AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡ ಸಿನಿಮಾ ಎಂದಾಗ ಬೇಸರ ಆಗೋದು ಏನು ಗೊತ್ತಾ?’; ವಿವರಿಸಿದ ಯಶ್

ಯಶ್ ಅವರು ಕನ್ನಡ ಚಿತ್ರರಂಗದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಕನ್ನಡ ಸಿನಿಮಾಗಳನ್ನು ನೋಡದೆ ಇರುವಿಕೆಗೆ ಕಾರಣಗಳನ್ನು ಚರ್ಚಿಸಿ, ಉತ್ತಮ ಸಿನಿಮಾ ನಿರ್ಮಾಣದ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಹೊಸಬರಿಗೆ ಅವಕಾಶ ನೀಡುವುದು ಮತ್ತು ಉದ್ಯಮದಲ್ಲಿ ಸ್ವಾಭಿಮಾನದಿಂದ ಕೆಲಸ ಮಾಡುವುದು ಮುಖ್ಯ ಎಂದು ಅವರು ತಿಳಿಸಿದ್ದಾರೆ.

‘ಕನ್ನಡ ಸಿನಿಮಾ ಎಂದಾಗ ಬೇಸರ ಆಗೋದು ಏನು ಗೊತ್ತಾ?’; ವಿವರಿಸಿದ ಯಶ್
ಯಶ್
ರಾಜೇಶ್ ದುಗ್ಗುಮನೆ
|

Updated on:Mar 24, 2025 | 7:30 AM

Share

ಕನ್ನಡ ಸಿನಿಮಾಗಳನ್ನು ನೋಡೋದಿಲ್ಲ ಎಂಬುದು ಅನೇಕರ ದೂರು. ಒಬ್ಬೊಬ್ಬರದ್ದು ಒಂದೊಂದು ರೀತಿಯ ಅಭಿಪ್ರಾಯ ಇದರಲ್ಲಿ ಇದೆ. ಕೆಲವರು ಉತ್ತಮ ಸಿನಿಮಾಗಳು ಬರುತ್ತಿಲ್ಲ ಎಂದು ಹೇಳಿದರೆ ಇನ್ನೂ ಕೆಲವರು, ಜನರುಗಳೇ ಸಿನಿಮಾ ನೋಡಲು ಹೋಗುತ್ತಿಲ್ಲ ಎಂಬ ಮಾತುಗಳನ್ನು ಹೇಳಿದ್ದಾರೆ. ಈಗ ರಾಕಿಂಗ್ ಸ್ಟಾರ್ ಯಶ್ (Yash) ಅವರು ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ಪ್ರೇಕ್ಷಕರ ಬಳಿ ಅವರು ಒಂದು ಮನವಿಯನ್ನು ಮಾಡಿಕೊಂಡಿದ್ದಾರೆ.

‘ಕನ್ನಡ ಸಿನಿಮಾ ಎಂದಾಗ ಬೇಸರ ಆಗೋದು ಏನು ಗೊತ್ತಾ? ನಾವು ಗೋಳಾಡೋದಕ್ಕಿಂತ ಒಳ್ಳೆಯ ಸಿನಿಮಾ ಮಾಡಬೇಕು. ನಾನು ಕೂಡ ಒಮ್ಮೆ ಸಂದರ್ಶನದಲ್ಲಿ ಜನರು ಕನ್ನಡ ಸಿನಿಮಾಗಳನ್ನು ನೋಡಲ್ಲ ಎಂದು ಹೇಳಿದ್ದೆ. ಆಮೇಲೆ ಬಂದು ಮನೆಯಲ್ಲಿ ಕುಳಿತು ಯೋಚನೆ ಮಾಡಿದಾಗ ನನಗೆ ಅನ್ನಿಸಿತು. ನಮ್ಮ ಕೆಲಸ ನಾವು ಮಾಡಿ, ಒಳ್ಳೆಯ ಸಿನಿಮಾ ಕೊಟ್ಟರೆ ಕನ್ನಡಿಗರು ಯಾವಾಗಲೂ ಕೈ ಬಿಟ್ಟಿಲ್ಲ’ ಎಂದಿದ್ದಾರೆ ಯಶ್.

‘ಅಭಿಮಾನಿಗಳು ಒಳ್ಳೆಯ ಚಿತ್ರಗಳನ್ನು ಹರಸಿಯೇ ಹರಸುತ್ತಾರೆ. ಹೊಸಬರನ್ನು ಲಾಂಚ್ ಮಾಡಿ, ಹೊಸಬರ ಈವೆಂಟ್​ಗೆ ಹೋಗಿ ಎಂದು ಕೇಳಿ ಕೊಳ್ಳುತ್ತಾರೆ. ನಾನು ಬಂದೆ ಎಂದು ಸಿನಿಮಾ ಗೆಲ್ಲಲ್ಲ. ನಿಜವಾದ ಗೆಲುವು ಸಿಗೋದು ನೀವು ಮಾಡೋ ಕೆಲಸದಿಂದ. ಚಿತ್ರರಂಗದವರ ಬಳಿ ಕೇಳೋದು ಒಂದೇ ಕೆಲಸ ಕಲಿಯೋಣ, ದೊಡ್ಡ ಗುರಿ ಇಟ್ಟುಕೊಳ್ಳೋಣ, ಸ್ವಾಭಿಮಾನ ಇಟ್ಟುಕೊಳ್ಳೋಣ, ಅದನ್ನು ಬೇಡೋದು ಬೇಡ. ಬೇರೆಯವರು ಗೌರವಿಸೋ ತರ ಕೆಲಸ ಮಾಡೋಣ. ನಟನೆ ಮಾತ್ರ ಸಿನಿಮಾ ಅಲ್ಲ. ಟ್ರೆಂಡ್ ಏನಾಗ್ತಿದೆ? ನಿಮ್ಮ ಜವಾಬ್ದಾರಿ ಏನು ಎಂದು ತಿಳಿದುಕೊಳ್ಳಬೇಕು’ ಎಂದು ಹೊಸ ಜನರೇಶನ್​ಗೆ ಯಶ್ ಕೋರಿಕೊಂಡರು.

ಇದನ್ನೂ ಓದಿ
Image
ಮೊದಲ ಸಿನಿಮಾ ಅವಕಾಶ ಕೊಟ್ಟ ನಿರ್ಮಾಪಕನಿಗೆ ಯಶ್ ಧನ್ಯವಾದ
Image
‘ಟಾಕ್ಸಿಕ್’​​ ಬಗ್ಗೆ ಅಪ್ಡೇಟ್ ಕೊಡ್ತೀನಿ ಎಂದ ನಟ ಯಶ್​
Image
ಮನದ ಕಡಲು ಇವೆಂಟ್​ಗೆ ಬಂದ ಯಶ್, ಬಾಚಿ ತಬ್ಬಿದ ಮುರಳಿ ಮಾಸ್ಟರ್
Image
ಹನಿಸಿಂಗ್ ಕಾನ್ಸರ್ಟ್​ನಲ್ಲಿ ನಟ ಯಶ್ ಭಾಗಿ, ಇಲ್ಲಿವೆ ಕೆಲ ಚಿತ್ರಗಳು

ಇದನ್ನೂ ಓದಿ: ‘ಆ ವ್ಯಕ್ತಿಯಿಂದ ನಾನು ಇಲ್ಲಿದ್ದೇನೆ’; ಮೊದಲ ಸಿನಿಮಾ ಅವಕಾಶ ಕೊಟ್ಟ ನಿರ್ಮಾಪಕನಿಗೆ ಯಶ್ ಧನ್ಯವಾದ

ಯಶ್ ಅವರ ಅಭಿಮಾನಿಗಳಿಗೆ ವಿಶೇಷ ಪ್ರೀತಿ ಇದೆ. ಈ ಬಗ್ಗೆ ಅವರು ಮಾತನಾಡಿದ್ದು, ‘ನಮ್ಮ ಅಭಿಮಾನಿಗಳ ಋಣ ಹೇಗೆ ತೀರಿಸಬೇಕೋ ಗೊತ್ತಾಗುತ್ತಿಲ್ಲ. ನಿಮ್ಮ ಧ್ವನಿ ನನಗೆ ದೊಡ್ಡಸ್ತಿಕೆ ತಂದುಕೊಡಲ್ಲ, ಜವಾಬ್ದಾರಿ ತಂದು ಕೊಡುತ್ತದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:29 am, Mon, 24 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು