚ್ಚರಿ ಎಂದರೆ, ಮದಗಜ ನಿರ್ದೇಶಕ ಮಹೇಶ್​ ಕುಮಾರ್​​ಗೆ ‘ರಾಬರ್ಟ್​’ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಕಾರ್ ಗಿಫ್ಟ್ ಮಾಡಿದ್ದಾರೆ. ಅಷ್ಟಕ್ಕೂ ಇದಕ್ಕೆ ಕಾರಣ ಏನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ರಾಬರ್ಟ್​’ ಸಿನಿಮಾ ನಿರ್ಮಾಣ ಮಾಡಿ ಯಶಸ್ಸು ಕಂಡಿರುವ ಉಮಾಪತಿ ಶ್ರೀನಿವಾಸ್​ ಅವರೇ ಶ್ರೀಮುರುಳಿ ನಟನೆಯ ‘ಮದಗಜ’ ಚಿತ್ರಕ್ಕೂ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರದ ಡಬ್ಬಿಂಗ್​ ರೈಟ್ಸ್​ ಸೇರಿ ಅನೇಕ ವಿಚಾರದಲ್ಲಿ ಒಳ್ಳೆಯ ಗಳಿಕೆ ಮಾಡಿದೆ. ಇದೇ ಖುಷಿಗೆ ಉಮಾಪತಿ ಅವರು ಮಹೇಶ್​ಗೆ ಹ್ಯುಂಡೈ ವೆನ್ಯು ಕಾರನ್ನು ಗಿಫ್ಟ್​ ಆಗಿ ನೀಡಿದ್ದಾರೆ.

ಮಹೇಶ್​ ಅವರಿಗೆ ಕಾರ್ ಗಿಫ್ಟ್​ ನೀಡೋಕೆ ಮತ್ತೊಂದು ಕಾರಣವಿದೆ. ರಾಬರ್ಟ್​ ಸಿನಿಮಾ ಸಂದರ್ಭದಲ್ಲಿ ಸಾಕಷ್ಟು ಜವಾಬ್ದಾರಿಗಳನ್ನು ಮಹೇಶ್​ ತಾವೇ ತೆಗೆದುಕೊಂಡು ಅದನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ರಾಬರ್ಟ್​ ಸಕ್ಸಸ್​ ಮೀಟ್​ನ ವೇದಿಕೆಯಲ್ಲಿ ಈ ಬಗ್ಗೆ ದರ್ಶನ್​ ಹಾಗೂ ಉಮಾಪತಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಮಹೇಶ್​ಗೆ ಕಾರನ್ನು ಗಿಫ್ಟ್​ ನೀಡೋಕೆ ಇದು ಕೂಡ ಒಂದು ಕಾರಣವಾಗಿದೆ. ಸದ್ಯ, ಕಾರನ್ನು ಗಿಫ್ಟ್​ ಪಡೆದಿರುವ ಮಹೇಶ್​ ಸಖತ್​ ಖುಷಿಯಾಗಿದ್ದಾರೆ. ಅಷ್ಟೇ ಅಲ್ಲ, ಉಮಾಪತಿ ಅವರಿಗೆ ಧನ್ಯವಾದ ಕೂಡ ಹೇಳಿದ್ದಾರೆ.

ಮದಗಜ ಚಿತ್ರದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್​ ಕಾಣಿಸಿಕೊಂಡಿದ್ದಾರೆ. ಜಗಪತಿ ಬಾಬು ಚಿತ್ರದಲ್ಲಿ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರ್​ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ನವೀನ್​ ಕುಮಾರ್​ ಕ್ಯಾಮರಾ ಕೈಚಳಕ ಈ ಸಿನಿಮಾಗೆ ಇರಲಿದೆ.

ರಾಬರ್ಟ್​ ವಿಜಯ ಯಾತ್ರೆ

ರಾಬರ್ಟ್​ ಸಿನಿಮಾ ಗೆದ್ದರೆ ರಾಜ್ಯಾದ್ಯಂತ ಸಂಚರಿಸಿ ವಿಜಯ ಯಾತ್ರೆ ಮಾಡಬೇಕು ಎಂಬ ಆಲೋಚನೆ ಚಿತ್ರತಂಡಕ್ಕಿತ್ತು. ಆ ಬಗ್ಗೆ ಆಲೋಚನೆ ಮಾಡುವುದಾಗಿ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಕೂಡ ಹೇಳಿದ್ದರು. ಆ ಕುರಿತು ತಂಡ ನಿರ್ಧಾರ ತೆಗೆದುಕೊಂಡಿದ್ದು, ಈಗ ವಿಜಯ ಯಾತ್ರೆಯ ವೇಳಾಪಟ್ಟಿಯನ್ನು ಹಂಚಿಕೊಂಡಿದೆ. ಮಾ.29ರಿಂದ ದರ್ಶನ್​ ರಾಜ್ಯ ಸಂಚಾರ ಶುರು ಮಾಡಲಿದ್ದಾರೆ.

ಮಾ.29ರಂದು ತುಮಕೂರು, ಚಿತ್ರದುರ್ಗ, ದಾವಣಗೆರೆಗೆ ರಾಬರ್ಟ್​ ತಂಡದ ಜೊತೆ ದರ್ಶನ್​ ತೆರಳಲಿದ್ದಾರೆ. ಮಾ.30ರಂದು ಧಾರವಾಡ, ಹುಬ್ಬಳ್ಳಿ, ಹಾವೇರಿಗೆ ಭೇಟಿ ನೀಡಲಿದ್ದಾರೆ. ಮಾ.31ರಂದು ತಿಪಟೂರು, ಹಾಸನ ಹಾಗೂ ಶಿವಮೊಗ್ಗದ ಅಭಿಮಾನಿಗಳನ್ನು ದರ್ಶನ್​ ಭೇಟಿ ಆಗಲಿದ್ದಾರೆ. ಏ.1ರಂದು ಗಂಡ್ಲುಪೇಟೆ, ಮಂಡ್ಯ, ಮೈಸೂರು ಹಾಗೂ ಮದ್ದೂರಿಗೆ ಡಿ ಬಾಸ್​ ಭೇಟಿ ನೀಡಿದ್ದಾರೆ.

ರಾಜ್ಯಾದ್ಯಂತ ದರ್ಶನ್​ಗೆ ಅಭಿಮಾನಿಗಳಿದ್ದಾರೆ. ಅವರೆಲ್ಲರೂ ಪ್ರತಿ ವರ್ಷ ತಮ್ಮ ನೆಚ್ಚಿನ ನಟನ ಬರ್ತ್​ಡೇ ಆಚರಿಸಲು ಬೆಂಗಳೂರಿಗೆ ಬರುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಈ ಬಾರಿ ಸಾಧ್ಯವಾಗಿರಲಿಲ್ಲ. ಈಗ ಸ್ವತಃ ದರ್ಶನ್​ ಅವರೇ ಎಲ್ಲ ಜಿಲ್ಲೆಗಳಿಗೂ ತೆರಳಿ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡುತ್ತಿರುವುದು ವಿಶೇಷ. ರಾಬರ್ಟ್​ ಸಿನಿಮಾದ ಅಭೂತಪೂರ್ವ ಗೆಲುವಿಗೆ ಕಾರಣರಾದ ತಮ್ಮ ಎಲ್ಲ ಅಭಿಮಾನಿಗಳಿಗೆ ಈ ವೇಳೆ ದರ್ಶನ್​ ಧನ್ಯವಾದ ತಿಳಿಸಲಿದ್ದಾರೆ.

ಇದನ್ನೂ ಓದಿ: ‘ರಾಬರ್ಟ್​’ ಸೂಪರ್​ ಹಿಟ್​ ಆದಮೇಲೂ ಚಿತ್ರತಂಡದಿಂದ ಅಭಿಮಾನಿಗಳಿಗೆ ಮತ್ತೊಂದು ಗುಡ್​ ನ್ಯೂಸ್​! ಏನದು?

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ