Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡ ಸಿನಿಮಾ ಎಂದಾಗ ಬೇಸರ ಆಗೋದು ಏನು ಗೊತ್ತಾ?’; ವಿವರಿಸಿದ ಯಶ್

ಯಶ್ ಅವರು ಕನ್ನಡ ಚಿತ್ರರಂಗದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಕನ್ನಡ ಸಿನಿಮಾಗಳನ್ನು ನೋಡದೆ ಇರುವಿಕೆಗೆ ಕಾರಣಗಳನ್ನು ಚರ್ಚಿಸಿ, ಉತ್ತಮ ಸಿನಿಮಾ ನಿರ್ಮಾಣದ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಹೊಸಬರಿಗೆ ಅವಕಾಶ ನೀಡುವುದು ಮತ್ತು ಉದ್ಯಮದಲ್ಲಿ ಸ್ವಾಭಿಮಾನದಿಂದ ಕೆಲಸ ಮಾಡುವುದು ಮುಖ್ಯ ಎಂದು ಅವರು ತಿಳಿಸಿದ್ದಾರೆ.

‘ಕನ್ನಡ ಸಿನಿಮಾ ಎಂದಾಗ ಬೇಸರ ಆಗೋದು ಏನು ಗೊತ್ತಾ?’; ವಿವರಿಸಿದ ಯಶ್
ಯಶ್
Follow us
ರಾಜೇಶ್ ದುಗ್ಗುಮನೆ
|

Updated on:Mar 24, 2025 | 7:30 AM

ಕನ್ನಡ ಸಿನಿಮಾಗಳನ್ನು ನೋಡೋದಿಲ್ಲ ಎಂಬುದು ಅನೇಕರ ದೂರು. ಒಬ್ಬೊಬ್ಬರದ್ದು ಒಂದೊಂದು ರೀತಿಯ ಅಭಿಪ್ರಾಯ ಇದರಲ್ಲಿ ಇದೆ. ಕೆಲವರು ಉತ್ತಮ ಸಿನಿಮಾಗಳು ಬರುತ್ತಿಲ್ಲ ಎಂದು ಹೇಳಿದರೆ ಇನ್ನೂ ಕೆಲವರು, ಜನರುಗಳೇ ಸಿನಿಮಾ ನೋಡಲು ಹೋಗುತ್ತಿಲ್ಲ ಎಂಬ ಮಾತುಗಳನ್ನು ಹೇಳಿದ್ದಾರೆ. ಈಗ ರಾಕಿಂಗ್ ಸ್ಟಾರ್ ಯಶ್ (Yash) ಅವರು ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ಪ್ರೇಕ್ಷಕರ ಬಳಿ ಅವರು ಒಂದು ಮನವಿಯನ್ನು ಮಾಡಿಕೊಂಡಿದ್ದಾರೆ.

‘ಕನ್ನಡ ಸಿನಿಮಾ ಎಂದಾಗ ಬೇಸರ ಆಗೋದು ಏನು ಗೊತ್ತಾ? ನಾವು ಗೋಳಾಡೋದಕ್ಕಿಂತ ಒಳ್ಳೆಯ ಸಿನಿಮಾ ಮಾಡಬೇಕು. ನಾನು ಕೂಡ ಒಮ್ಮೆ ಸಂದರ್ಶನದಲ್ಲಿ ಜನರು ಕನ್ನಡ ಸಿನಿಮಾಗಳನ್ನು ನೋಡಲ್ಲ ಎಂದು ಹೇಳಿದ್ದೆ. ಆಮೇಲೆ ಬಂದು ಮನೆಯಲ್ಲಿ ಕುಳಿತು ಯೋಚನೆ ಮಾಡಿದಾಗ ನನಗೆ ಅನ್ನಿಸಿತು. ನಮ್ಮ ಕೆಲಸ ನಾವು ಮಾಡಿ, ಒಳ್ಳೆಯ ಸಿನಿಮಾ ಕೊಟ್ಟರೆ ಕನ್ನಡಿಗರು ಯಾವಾಗಲೂ ಕೈ ಬಿಟ್ಟಿಲ್ಲ’ ಎಂದಿದ್ದಾರೆ ಯಶ್.

‘ಅಭಿಮಾನಿಗಳು ಒಳ್ಳೆಯ ಚಿತ್ರಗಳನ್ನು ಹರಸಿಯೇ ಹರಸುತ್ತಾರೆ. ಹೊಸಬರನ್ನು ಲಾಂಚ್ ಮಾಡಿ, ಹೊಸಬರ ಈವೆಂಟ್​ಗೆ ಹೋಗಿ ಎಂದು ಕೇಳಿ ಕೊಳ್ಳುತ್ತಾರೆ. ನಾನು ಬಂದೆ ಎಂದು ಸಿನಿಮಾ ಗೆಲ್ಲಲ್ಲ. ನಿಜವಾದ ಗೆಲುವು ಸಿಗೋದು ನೀವು ಮಾಡೋ ಕೆಲಸದಿಂದ. ಚಿತ್ರರಂಗದವರ ಬಳಿ ಕೇಳೋದು ಒಂದೇ ಕೆಲಸ ಕಲಿಯೋಣ, ದೊಡ್ಡ ಗುರಿ ಇಟ್ಟುಕೊಳ್ಳೋಣ, ಸ್ವಾಭಿಮಾನ ಇಟ್ಟುಕೊಳ್ಳೋಣ, ಅದನ್ನು ಬೇಡೋದು ಬೇಡ. ಬೇರೆಯವರು ಗೌರವಿಸೋ ತರ ಕೆಲಸ ಮಾಡೋಣ. ನಟನೆ ಮಾತ್ರ ಸಿನಿಮಾ ಅಲ್ಲ. ಟ್ರೆಂಡ್ ಏನಾಗ್ತಿದೆ? ನಿಮ್ಮ ಜವಾಬ್ದಾರಿ ಏನು ಎಂದು ತಿಳಿದುಕೊಳ್ಳಬೇಕು’ ಎಂದು ಹೊಸ ಜನರೇಶನ್​ಗೆ ಯಶ್ ಕೋರಿಕೊಂಡರು.

ಇದನ್ನೂ ಓದಿ
Image
ಮೊದಲ ಸಿನಿಮಾ ಅವಕಾಶ ಕೊಟ್ಟ ನಿರ್ಮಾಪಕನಿಗೆ ಯಶ್ ಧನ್ಯವಾದ
Image
‘ಟಾಕ್ಸಿಕ್’​​ ಬಗ್ಗೆ ಅಪ್ಡೇಟ್ ಕೊಡ್ತೀನಿ ಎಂದ ನಟ ಯಶ್​
Image
ಮನದ ಕಡಲು ಇವೆಂಟ್​ಗೆ ಬಂದ ಯಶ್, ಬಾಚಿ ತಬ್ಬಿದ ಮುರಳಿ ಮಾಸ್ಟರ್
Image
ಹನಿಸಿಂಗ್ ಕಾನ್ಸರ್ಟ್​ನಲ್ಲಿ ನಟ ಯಶ್ ಭಾಗಿ, ಇಲ್ಲಿವೆ ಕೆಲ ಚಿತ್ರಗಳು

ಇದನ್ನೂ ಓದಿ: ‘ಆ ವ್ಯಕ್ತಿಯಿಂದ ನಾನು ಇಲ್ಲಿದ್ದೇನೆ’; ಮೊದಲ ಸಿನಿಮಾ ಅವಕಾಶ ಕೊಟ್ಟ ನಿರ್ಮಾಪಕನಿಗೆ ಯಶ್ ಧನ್ಯವಾದ

ಯಶ್ ಅವರ ಅಭಿಮಾನಿಗಳಿಗೆ ವಿಶೇಷ ಪ್ರೀತಿ ಇದೆ. ಈ ಬಗ್ಗೆ ಅವರು ಮಾತನಾಡಿದ್ದು, ‘ನಮ್ಮ ಅಭಿಮಾನಿಗಳ ಋಣ ಹೇಗೆ ತೀರಿಸಬೇಕೋ ಗೊತ್ತಾಗುತ್ತಿಲ್ಲ. ನಿಮ್ಮ ಧ್ವನಿ ನನಗೆ ದೊಡ್ಡಸ್ತಿಕೆ ತಂದುಕೊಡಲ್ಲ, ಜವಾಬ್ದಾರಿ ತಂದು ಕೊಡುತ್ತದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:29 am, Mon, 24 March 25

ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ