AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Movie: ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ; ಶುರುವಾಯ್ತು ರಾಬರ್ಟ್​ ಸಿನಿಮಾ ಜ್ವರ

ಸಾಮಾನ್ಯವಾಗಿ ಸಿನಿಮಾ ರಿಲೀಸ್​ ಆದ ದಿನ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸೋದು ವಾಡಿಕೆ. ಆದರೆ, ಈಗ ಸಿನಿಮಾ ರಿಲೀಸ್​ಗೆ ಅನೇಕ ದಿನಗಳು ಬಾಕಿ ಇರುವಾಗಲೇ ಹಾಲಿನ ಅಭಿಷೇಕ ಮಾಡಲಾಗುತ್ತಿದೆ.

Roberrt Movie: ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ; ಶುರುವಾಯ್ತು ರಾಬರ್ಟ್​ ಸಿನಿಮಾ ಜ್ವರ
ಮಂಡ್ಯದಲ್ಲಿ ಹಾಲಿನ ಅಭಿಷೇಕ ಮಾಡುತ್ತಿರುವ ಅಭಿಮಾನಿಗಳು
ರಾಜೇಶ್ ದುಗ್ಗುಮನೆ
|

Updated on: Mar 08, 2021 | 8:10 PM

Share

ದರ್ಶನ್​ ನಟೆಯ ರಾಬರ್ಟ್​ ಸಿನಿಮಾ ತೆರೆಕಾಣೋಕೆ ಇನ್ನೂ ನಾಲ್ಕು ದಿನ ಬಾಕಿ ಉಳಿದಿವೆ. ಹೀಗಿರುವಾಗಲೇ ಸಿನಿಮಾದ ಅಬ್ಬರ ಜೋರಾಗಿದೆ. ಆನ್​ಲೈನ್​ ಟಿಕೆಟ್​ ಬುಕಿಂಗ್​ನಲ್ಲಿ ರಾಬರ್ಟ್ ಅಬ್ಬರ ತೋರುತ್ತಿದ್ದು, ಗುರುವಾರದ ಅನೇಕ ಶೋಗಳು ಈಗಾಗಲೇ ಸೋಲ್ಡ್​ ಔಟ್​ ಆಗಿದೆ. ಇನ್ನು, ಸಿನಿಮಾ ರಿಲೀಸ್​ಗೆ ಕೆಲ ದಿನ ಬಾಕಿ ಇರುವಾಗಲೇ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ.

ಅಭಿಮಾನಿಗಳು ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರನ್ನು ಬೆಳ್ಳಿಪರದೆ ಮೇಲೆ ನೋಡಿ ತುಂಬ ದಿನಗಳಾಗಿವೆ. 2019ರ ಡಿಸೆಂಬರ್​ನಲ್ಲಿ ‘ಒಡೆಯ’ ಚಿತ್ರ ತೆರೆಕಂಡಿತ್ತು. ನಂತರ ಲಾಕ್​ಡೌನ್​ ಆರಂಭ ಆಗಿದ್ದರಿಂದ ‘ರಾಬರ್ಟ್​’ ಆಗಮನ ತಡವಾಯಿತು. ಒಂದು ವರ್ಷಕ್ಕಿಂತಲೂ ದೀರ್ಘವಾದ ಗ್ಯಾಪ್​ ಬಳಿಕ ದರ್ಶನ್​ ಅವರು ಅಭಿಮಾನಿಗಳನ್ನು ರಂಜಿಸಲು ಬರುತ್ತಿರುವುದರಿಂದ ತಮ್ಮ ನೆಚ್ಚಿನ ನಟನನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಹೀಗಾಗಿ ರಾಬರ್ಟ್​ ನೋಡೋಕೆ ಅಭಿಮಾನಿಗಳು ತುದಿಕಾಲಿನಲ್ಲಿ ನಿಂತಿದ್ದಾರೆ.

ಸಾಮಾನ್ಯವಾಗಿ ಸಿನಿಮಾ ರಿಲೀಸ್​ ಆದ ದಿನ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸೋದು ವಾಡಿಕೆ. ಆದರೆ, ರಾಬರ್ಟ್​ ಸಿನಿಮಾ ರಿಲೀಸ್​ ಆಗೋಕೆ ಇನ್ನೂ ಕೆಲ ದಿನ ಬಾಕಿ ಇರುವಾಗಲೇ ದರ್ಶನ್​ ಫೋಟೋಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ ಅಭಿಮಾನಿಗಳು.

ಮಂಡ್ಯದಲ್ಲಿ ರಾಬರ್ಟ್​ ಹವಾ ಜೋರಾಗಿದೆ. ಇಲ್ಲಿನ ದರ್ಶನ್​ ಅಭಿಮಾನಿಗಳು ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಅಷ್ಟೇ ಅಲ್ಲ, ದರ್ಶನ್​ ಸಿನಿಮಾ ಹವಾ ನೋಡಿ ಸಾಕಷ್ಟು ಮಂದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದಾರೆ. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Roberrt Movie: ನಾಲ್ಕು ದಿನ ಮೊದಲೇ ಸೋಲ್ಡ್​ ಔಟ್​ ಆದ ರಾಬರ್ಟ್​ ಟಿಕೆಟ್​; ಇದು ದರ್ಶನ್​ ಹವಾ!

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ