AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆ ಬರೆದ ಯಶ್ ಬರ್ತ್​ಡೇ ಕೇಕ್​: ಅಭಿಮಾನಿಗಳಿಗೆ ಭರ್ಜರಿ ಬಾಡೂಟ

ಬೆಂಗಳೂರು: ಸ್ಯಾಂಡಲ್​ವುಡ್ ನಟ ರಾಕಿಂಗ್​ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿದೆ. ಯಶ್ 34ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂತೋಷ ಸಡಗರದಿಂದ ಆಚರಿಸಿದ್ದಾರೆ. ಕೆಲವೇ ವರ್ಷಗಳ ಸಿನಿ ಪಯಣದಲ್ಲಿ ಪ್ರಪಂಚಕ್ಕೆ ಗುರುತಿಸಿಕೊಳ್ಳುವಂತಹ ಹೆಸರನ್ನು ಯಶ್ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಹೆಮ್ಮೆಯನ್ನು ಯಶ್ ಹೆಚ್ಚಿಸಿದ್ದಾರೆ. ಯಶ್ ಬರ್ತ್​ಡೇಗೆ 5000 ಕೆ.ಜಿ ಕೇಕ್: ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬರ್ತ್​ಡೇ ಸೆಲೆಬ್ರೆಷನ್​ನಲ್ಲಿ ದಾಖಲೆ ಬರೆದಿದ್ದಾರೆ. 5000 ಕೆ.ಜಿ ಕೇಕ್ ಸಿದ್ಧಪಡಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಪಂಚದ ಅತಿ ದೊಡ್ಡ ಸೆಲೆಬ್ರೆಟಿ ಬರ್ತ್​ಡೇ […]

ವಿಶ್ವ ದಾಖಲೆ ಬರೆದ ಯಶ್ ಬರ್ತ್​ಡೇ ಕೇಕ್​: ಅಭಿಮಾನಿಗಳಿಗೆ ಭರ್ಜರಿ ಬಾಡೂಟ
ಸಾಧು ಶ್ರೀನಾಥ್​
|

Updated on:Jan 09, 2020 | 12:00 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ ರಾಕಿಂಗ್​ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿದೆ. ಯಶ್ 34ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂತೋಷ ಸಡಗರದಿಂದ ಆಚರಿಸಿದ್ದಾರೆ. ಕೆಲವೇ ವರ್ಷಗಳ ಸಿನಿ ಪಯಣದಲ್ಲಿ ಪ್ರಪಂಚಕ್ಕೆ ಗುರುತಿಸಿಕೊಳ್ಳುವಂತಹ ಹೆಸರನ್ನು ಯಶ್ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಹೆಮ್ಮೆಯನ್ನು ಯಶ್ ಹೆಚ್ಚಿಸಿದ್ದಾರೆ.

ಯಶ್ ಬರ್ತ್​ಡೇಗೆ 5000 ಕೆ.ಜಿ ಕೇಕ್: ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬರ್ತ್​ಡೇ ಸೆಲೆಬ್ರೆಷನ್​ನಲ್ಲಿ ದಾಖಲೆ ಬರೆದಿದ್ದಾರೆ. 5000 ಕೆ.ಜಿ ಕೇಕ್ ಸಿದ್ಧಪಡಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಪಂಚದ ಅತಿ ದೊಡ್ಡ ಸೆಲೆಬ್ರೆಟಿ ಬರ್ತ್​ಡೇ ಕೇಕ್ ಇದಾಗಿದೆ. ವರ್ಲ್ಡ್​ ರೆಕಾರ್ಡ್ಸ್​ ಇಂಡಿಯಾದಿಂದ ಕೇಕ್​ಗೆ ಸರ್ಟಿಫಿಕೇಟ್ ಸಿಕ್ಕಿದೆ. ಅಲ್ಲದೆ 216 ಅಡಿ ಉದ್ದದ ಕಟೌಟ್​ ನಿರ್ಮಿಸಲಾಗಿತ್ತು. 20 ಸಾವಿರ ಅಭಿಮಾನಿಗಳ ಸಮ್ಮಖದಲ್ಲಿ ಈ ಬಾರಿ ಯಶ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಅಭಿಮಾನಿಗಳಿಗೆ ಭರ್ಜರಿ ಊಟದ ವ್ಯವಸ್ಥೆ: ಯಶ್ ತಮ್ಮ ಅಭಿಮಾನಿಗಳಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಿಸಿದ್ದಾರೆ. ಬೆಳಗ್ಗೆ 3 ಸಾವಿರ ಅಭಿಮಾನಿಗಳಿಗೆ ತಿಂಡಿ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಆರು ಸಾವಿರ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ನಾಟಿ ಕೋಳಿ ಸಾರು, ಮಟನ್ ಬಿರಿಯಾನಿ, ಮುದ್ದೆ, ರೈಸ್, ಚಿಕನ್ ಪೆಪ್ಪರ್ ಡ್ರೈ, ರಸಂ, ಸಲಾಡ್, ವೆಜ್​ ಬಿರಿಯಾನಿ, ಜಿಲೇಬಿ, ಪಕೋಡ ಸೇರಿ ವಿವಿಧ ಖಾದ್ಯಗಳ ರಸದೌತಣವನ್ನು ಯಶ್ ಏರ್ಪಡಿಸಿದ್ದಾರೆ.

Published On - 1:39 pm, Wed, 8 January 20

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!