AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಬರ್ಟ್​ ವಿಜಯ ಯಾತ್ರೆ ವಿಚಾರದಲ್ಲಿ ಅಭಿಮಾನಿಗಳಿಗೆ ನಿರಾಸೆ; ದರ್ಶನ್​ ಈ ನಿರ್ಧಾರ ಫ್ಯಾನ್ಸ್​ ಒಳಿತಿಗಾಗಿ

ರಾಬರ್ಟ್​ ಸಿನಿಮಾ ಗೆದ್ದರೆ ರಾಜ್ಯಾದ್ಯಂತ ಸಂಚರಿಸಿ ವಿಜಯ ಯಾತ್ರೆ ಮಾಡಬೇಕು ಎಂಬ ಆಲೋಚನೆ ಚಿತ್ರತಂಡಕ್ಕಿತ್ತು. ಮಾ.29ರಿಂದ ದರ್ಶನ್​ ರಾಜ್ಯ ಸಂಚಾರ ಶುರು ಮಾಡುವುದಾಗಿ ಹೇಳಿದ್ದರು.

ರಾಬರ್ಟ್​ ವಿಜಯ ಯಾತ್ರೆ ವಿಚಾರದಲ್ಲಿ ಅಭಿಮಾನಿಗಳಿಗೆ ನಿರಾಸೆ; ದರ್ಶನ್​ ಈ ನಿರ್ಧಾರ ಫ್ಯಾನ್ಸ್​ ಒಳಿತಿಗಾಗಿ
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Mar 27, 2021 | 10:02 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಭಾರೀ ಯಶಸ್ಸು ಕಂಡಿತ್ತು. ಬಾಕ್ಸ್​ ಆಫೀಸ್​ನಲ್ಲೂ ಈ ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್​ ಮಾಡಿತ್ತು. ಈ ಸಿನಿಮಾ ದರ್ಶನ್​ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್​ ನೀಡಿದೆ. ಇದೇ ಖುಷಿಗೆ ಅಭಿಮಾನಿಗಳಿಗೆ ಧನ್ಯವಾದ ಹೇಳಲು ದರ್ಶನ್​ ಸಜ್ಜಾಗಿದ್ದರು. ಆದರೆ, ಈಗ ಕೊರೊನಾ ವೈರಸ್​ ಹೆಚ್ಚುತ್ತಿರುವುದರಿಂದ ಚಿತ್ರತಂಡ ವಿಜಯ ಯಾತ್ರೆಯನ್ನು ರದ್ದು ಮಾಡಿದೆ. ರಾಬರ್ಟ್​ ಸಿನಿಮಾ ಗೆದ್ದರೆ ರಾಜ್ಯಾದ್ಯಂತ ಸಂಚರಿಸಿ ವಿಜಯ ಯಾತ್ರೆ ಮಾಡಬೇಕು ಎಂಬ ಆಲೋಚನೆ ಚಿತ್ರತಂಡಕ್ಕಿತ್ತು. ಮಾ.29ರಿಂದ ದರ್ಶನ್​ ರಾಜ್ಯ ಸಂಚಾರ ಶುರು ಮಾಡುವುದಾಗಿ ಹೇಳಿದ್ದರು. ಮಾ.29ರಂದು ತುಮಕೂರು, ಚಿತ್ರದುರ್ಗ, ದಾವಣಗೆರೆಗೆ, ಮಾ.30ರಂದು ಧಾರವಾಡ, ಹುಬ್ಬಳ್ಳಿ, ಹಾವೇರಿಗೆ ಮಾ.31ರಂದು ತಿಪಟೂರು, ಹಾಸನ ಹಾಗೂ ಶಿವಮೊಗ್ಗ, ಏ.1ರಂದು ಗಂಡ್ಲುಪೇಟೆ, ಮಂಡ್ಯ, ಮೈಸೂರು ಹಾಗೂ ಮದ್ದೂರಿಗೆ ಡಿ ಬಾಸ್​ ಭೇಟಿ ನೀಡಬೇಕಿತ್ತು.

ಆದರೆ, ವಿಜಯ ಯಾತ್ರೆ ರದ್ದಾಗಿರುವ ಬಗ್ಗೆ ದರ್ಶನ್​ ಟ್ವೀಟ್​ ಮಾಡಿದ್ದಾರೆ. ಎಲ್ಲರಿಗೂ ನಮಸ್ಕಾರ. ನೀವು ನಮ್ಮ ಚಿತ್ರಕ್ಕೆ ಅಪಾರ ಬೆಂಬಲವನ್ನು ನೀಡಿ ದೊಡ್ಡ ಮಟ್ಟದ ಯಶಸ್ಸಿಗೆ ಕಾರಣರಾಗಿದ್ದೀರಿ. ಅದಕ್ಕೆಂದೇ ವಿಜಯಯಾತ್ರೆ ಮೂಲಕ ನಿಮ್ಮ ಊರಿಗೆ ಬಂದು ಧನ್ಯವಾದಗಳು ಸಲ್ಲಿಸಬೇಕೆಂದು ವೇಳಾಪಟ್ಟಿ ರೆಡಿ ಮಾಡಿಕೊಂಡಿದ್ದೆವು. ಈ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಕಾರಣ, ಎಲ್ಲೆಡೆ ಹೋಗಲು ಅನುಮತಿ ಸಿಗುವುದು ಕಷ್ಟವಾಗಿದೆ ಎಂದು ಬರೆದುಕೊಂಡಿದ್ದಾರೆ.

ನಿಮ್ಮ ಆರೋಗ್ಯವೇ ನಮ್ಮ ಹಾಗೂ ಸರ್ಕಾರದ ಮೊದಲ ಆಧ್ಯತೆ. ದಯಮಾಡಿ ಮಾಸ್ಕ್ ಧರಿಸಿ ನಿಮ್ಮ ಜಾಗೃಕತೆಯಲ್ಲಿರಿ. ಈಗಿನ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ ನಾವು ಖಂಡಿತ ನಿಮ್ಮ ಊರಿಗೆ ಆಗಮಿಸುತ್ತೇವೆ. ನಿಮ್ಮ ಪ್ರೀತಿ-ವಿಶ್ವಾಸ ಸದಾ ಹೀಗೆ ಇರಲಿ ಎಂದು ಅವರು

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!