AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Telugu Teaser ತೆಲುಗಿನಲ್ಲಿ ಅಬ್ಬರಿಸೋಕೆ ರಾಬರ್ಟ್​ ರೆಡಿ: ನಾಳೆ ಸಂಜೆ 04:05 ಕ್ಕೆ ರಿಲೀಸ್

Roberrt Telugu Teaser: ಕಳೆದ ವರ್ಷ ಕನ್ನಡದಲ್ಲಿ ರಾಬರ್ಟ್​ ಟೀಸರ್​ ರಿಲೀಸ್​ ಆಗಿತ್ತು. ದರ್ಶನ್​ ಅವರು ಸಾಕಷ್ಟು ಆ್ಯಕ್ಷನ್​ ದ್ರಶ್ಯಗಳೊಂದಿಗೆ ಮಿಂಚಿದ್ದರು. ಈಗ ಟಾಲಿವುಡ್​ನಲ್ಲೂ ರಾಬರ್ಟ್​ ಸಿನಿಮಾದ ಟೀಸರ್​ ಹವಾ ಸೃಷ್ಟಿಸೋಕೆ ರೆಡಿ ಆಗಿದೆ.

Roberrt Telugu Teaser ತೆಲುಗಿನಲ್ಲಿ ಅಬ್ಬರಿಸೋಕೆ ರಾಬರ್ಟ್​ ರೆಡಿ: ನಾಳೆ ಸಂಜೆ 04:05 ಕ್ಕೆ ರಿಲೀಸ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Feb 02, 2021 | 4:10 PM

Share

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಬರ್ಟ್​ ಸಿನಿಮಾ ಕನ್ನಡದಲ್ಲಿ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗ ತೆಲುಗಿನಲ್ಲೂ ರಾಬರ್ಟ್​ ರಿಲೀಸ್​ಗೆ ರೆಡಿ ಇದ್ದು ನಾಳೆ ಸಂಜೆ ನಾಲ್ಕು ಗಂಟೆಗೆ ಟೀಸರ್​ ರಿಲೀಸ್​ ಆಗಲಿದೆ.

ಕನ್ನಡದ ಜತೆಜತೆಗೆ ತೆಲುಗಿನಲ್ಲೂ ರಾಬರ್ಟ್​ ಬಿಡುಡೆ​ಗೆ ಸಿದ್ಧವಾಗಿತ್ತು. ಆದರೆ, ಟಾಲಿವುಡ್​ನಲ್ಲಿ ಸಿನಿಮಾ ರಿಲೀಸ್​ ಮಾಡೋಕೆ ಕೆಲವರು ಅಡ್ಡಿ ಮಾಡಿದ್ದರು. ಈ ವಿಚಾರವಾಗಿ ದಾಸ ದರ್ಶನ್​ ಸಿಟ್ಟಾಗಿದ್ದರು ಕೂಡ. ನಂತರ ಈ ಸಮಸ್ಯೆ ಬಗೆ ಹರಿದಿತ್ತು. ಈ ಹಿನ್ನೆಲೆಯಲ್ಲಿ, ಮಾರ್ಚ್​ 11ರಂದೇ ತೆಲುಗಿನಲ್ಲೂ ರಾಬರ್ಟ್​ ಸಿನಿಮಾ ರಿಲೀಸ್​ ಆಗುತ್ತಿದೆ. ಇದಕ್ಕೂ ಮೊದಲು ಟಾಲಿವುಡ್​ ಮಂದಿಗೆ ರಾಬರ್ಟ್​ ಸಿನಿಮಾದ ಟೀಸರ್​ ದರ್ಶನ ಮಾಡಿಸುತ್ತಿದೆ ಚಿತ್ರತಂಡ.

ಕಳೆದ ವರ್ಷ ಕನ್ನಡದಲ್ಲಿ ರಾಬರ್ಟ್​ ಟೀಸರ್​ ರಿಲೀಸ್​ ಆಗಿತ್ತು. ದರ್ಶನ್​ ಅವರು ಸಾಕಷ್ಟು ಆ್ಯಕ್ಷನ್​ ದ್ರಶ್ಯಗಳೊಂದಿಗೆ ಮಿಂಚಿದ್ದರು. ಈಗ ಟಾಲಿವುಡ್​ನಲ್ಲೂ ರಾಬರ್ಟ್​ ಸಿನಿಮಾದ ಟೀಸರ್​ ಹವಾ ಸೃಷ್ಟಿಸೋಕೆ ರೆಡಿ ಆಗಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿನಿಮಾ ನಿರ್ದೇಶಕ ತರುಣ್​ ಸುಧೀರ್​, ರಾಬರ್ಟ್​ ತೆಲುಗು ಸಿನಿಮಾ ಟೀಸರ್​ ಫೆಬ್ರವರಿ 3ರಂದು 04:05 ರಿಲೀಸ್ ಆಗುತ್ತಿದೆ. ನಿಮ್ಮ ಬೆಂಬಲ ಹೀಗೆ ಇರಲಿ ಎಂದು ಬರೆದುಕೊಂಡಿದ್ದಾರೆ.

ರಾಬರ್ಟ್​ ಸಿನಿಮಾದಲ್ಲಿ ದರ್ಶನ್​, ಆಶಾ ಭಟ್​ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ತೆಲುಗಿನ ಸ್ಟಾರ್​ ವಿಲನ್​ ಜಗಪತಿ ಬಾಬು ಕೂಡ ಕಾಣಿಸಿಕೊಂಡಿದ್ದಾರೆ. ಹೀಗಾಗಿ, ಟಾಲಿವುಡ್​ನಲ್ಲಿ ಸಿನಿಮಾಗೆ ಮತ್ತಷ್ಟು ಮೈಲೇಜ್​ ಸಿಗುವ ಸಾಧ್ಯತೆ ಇದೆ.

ತೆಲುಗಿನಲ್ಲಿ ಸಾಕಷ್ಟು ಆ್ಯಕ್ಷನ್​ ಸಿನಿಮಾಗಳು ರಿಲೀಸ್​ ಆಗುತ್ತವೆ. ಹೀಗಾಗಿ, ಅಲ್ಲಿನ ಮಂದಿಗೆ ಈ ರೀತಿಯ ಚಿತ್ರಗಳು ಬಹಳಾನೇ ಇಷ್ಟವಾಗುತ್ತದೆ. ಹೀಗಾಗಿ, ರಾಬರ್ಟ್​ ಸಿನಿಮಾ ಕೂಡ ಟಾಲಿವುಡ್​ ಸಿನಿ ಪ್ರೇಕ್ಷಕರಿಗೆ ಇಷ್ಟವಾಗುವ ನಿರೀಕ್ಷೆ ಇದೆ.

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!

Published On - 1:37 pm, Tue, 2 February 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ