AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಜನ್ಮದಿನ: ಭರ್ಜರಿಯಾಗಿ ಮೂಡಿ ಬಂದಿದೆ ರಾಕಿಂಗ್ ಸ್ಟಾರ್ ಕಾಮನ್​ ಡಿಪಿ

Yash Birthday: ಯಶ್ ಅವರ ಜನ್ಮದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಹೊಸ ಕಾಮನ್ ಡಿಪಿ ಅನಾವರಣಗೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅನ್ನದಾನ, ರಕ್ತದಾನದಂತಹ ಒಳ್ಳೆಯ ಕಾರ್ಯಗಳನ್ನು ಮಾಡುವ ಯೋಜನೆಗಳನ್ನು ಹೊಂದಿದ್ದಾರೆ. 'ಟಾಕ್ಸಿಕ್' ಚಿತ್ರದ ಅಪ್ಡೇಟ್​​ಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಯಶ್ ಜನ್ಮದಿನಕ್ಕೆ ಈ ಬಗ್ಗೆ ಮಾಹಿತಿ ಸಿಗೋ ಸಾಧ್ಯತೆ ಇದೆ.

ಯಶ್ ಜನ್ಮದಿನ: ಭರ್ಜರಿಯಾಗಿ ಮೂಡಿ ಬಂದಿದೆ ರಾಕಿಂಗ್ ಸ್ಟಾರ್ ಕಾಮನ್​ ಡಿಪಿ
ಯಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 06, 2025 | 7:51 AM

Share

ಸ್ಟಾರ್ ಹೀರೋಗಳ ಜನ್ಮದಿನ ಸಮೀಪಿಸಿದಂತೆ ಅಭಿಮಾನಿಗಳ ಸಂಭ್ರಮವು ಜೋರಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ವಿವಿಧ ರೀತಿಯ ಫೋಟೋಗಳನ್ನು ಪೋಸ್ಟ್ ಮಾಡುವ ಕೆಲಸ ಆಗುತ್ತದೆ. ಅದರಲ್ಲೂ ವಿಶೇಷವಾಗಿ ಗಮನ ಸೆಳೆಯುವುದು ಕಾಮನ್ ಡಿಪಿ. ಒಬ್ಬರು ಕಾಮನ್​ ಡಿಪಿನ ರಿವೀಲ್ ಮಾಡಿದರೆ, ಅದನ್ನು ಎಲ್ಲಾ ಅಭಿಮಾನಿಗಳು ತಮ್ಮ ಪ್ರಾಫೈಲ್​ಗಳಲ್ಲಿ ಹಾಕಿಕೊಳ್ಳುತ್ತಾರೆ. ಈಗ ಯಶ್ ಅವರ ಕಾಮನ್ ಡಿಪಿ ಅನಾವರಣ ಆಗಿದೆ. ಅವರ ಜನ್ಮದಿನಕ್ಕೆ ಕೆಲವೇ ದಿನ ಬಾಕಿ ಇರುವಾಗ ಡಿಪಿ ರಿವೀಲ್ ಆಗಿದೆ. ಇದಕ್ಕೆ ಮೆಚ್ಚುಗೆ ಸಿಕ್ಕಿದೆ.

ದೊಡ್ಡದಾದ ಕೋಟೆ ಇದೆ. ಕೋಟೆಯ ಎದುರು ಇರುವ ಕುರ್ಚಿ ಮೇಲೆ ಯಶ್ ಅವರು ಕುಳಿತಿದ್ದಾರೆ. ಅಂದರೆ ಯಶ್ ಅವರು ಆ ಕೋಟೆಗೆ ರಾಜ ಎಂಬರ್ಥವನ್ನು ಇದು ನೀಡುತ್ತದೆ. ಎದುರಲ್ಲಿ ಯಶ್ ಅವರ ಬೆನ್ನು ತೋರಿಸಿ ನಿಂತ ಫೋಟೋ ಇದ್ದು, ಪಕ್ಕದಲ್ಲಿ ಜನರ ಕೈಗಳು ಕಾಣಿಸುತ್ತವೆ. ಪಕ್ಕದಲ್ಲಿ ಬೆಂಕಿ ಕೂಡ ಇದೆ. ಕೋಟೆಯ ಮೇಲೆ ಯಶ್ ಬಾಸ್ ಎಂಬ ಬಾವುಟವು ರಾರಾಜಿಸುತ್ತಿದೆ. ಮೇಲ್ಭಾಗದಲ್ಲಿ ಯಶ್​ಗೆ ಜನ್ಮದಿನದ ಶುಭಾಶಯ ಕೋರಲಾಗಿದೆ.

ಯಶ್ ಜನ್ಮದಿನಕ್ಕೆ ಕೆಲವೇ ದಿನಗಳು ಬಾಕಿ ಇವೆ. ಜನವರಿ 8 ಯಶ್ ಅವರ ಜನ್ಮದಿನ. ಅಂದು ಹೆಚ್ಚಿನ ಆಚರಣೆ ಇಲ್ಲದೆ ಇರುವ ಹೊರತಾಗಿಯೂ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಾಚರಣೆ ಇರುತ್ತದೆ. ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟ್​ನ ನಿಮಿತ್ತ ವಿದೇಶದಲ್ಲಿ ಇರುವುದಾಗಿ ಹೇಳಿದ್ದಾರೆ. ಅಲ್ಲದೆ, ಅಭಿಮಾನಿಗಳು ಹಾರ ತುರಾಯಿಗಳನ್ನು ತಂದು ಹುಟ್ಟುಹಬ್ಬ ಆಚರಣೆ ಮಾಡದಂತೆ ಕೋರಿಕೊಂಡಿದ್ದಾರೆ. ಕಳೆದ ವರ್ಷ ಯಶ್ ಕಟೌಟ್ ನಿಲ್ಲಿಸುವಾಗ ಅದು ವಿದ್ಯುತ್​ ಲೈನ್​ಗೆ ತಾಗಿ ಕೆಲ ಅಭಿಮಾನಿಗಳು ಮೃತಪಟ್ಟಿದ್ದರು.

ಇದನ್ನೂ ಓದಿ: ಶಂಕರ್​ನಾಗ್ ಸ್ಟೈಲ್​ನಲ್ಲಿ ಮಾತನಾಡಿದ್ದ ಯಶ್; ಎಷ್ಟು ಪರ್ಫೆಕ್ಟ್ ಮಿಮಿಕ್ರಿ ನೋಡಿ

ಈ ವರ್ಷ ಅಭಿಮಾನಿಗಳು ಯಶ್ ಹೆಸರಲ್ಲಿ ಪೂಜೆಗಳನ್ನು ಮಾಡಿಸಲು ರೆಡಿ ಆಗಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಯಶ್ ಹೆಸರಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳು ನಡೆಯಲಿವೆ. ಈ ಬಗ್ಗೆಯೂ ಅಭಿಮಾನಿಗಳು ಸಾಕಷ್ಟು ಪ್ಲ್ಯಾನಿಂಗ್ ಮಾಡಿದ್ದಾರೆ. ಅನ್ನದಾನ, ರಕ್ತದಾನದಂತ ಒಳ್ಳೆಯ ಕೆಲಸಗಳು ಯಶ್ ಅವರ ಅಭಿಮಾನಿಗಳ ಕಡೆಯಿಂದ ಆಗಲಿದೆಯಂತೆ. ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಕಡೆಯಿಂದ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:50 am, Mon, 6 January 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ