AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Movie: ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ; ಶುರುವಾಯ್ತು ರಾಬರ್ಟ್​ ಸಿನಿಮಾ ಜ್ವರ

ಸಾಮಾನ್ಯವಾಗಿ ಸಿನಿಮಾ ರಿಲೀಸ್​ ಆದ ದಿನ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸೋದು ವಾಡಿಕೆ. ಆದರೆ, ಈಗ ಸಿನಿಮಾ ರಿಲೀಸ್​ಗೆ ಅನೇಕ ದಿನಗಳು ಬಾಕಿ ಇರುವಾಗಲೇ ಹಾಲಿನ ಅಭಿಷೇಕ ಮಾಡಲಾಗುತ್ತಿದೆ.

Roberrt Movie: ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ; ಶುರುವಾಯ್ತು ರಾಬರ್ಟ್​ ಸಿನಿಮಾ ಜ್ವರ
ಮಂಡ್ಯದಲ್ಲಿ ಹಾಲಿನ ಅಭಿಷೇಕ ಮಾಡುತ್ತಿರುವ ಅಭಿಮಾನಿಗಳು
ರಾಜೇಶ್ ದುಗ್ಗುಮನೆ
|

Updated on: Mar 08, 2021 | 8:10 PM

Share

ದರ್ಶನ್​ ನಟೆಯ ರಾಬರ್ಟ್​ ಸಿನಿಮಾ ತೆರೆಕಾಣೋಕೆ ಇನ್ನೂ ನಾಲ್ಕು ದಿನ ಬಾಕಿ ಉಳಿದಿವೆ. ಹೀಗಿರುವಾಗಲೇ ಸಿನಿಮಾದ ಅಬ್ಬರ ಜೋರಾಗಿದೆ. ಆನ್​ಲೈನ್​ ಟಿಕೆಟ್​ ಬುಕಿಂಗ್​ನಲ್ಲಿ ರಾಬರ್ಟ್ ಅಬ್ಬರ ತೋರುತ್ತಿದ್ದು, ಗುರುವಾರದ ಅನೇಕ ಶೋಗಳು ಈಗಾಗಲೇ ಸೋಲ್ಡ್​ ಔಟ್​ ಆಗಿದೆ. ಇನ್ನು, ಸಿನಿಮಾ ರಿಲೀಸ್​ಗೆ ಕೆಲ ದಿನ ಬಾಕಿ ಇರುವಾಗಲೇ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ.

ಅಭಿಮಾನಿಗಳು ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರನ್ನು ಬೆಳ್ಳಿಪರದೆ ಮೇಲೆ ನೋಡಿ ತುಂಬ ದಿನಗಳಾಗಿವೆ. 2019ರ ಡಿಸೆಂಬರ್​ನಲ್ಲಿ ‘ಒಡೆಯ’ ಚಿತ್ರ ತೆರೆಕಂಡಿತ್ತು. ನಂತರ ಲಾಕ್​ಡೌನ್​ ಆರಂಭ ಆಗಿದ್ದರಿಂದ ‘ರಾಬರ್ಟ್​’ ಆಗಮನ ತಡವಾಯಿತು. ಒಂದು ವರ್ಷಕ್ಕಿಂತಲೂ ದೀರ್ಘವಾದ ಗ್ಯಾಪ್​ ಬಳಿಕ ದರ್ಶನ್​ ಅವರು ಅಭಿಮಾನಿಗಳನ್ನು ರಂಜಿಸಲು ಬರುತ್ತಿರುವುದರಿಂದ ತಮ್ಮ ನೆಚ್ಚಿನ ನಟನನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಹೀಗಾಗಿ ರಾಬರ್ಟ್​ ನೋಡೋಕೆ ಅಭಿಮಾನಿಗಳು ತುದಿಕಾಲಿನಲ್ಲಿ ನಿಂತಿದ್ದಾರೆ.

ಸಾಮಾನ್ಯವಾಗಿ ಸಿನಿಮಾ ರಿಲೀಸ್​ ಆದ ದಿನ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸೋದು ವಾಡಿಕೆ. ಆದರೆ, ರಾಬರ್ಟ್​ ಸಿನಿಮಾ ರಿಲೀಸ್​ ಆಗೋಕೆ ಇನ್ನೂ ಕೆಲ ದಿನ ಬಾಕಿ ಇರುವಾಗಲೇ ದರ್ಶನ್​ ಫೋಟೋಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ ಅಭಿಮಾನಿಗಳು.

ಮಂಡ್ಯದಲ್ಲಿ ರಾಬರ್ಟ್​ ಹವಾ ಜೋರಾಗಿದೆ. ಇಲ್ಲಿನ ದರ್ಶನ್​ ಅಭಿಮಾನಿಗಳು ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಅಷ್ಟೇ ಅಲ್ಲ, ದರ್ಶನ್​ ಸಿನಿಮಾ ಹವಾ ನೋಡಿ ಸಾಕಷ್ಟು ಮಂದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದಾರೆ. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Roberrt Movie: ನಾಲ್ಕು ದಿನ ಮೊದಲೇ ಸೋಲ್ಡ್​ ಔಟ್​ ಆದ ರಾಬರ್ಟ್​ ಟಿಕೆಟ್​; ಇದು ದರ್ಶನ್​ ಹವಾ!

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ