Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಹಾಗೂ ಸಿನಿಮಾ ಟೀಂ ಜೊತೆ ಜೊತೆ ಯಶ್ ಬರ್ತ್​ಡೇ; ಹೇಗಿತ್ತು ನೋಡಿ ಸೆಲೆಬ್ರೇಷನ್

ಯಶ್ ಅವರ ಹುಟ್ಟುಹಬ್ಬವನ್ನು ಆಪ್ತರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಅವರನ್ನು ಅಭಿನಂದಿಸುತ್ತಾ ಇದ್ದಾರೆ. ‘ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅವರ ಭವಿಷ್ಯದ ಸಿನಿಮಾಗಳಾದ ‘ಟಾಕ್ಸಿಕ್’ ಹಾಗೂ ‘ರಾಮಾಯಣದ’ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇದೆ.

ಕುಟುಂಬ ಹಾಗೂ ಸಿನಿಮಾ ಟೀಂ ಜೊತೆ ಜೊತೆ ಯಶ್ ಬರ್ತ್​ಡೇ; ಹೇಗಿತ್ತು ನೋಡಿ ಸೆಲೆಬ್ರೇಷನ್
ಯಶ್ ಬರ್ತ್​ಡೇ ಸೆಲೆಬ್ರೇಷನ್
Follow us
ರಾಜೇಶ್ ದುಗ್ಗುಮನೆ
|

Updated on:Jan 08, 2025 | 10:14 AM

ನಟ ಯಶ್ ಅವರ ಅಭಿಮಾನಿಗಳ ಪಾಲಿಗೆ ಇಂದು (ಜನವರಿ 8) ಹಬ್ಬ. ಏಕೆಂದರೆ ಇಂದು ಅವರ ನೆಚ್ಚಿನ ನಟನ ಬರ್ತ್​ಡೇ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಾರತುರಾಯಿಗಳ ಸಹವಾಸಕ್ಕೆ ಹೋಗದೆ ಫ್ಯಾನ್ಸ್ ಸಾಮಾಜಿಕ ಕೆಲಸಗಳ ಮೂಲಕ ಬರ್ತ್​ಡೇ ಆಚರಿಸುತ್ತಿದ್ದಾರೆ. ಈ ಮಧ್ಯೆ ಯಶ್ ಅವರ ಬರ್ತ್​ಡೇನ ಆಪ್ತರ ಜೊತೆ ಆಚರಿಸಿಕೊಂಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯಶ್ ಅವರು ಸಿನಿಮಾ ಕೆಲಸಗಳಿಂದ ಹುಟ್ಟುಹಬ್ಬದ ದಿನ ಊರಿನಲ್ಲಿ ಇರೋದಿಲ್ಲ ಎಂದು ಈ ಮೊದಲೇ ಹೇಳಿದ್ದರು. ಅವರು ಗೋವಾದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲಿಯೇ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಅಲ್ಲಿ ಆಪ್ತರು ಹಾಗೂ ಕುಟುಂಬದವರ ಜೊತೆ ಯಶ್ ಅವರು ಬರ್ತ್​ಡೇ ಆಚರಿಸಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

ಯಶ್ ಅವರ ಜೊತೆ ‘ಟಾಕ್ಸಿಕ್’ ಚಿತ್ರದ ನಿರ್ಮಾಪಕ ವೆಂಕಟ್ ನಾರಾಯಣ್, ಯಶ್ ಪತ್ನಿ ರಾಧಿಕಾ ಪಂಡಿತ್, ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಈ ಬಾರಿ ಯಶ್ ಅವರು ಅಭಿಮಾನಿಗಳ ಜೊತೆ ಇರಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:  ರಾಕಿಂಗ್ ಸ್ಟಾರ್ ಒಟ್ಟೂ ಆಸ್ತಿ ಎಷ್ಟು? ಅವರ ಕಾರ್ ಕಲೆಕ್ಷನ್ ಹೇಗಿದೆ?

ಯಶ್ ಮುಂಬರುವ ಸಿನಿಮಾಗಳು

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇಂದು ಬೆಳಿಗ್ಗೆ ಚಿತ್ರದ ಗ್ಲಿಂಪ್ಸ್ ರಿಲೀಸ್ ಆಗಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದಲ್ಲಿ ಯಶ್ ಅವರು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ಅವರು ಹಿಂದಿಯ ‘ರಾಮಾಯಣ’ ಚಿತ್ರದಲ್ಲೂ ತೊಡಗಿಕೊಂಡಿದ್ದಾರೆ. ಈ ಚಿತ್ರದಲ್ಲಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರಕ್ಕೆ ಅವರು ನಿರ್ಮಾಪಕರೂ ಹೌದು. ಅವರು ಬರೋಬ್ಬರಿ 200 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಕೆಲಸಗಳು ವಿಳಂಬ ಆಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:52 am, Wed, 8 January 25

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು