AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt: ರಾಬರ್ಟ್​ ಎತ್ತಂಗಡಿ ಮಾಡಿಸಲು ಬಂದ ಪವನ್​ ಕಲ್ಯಾಣ್​ ಸಿನಿಮಾಗೆ ದರ್ಶನ್​ ಫ್ಯಾನ್ಸ್​ ಕೊಟ್ರು ಸಖತ್​ ಡಿಚ್ಚಿ!

Pawan Kalyan Vakeel Saab: ಸಂತೋಷ್​ ಚಿತ್ರಮಂದಿರದಲ್ಲಿ ರಾಬರ್ಟ್​ ಬದಲಿಗೆ ಪವನ್​ ಕಲ್ಯಾಣ್​ ನಟನೆಯ ವಕೀಲ್​ ಸಾಬ್​ ಸಿನಿಮಾವನ್ನು ಪ್ರದರ್ಶಿಸಲು ಪ್ಲ್ಯಾನ್​ ಸಿದ್ಧವಾಗಿತ್ತು. ಆದರೆ ಅದಕ್ಕೆ ದರ್ಶನ್​ ಅಭಿಮಾನಿಗಳು ಅವಕಾಶ ನೀಡಿಲ್ಲ.

Roberrt: ರಾಬರ್ಟ್​ ಎತ್ತಂಗಡಿ ಮಾಡಿಸಲು ಬಂದ ಪವನ್​ ಕಲ್ಯಾಣ್​ ಸಿನಿಮಾಗೆ ದರ್ಶನ್​ ಫ್ಯಾನ್ಸ್​ ಕೊಟ್ರು ಸಖತ್​ ಡಿಚ್ಚಿ!
ದರ್ಶನ್​ - ಪವನ್​ ಕಲ್ಯಾಣ್​
ಮದನ್​ ಕುಮಾರ್​
| Edited By: |

Updated on: Apr 06, 2021 | 3:08 PM

Share

ಲಾಕ್​ಡೌನ್​ ನಂತರದ ಕಡು ಕಷ್ಟದ ದಿನಗಳಲ್ಲೂ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್​ ಮಾಡಿದ ರಾಬರ್ಟ್​ ಸಿನಿಮಾ, ಈಗಲೂ ಹಲವು ಕಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. 100 ಕೋಟಿ ರೂ. ಗಳಿಸಿ ಮುನ್ನುಗ್ಗುತ್ತಿರುವ ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ವಿಶೇಷ ಒಲವಿದೆ. ಆದರೆ ಟಾಲಿವುಡ್​ನ ಸ್ಟಾರ್​ ನಟ ಪವನ್​ ಕಲ್ಯಾಣ್​ ಅಭಿನಯದ ಹೊಸ ಸಿನಿಮಾದಿಂದಾಗಿ ಬೆಂಗಳೂರಿನಲ್ಲಿ ರಾಬರ್ಟ್​ ಚಿತ್ರಕ್ಕೆ ತೊಂದರೆ ಎದುರಾಗುವ ಸಾಧ್ಯತೆ ಇತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ‘ಚಾಲೆಂಜಿಂಗ್​ ಸ್ಟಾರ್​’ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಗಾಂಧಿನಗರದಲ್ಲಿರುವ ಸಂತೋಷ್​ ಚಿತ್ರಮಂದಿರದಲ್ಲಿ ರಾಬರ್ಟ್​ ಯಶಸ್ವಿ ಪ್ರದರ್ಶನ ಕಾಣುತ್ತಿತ್ತು. ಏ.11ರಂದು ಬಿಡುಗಡೆಯಾಗ ಈ ಸಿನಿಮಾವನ್ನು ಈಗ ಸಂತೋಷ್​ ಥಿಯೇಟರ್​ನಿಂದ ಎತ್ತಂಗಡಿ ಮಾಡಿಸುವ ಪ್ರಯತ್ನ ನಡೆಯಿತು. ಅಂದರೆ, ಈ ಚಿತ್ರಮಂದಿರದಲ್ಲಿ ರಾಬರ್ಟ್​ ಬದಲಿಗೆ ಪವನ್​ ಕಲ್ಯಾಣ್​ ನಟನೆಯ ವಕೀಲ್​ ಸಾಬ್​ ಸಿನಿಮಾವನ್ನು ಪ್ರದರ್ಶಿಸಲು ಪ್ಲ್ಯಾನ್​ ಸಿದ್ಧವಾಗಿತ್ತು. ಆದರೆ ಅದಕ್ಕೆ ದರ್ಶನ್​ ಅಭಿಮಾನಿಗಳು ಅವಕಾಶ ನೀಡಿಲ್ಲ.

ವಕೀಲ್​ ಸಾಬ್​ ಸಿನಿಮಾ ಏ.9ರಂದು ಬಿಡುಗಡೆ ಆಗುತ್ತಿದೆ. ಆ ಚಿತ್ರವನ್ನು ಕರ್ನಾಟಕದಲ್ಲಿ ಕೆಆರ್​ಜಿ ಸಂಸ್ಥೆ ವಿತರಿಸುತ್ತಿದೆ. ರಾಬರ್ಟ್​ ಪ್ರದರ್ಶನ ಆಗುತ್ತಿರುವ ಸಂತೋಷ್​ ಚಿತ್ರಮಂದಿರದಲ್ಲಿ ಏ,9ರಿಂದ ವಕೀಲ್​ ಸಾಬ್​ ಪ್ರದರ್ಶನ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಡಿ ಬಾಸ್​ ಅಭಿಮಾನಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಕೆಆರ್​ಜಿ ಸಂಸ್ಥೆಯ ಕಾರ್ತಿಕ್​ ಗೌಡ ಅವರು ತೀರ್ಮಾನ ಬದಲಾಯಿಸಿದ್ದಾರೆ.

ಸಂತೋಷ್​ ಚಿತ್ರಮಂದಿರದಲ್ಲಿ ರಾಬರ್ಟ್​ ಪ್ರದರ್ಶನವನ್ನೇ ಮುಂದುವರಿಸುವುದಾಗಿ ಕಾರ್ತಿಕ್​ ಗೌಡ ಸ್ಪಷ್ಟಪಡಿಸಿದ್ದಾರೆ. ಸಂತೋಷ್​ ಚಿತ್ರಮಂದಿರದ ಬದಲಿಗೆ ಗಾಂಧಿನಗರದ ಭೂಮಿಕಾ ಥಿಯೇಟರ್​ನಲ್ಲಿ ವಕೀಲ್​ ಸಾಬ್​ ಸಿನಿಮಾ ಪ್ರದರ್ಶಿಸುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ ಈ ವಿಚಾರವನ್ನು ಇಟ್ಟುಕೊಂಡು ಯಾವುದೇ ಒಬ್ಬ ವ್ಯಕ್ತಿ ಅಥವಾ ಅವರ ಕುಟುಂಬವನ್ನು ಟಾರ್ಗೆಟ್​ ಮಾಡುವುದು ಸರಿಯಲ್ಲ ಎಂದು ಕಾರ್ತಿಕ್​ ಗೌಡ ಟ್ವೀಟ್​ ಮಾಡಿದ್ದಾರೆ.

ಇನ್ನು, ರಾಬರ್ಟ್​ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಇನ್ನೂ ಒಂದಷ್ಟು ದಿನಗಳ ಕಾಲ ಸಂತೋಷ್​ ಚಿತ್ರಮಂದಿರದಲ್ಲೇ ರಾಬರ್ಟ್​ ಪ್ರದರ್ಶನ ಕಾಣಲಿದೆ. ದರ್ಶನ್​ ಅವರ ಅಭಿಮಾನಿಗಳು ಸಹಕರಿಸಬೇಕು’ ಎಂದು ಉಮಾಪತಿ ಟ್ವೀಟ್​ ಮಾಡಿದ್ದಾರೆ. ರಾಬರ್ಟ್​ ತೆರೆಕಂಡು 28 ದಿನ ಪೂರೈಸಿದೆ. ನಟ ದರ್ಶನ್​, ನಾಯಕಿ ಆಶಾ ಭಟ್​, ನಿರ್ದೇಶಕ ತರುಣ್​ ಸುಧೀರ್​ ಅವರಿಗೆ ಈ ಚಿತ್ರದಿಂದ ಭರ್ಜರಿ ಗೆಲುವು ಸಿಕ್ಕಿದೆ.

ಇದನ್ನೂ ಓದಿ: 100 ಕೋಟಿ ರೂ. ಬಾಚಿಕೊಂಡ ರಾಬರ್ಟ್​! ಸ್ಯಾಂಡಲ್​ವುಡ್​ನಲ್ಲಿ ದರ್ಶನ್​ ಹೊಸ ದಾಖಲೆ

ಹೋಳಿ ಹಬ್ಬಕ್ಕೆ ಅಭಿಮಾನಿಗಳಿಗೆ ರಾಬರ್ಟ್​ ಕಡೆಯಿಂದ ಸಿಕ್ತು ಕಲರ್​ಫುಲ್​ ಗಿಫ್ಟ್​!

(Roberrt vs Vakeel Saab: Darshan fans urge KRG to continue Roberrt in Santhosh Theater)

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು