AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Trailer: ಡಿ ಬಾಸ್​ ದರ್ಶನ್​ ಹುಟ್ಟುಹಬ್ಬಕ್ಕೆ ರಾಬರ್ಟ್​ ಕಡೆಯಿಂದ ಟ್ರೇಲರ್​ ಗಿಫ್ಟ್​!

Roberrt Trailer: ಸ್ಟಾರ್​ಗಳ ಜನ್ಮದಿನದಂದು ಅವರು ನಟಿಸುತ್ತಿರುವ ಸಿನಿಮಾದಿಂದ ವಿಶೇಷ ಉಡುಗೊರೆ ನೀಡೋದು ನಡೆದುಕೊಂಡ ಪದ್ದತಿ. ಈಗ ಈ ಸಂಪ್ರದಾಯವನ್ನು ರಾಬರ್ಟ್​ ಸಿನಿಮಾ ತಂಡ ಮುಂದುವರಿಸಿದೆ.

Roberrt Trailer: ಡಿ ಬಾಸ್​ ದರ್ಶನ್​ ಹುಟ್ಟುಹಬ್ಬಕ್ಕೆ ರಾಬರ್ಟ್​ ಕಡೆಯಿಂದ ಟ್ರೇಲರ್​ ಗಿಫ್ಟ್​!
ದರ್ಶನ್​ ಅಭಿನಯದ ರಾಬರ್ಟ್​ ಸಿನಿಮಾದ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: Feb 11, 2021 | 7:41 PM

Share

ನಟ ದರ್ಶನ್ ಇದೇ 16ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ  ವಿಶೇಷ ದಿನಕ್ಕೆ ರಾಬರ್ಟ್​ ಕಡೆಯಿಂದ ಟ್ರೈಲರ್​ ಉಡುಗರೆಯಾಗಿ ಸಿಗುತ್ತಿದೆ.  ಇಂದು ಟ್ವೀಟ್​ ಮಾಡಿರುವ ಚಿತ್ರದ ನಿರ್ದೇಶಕ ತರುಣ್​ ಸುಧೀರ್​ ಈ ಘೋಷಣೆ ಮಾಡಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್​ ಸಿನಿಮಾ ಶಿವರಾತ್ರಿ ಪ್ರಯುಕ್ತ ಮಾರ್ಚ್​ 11ರಂದು ತೆರೆಗೆ ಬರುತ್ತಿದೆ.  ಈಗ ಟ್ರೈಲರ್​ ರಿಲೀಸ್​ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. 

ಸ್ಟಾರ್​ಗಳ ಜನ್ಮದಿನದಂದು ಅವರು ನಟಿಸುತ್ತಿರುವ ಸಿನಿಮಾದಿಂದ ವಿಶೇಷ ಉಡುಗೊರೆ ನೀಡೋದು ನಡೆದುಕೊಂಡ ಪದ್ದತಿ. ಈಗ ಈ ಸಂಪ್ರದಾಯವನ್ನು ರಾಬರ್ಟ್​ ಸಿನಿಮಾ ತಂಡ ಮುಂದುವರಿಸಿದೆ. ಫೆಬ್ರವರಿ 16 ಡಿ ಬಾಸ್​ ದರ್ಶನ್​ ಜನ್ಮದಿನ. ಅಂದು ಸಿನಿಮಾ ಟ್ರೈಲರ್​ ಅಭಿಮಾನಿಗಳಿಗೆ ಉಡುಗೊರೆಯಾಗಿ​ ಆಗಿ ಸಿಗುತ್ತಿದೆ.

ತೆಲುಗು ಖಳ ಜಗಪತಿ ಬಾಬು ರಾಬರ್ಟ್​ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಟಾಲಿವುಡ್​ನಲ್ಲೂ ಸಿನಿಮಾ ರಿಲೀಸ್​ ಆಗುತ್ತಿರುವುದರಿಂದ ಚಿತ್ರದ ಮೈಲೇಜ್​ ಅನ್ನು ಜಗಪತಿ ಬಾಬು ಮತ್ತಷ್ಟು ಹೆಚ್ಚಿಸುವ ನಿರೀಕ್ಷೆ ಇದೆ. ಫೆಬ್ರವರಿ 12ರಂದು ಜಗಪತಿ ಬಾಬು ಜನ್ಮದಿನ. ಈ ಕಾರಣಕ್ಕೆ ಸಿನಿಮಾದ ಅವರ ಲುಕ್​ ರಿಲೀಸ್​ ಆಗುತ್ತಿದೆ.

ನಾಳೆ, ಸಿನಿಮಾದ ಲಿರಿಕಲ್​ ಸಾಂಗ್​ ಕೂಡ ರಿಲೀಸ್​ ಆಗ್ತಿರೋದು ವಿಶೇಷ. ಒಂದೇ ದಿನ ಮೂರು ವಿಶೇಷ ಅಪ್​ಡೇಟ್​ಗಳನ್ನು ಸಿನಿಮಾ ತಂಡ ನೀಡಿರೋದು ಅಭಿಮಾನಿಗಳಿಗೆ ಖುಷಿ ನೀಡಿದೆ.

ದರ್ಶನ್​ ನಟನೆಯ ರಾಬರ್ಟ್​ ಚಿತ್ರ ಕೊರೊನಾ ಹಿನ್ನೆಲೆಯಲ್ಲಿ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ದರ್ಶನ್​ ಹೀರೋ ಆಗಿ ಕಾಣಿಸಿಕೊಂಡರೆ, ಜಗಪತಿ ಬಾಬು ವಿಲನ್​. ಆಶಾ ಭಟ್​ ಚಿತ್ರದ ನಾಯಕಿ. ತರುಣ್​ ಸುಧೀರ್​ ನಿರ್ದೇಶನದಲ್ಲಿ 2017ರಲ್ಲಿ ತೆರೆಕಂಡ ಚೌಕ ಸಿನಿಮಾದಲ್ಲಿ ದರ್ಶನ್​ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಅವರ ಪಾತ್ರದ ಹೆಸರು ರಾಬರ್ಟ್. ಇದೇ ಪಾತ್ರದ ಹೆಸರನ್ನು ಇಟ್ಟುಕೊಂಡು ಸಿನಿಮಾ ಸಿದ್ಧವಾಗಿದೆ.

ಇದನ್ನು ಓದಿ: ದರ್ಶನ್​ ಅಭಿಮಾನಿಗಳು ತಲೆ ಮಾಂಸ, ಕುರಿ ಕೇಳುತ್ತಾರೆ ಎಂಬ ವಿವಾದ ತಣ್ಣಗಾಗಿಸಲು ಜಗ್ಗೇಶ್ ಟ್ವೀಟ್

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ