AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸ್​ ಆಸೆಗೆ ತಣ್ಣೀರು ಎರಚಿದ ‘ಡಿ ಬಾಸ್​’! ಅದರ ಹಿಂದಿನ ಉದ್ದೇಶಕ್ಕೆ ಭೇಷ್​ ಎನ್ನಲೇಬೇಕು

‘ರಾಬರ್ಟ್​’​ ಸಿನಿಮಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಕಟೌಟ್​ ವಿಚಾರದಲ್ಲಿ ಕೆಲವು ಫ್ಯಾನ್ಸ್​ಗೆ ನಿರಾಸೆ ಆಗಿದೆ.

ಫ್ಯಾನ್ಸ್​ ಆಸೆಗೆ ತಣ್ಣೀರು ಎರಚಿದ ‘ಡಿ ಬಾಸ್​’! ಅದರ ಹಿಂದಿನ ಉದ್ದೇಶಕ್ಕೆ ಭೇಷ್​ ಎನ್ನಲೇಬೇಕು
ರಾಬರ್ಟ್​ ಸಿನಿಮಾದಲ್ಲಿ ದರ್ಶನ್​
ಮದನ್​ ಕುಮಾರ್​
| Edited By: |

Updated on: Mar 10, 2021 | 4:47 PM

Share

‘ಚಾಲೆಂಜಿಂಗ್ ಸ್ಟಾರ್’ ದರ್ಶನ್​ ಅವರು ಬಹುದಿನಗಳ ಬಳಿಕ ಬೆಳ್ಳಿತೆರೆ ಮೇಲೆ ಅಭಿಮಾನಿಗಳಿಗೆ ದರ್ಶನ ನೀಡಲು ಬರುತ್ತಿರುವುದರಿಂದ ಸಹಜವಾಗಿಯೇ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಹಲವು ಕಡೆಗಳಲ್ಲಿ ಕಟೌಟ್​ಗಳು ತಲೆ ಎತ್ತಿವೆ. ಆದರೆ ಫ್ಯಾನ್ಸ್​ ಮಾಡಿಕೊಂಡಿದ್ದ ಒಂದು ಭರ್ಜರಿ ಪ್ಲ್ಯಾನ್​ಗೆ ‘ಡಿ ಬಾಸ್’​ ನೋ ಎಂದಿದ್ದಾರೆ.

ಬೆಂಗಳೂರಿನ ಅನೇಕ ಚಿತ್ರಮಂದಿರಗಳ ಎದುರು ದರ್ಶನ್​ ಅವರ ಬೃಹತ್​ ಕಟೌಟ್​ಗಳು ರಾರಾಜಿಸುತ್ತಿವೆ. ಅದೇ ರೀತಿ ಕೆ.ಆರ್​. ಪುರದ ಕೃಷ್ಣ ಥಿಯೇಟರ್​ ಎದುರಿನಲ್ಲಿ 201 ಅಡಿ ಎತ್ತರದ ಕಟೌಟ್​ ನಿಲ್ಲಿಸಲು ಫ್ಯಾನ್ಸ್​ ಪ್ಲ್ಯಾನ್​ ಮಾಡಿಕೊಂಡಿದ್ದರು. ಅಷ್ಟೇ ಅಲ್ಲ, ಅದಕ್ಕೆ ಹೆಲಿಕಾಪ್ಟರ್​ ಮೂಲಕ ಹೂವಿನ ಮಳೆ ಸುರಿಸಬೇಕು ಎಂಬುದು ಕೂಡ ಅಭಿಮಾನಿಗಳ ಆಸೆ ಆಗಿತ್ತು. ಆದರೆ ಅದಕ್ಕೆ ದರ್ಶನ್ ಅವಕಾಶ ನೀಡಿಲ್ಲ! ಅದು ಕೆಲವು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಈ ಬಗ್ಗೆ ಉಮಾಪತಿ ಶ್ರೀನಿವಾಸ್​ ಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ದರ್ಶನ್​ ವೈಭವೀಕರಣವನ್ನು ಇಷ್ಟಪಡುತ್ತಾರೆ ಅಂತ ಜನರು ತಿಳಿದುಕೊಂಡಿದ್ದಾರೆ. ಆದರೆ ಅದು ನಿಜವಲ್ಲ. ಬೇರೆ ಕಲಾವಿದರಿಗೋಸ್ಕರ ದರ್ಶನ್​ ಏನು ಬೇಕಾದರೂ ಮಾಡಿಸುತ್ತಾರೆ. ಆದರೆ ತಮ್ಮ ವಿಚಾರದಲ್ಲಿ ಆಡಂಬರ ಬಯಸುವುದಿಲ್ಲ. ಅದೇ ದುಡ್ಡನ್ನು ಬಡವರಿಗೆ ನೀಡಿ ಅಂತ ದರ್ಶನ್​ ಹೇಳುತ್ತಾರೆ’ ಎಂಬುದು ಉಮಾಪತಿ ಶ್ರೀನಿವಾಸ್​ ಮಾತುಗಳು.

ದರ್ಶನ್​ರನ್ನು ಮೆಚ್ಚಿಸಬೇಕು ಅಂತ ಅಭಿಮಾನಿಗಳು ತಮ್ಮ ದುಡ್ಡು ಕರ್ಚು ಮಾಡುತ್ತಾರೆ. ಆದರೆ ಅದು ದರ್ಶನ್​ಗೆ ಇಷ್ಟ ಆಗುವುದಿಲ್ಲ. ಅಭಿಮಾನದ ಹೆಸರಿನಲ್ಲಿ ಹಾಗೆಲ್ಲ ಹಣ ವ್ಯಯ ಮಾಡಿಸಲು ದರ್ಶನ್​ ಬಿಡುವುದಿಲ್ಲ. ಅದನ್ನು ಅವರು ಒಪ್ಪುವುದೂ ಇಲ್ಲ. ಅದರ ಬದಲು ಅಭಿಮಾನಿಗಳು ಅವರವರ ತಂದೆ-ತಾಯಿಯನ್ನು ಚೆನ್ನಾಗಿ ನೋಡಿಕೊಂಡರೆ ಸಾಕು ಎಂಬುದು ದರ್ಶನ್​ ಉದ್ದೇಶ.

ಇದನ್ನೂ ಓದಿ: ದರ್ಶನ್​ಗೆ ಸ್ವಿಮ್ಮಿಂಗ್​ ಬರಲ್ಲ; ಆದರೂ ರಾಬರ್ಟ್​ಗಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ‘ಚಾಲೆಂಜಿಂಗ್​ ಸ್ಟಾರ್​’!

‘ರಾಬರ್ಟ್​’ನಲ್ಲಿ ದರ್ಶನ್​ ಖಡಕ್​ ಆಗಿ ಹೇಳಿದ ‘ಏ ತುಕಾಲಿ…’ ಡೈಲಾಗ್​ನ ಹಿಂದಿದೆ ಇಂಟರೆಸ್ಟಿಂಗ್​ ವಿಷ್ಯ!

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ