AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Movie: ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ; ಶುರುವಾಯ್ತು ರಾಬರ್ಟ್​ ಸಿನಿಮಾ ಜ್ವರ

ಸಾಮಾನ್ಯವಾಗಿ ಸಿನಿಮಾ ರಿಲೀಸ್​ ಆದ ದಿನ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸೋದು ವಾಡಿಕೆ. ಆದರೆ, ಈಗ ಸಿನಿಮಾ ರಿಲೀಸ್​ಗೆ ಅನೇಕ ದಿನಗಳು ಬಾಕಿ ಇರುವಾಗಲೇ ಹಾಲಿನ ಅಭಿಷೇಕ ಮಾಡಲಾಗುತ್ತಿದೆ.

Roberrt Movie: ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ; ಶುರುವಾಯ್ತು ರಾಬರ್ಟ್​ ಸಿನಿಮಾ ಜ್ವರ
ಮಂಡ್ಯದಲ್ಲಿ ಹಾಲಿನ ಅಭಿಷೇಕ ಮಾಡುತ್ತಿರುವ ಅಭಿಮಾನಿಗಳು
ರಾಜೇಶ್ ದುಗ್ಗುಮನೆ
|

Updated on: Mar 08, 2021 | 8:10 PM

Share

ದರ್ಶನ್​ ನಟೆಯ ರಾಬರ್ಟ್​ ಸಿನಿಮಾ ತೆರೆಕಾಣೋಕೆ ಇನ್ನೂ ನಾಲ್ಕು ದಿನ ಬಾಕಿ ಉಳಿದಿವೆ. ಹೀಗಿರುವಾಗಲೇ ಸಿನಿಮಾದ ಅಬ್ಬರ ಜೋರಾಗಿದೆ. ಆನ್​ಲೈನ್​ ಟಿಕೆಟ್​ ಬುಕಿಂಗ್​ನಲ್ಲಿ ರಾಬರ್ಟ್ ಅಬ್ಬರ ತೋರುತ್ತಿದ್ದು, ಗುರುವಾರದ ಅನೇಕ ಶೋಗಳು ಈಗಾಗಲೇ ಸೋಲ್ಡ್​ ಔಟ್​ ಆಗಿದೆ. ಇನ್ನು, ಸಿನಿಮಾ ರಿಲೀಸ್​ಗೆ ಕೆಲ ದಿನ ಬಾಕಿ ಇರುವಾಗಲೇ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ.

ಅಭಿಮಾನಿಗಳು ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರನ್ನು ಬೆಳ್ಳಿಪರದೆ ಮೇಲೆ ನೋಡಿ ತುಂಬ ದಿನಗಳಾಗಿವೆ. 2019ರ ಡಿಸೆಂಬರ್​ನಲ್ಲಿ ‘ಒಡೆಯ’ ಚಿತ್ರ ತೆರೆಕಂಡಿತ್ತು. ನಂತರ ಲಾಕ್​ಡೌನ್​ ಆರಂಭ ಆಗಿದ್ದರಿಂದ ‘ರಾಬರ್ಟ್​’ ಆಗಮನ ತಡವಾಯಿತು. ಒಂದು ವರ್ಷಕ್ಕಿಂತಲೂ ದೀರ್ಘವಾದ ಗ್ಯಾಪ್​ ಬಳಿಕ ದರ್ಶನ್​ ಅವರು ಅಭಿಮಾನಿಗಳನ್ನು ರಂಜಿಸಲು ಬರುತ್ತಿರುವುದರಿಂದ ತಮ್ಮ ನೆಚ್ಚಿನ ನಟನನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಹೀಗಾಗಿ ರಾಬರ್ಟ್​ ನೋಡೋಕೆ ಅಭಿಮಾನಿಗಳು ತುದಿಕಾಲಿನಲ್ಲಿ ನಿಂತಿದ್ದಾರೆ.

ಸಾಮಾನ್ಯವಾಗಿ ಸಿನಿಮಾ ರಿಲೀಸ್​ ಆದ ದಿನ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸೋದು ವಾಡಿಕೆ. ಆದರೆ, ರಾಬರ್ಟ್​ ಸಿನಿಮಾ ರಿಲೀಸ್​ ಆಗೋಕೆ ಇನ್ನೂ ಕೆಲ ದಿನ ಬಾಕಿ ಇರುವಾಗಲೇ ದರ್ಶನ್​ ಫೋಟೋಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ ಅಭಿಮಾನಿಗಳು.

ಮಂಡ್ಯದಲ್ಲಿ ರಾಬರ್ಟ್​ ಹವಾ ಜೋರಾಗಿದೆ. ಇಲ್ಲಿನ ದರ್ಶನ್​ ಅಭಿಮಾನಿಗಳು ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಅಷ್ಟೇ ಅಲ್ಲ, ದರ್ಶನ್​ ಸಿನಿಮಾ ಹವಾ ನೋಡಿ ಸಾಕಷ್ಟು ಮಂದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದಾರೆ. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Roberrt Movie: ನಾಲ್ಕು ದಿನ ಮೊದಲೇ ಸೋಲ್ಡ್​ ಔಟ್​ ಆದ ರಾಬರ್ಟ್​ ಟಿಕೆಟ್​; ಇದು ದರ್ಶನ್​ ಹವಾ!

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ