AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಬಗ್ಗೆ ನನಗೆ ಅಸಹ್ಯ ಆಗಿದೆ’: ಜನ್ಮದಿನದಂದೇ ಫ್ಯಾನ್ಸ್​ ಸತ್ತಿದ್ದಕ್ಕೆ ಯಶ್​ ನೋವಿನ ನುಡಿ

‘ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ಬ್ಯಾನರ್​ ಕಟ್ಟುವುದು, ಬೈಕ್​ನಲ್ಲಿ ಚೇಸ್​ ಮಾಡುವುದನ್ನೆಲ್ಲ ಬಿಟ್ಟು ಬಿಡಿ. ನಿಜವಾಗಿಯೂ ನೀವು ಪ್ರೀತಿ ತೋರಿಸಬೇಕು ಎಂದರೆ ಒಳ್ಳೆಯ ಕೆಲಸ ಮಾಡಿ ನಿಮ್ಮ ಜೀವನದಲ್ಲಿ ಖುಷಿಯಾಗಿರಿ. ಅದೇ ಸಾಕು. ಪ್ರತಿಯೊಬ್ಬ ಅಭಿಮಾನಿಯೂ ಅವರವರ ಬದುಕಿನಲ್ಲಿ ಬೆಳೆದರೆ ಅದೇ ನಮಗೆ ಅವರು ಅಭಿಮಾನ ತೋರಿಸಿದಂತೆ’ ಎಂದು ಯಶ್​ ಹೇಳಿದ್ದಾರೆ.

‘ನನ್ನ ಬಗ್ಗೆ ನನಗೆ ಅಸಹ್ಯ ಆಗಿದೆ’: ಜನ್ಮದಿನದಂದೇ ಫ್ಯಾನ್ಸ್​ ಸತ್ತಿದ್ದಕ್ಕೆ ಯಶ್​ ನೋವಿನ ನುಡಿ
ಸೊರಣಗಿ ಗ್ರಾಮದಲ್ಲಿ ಯಶ್​
TV9 Web
| Updated By: ಮದನ್​ ಕುಮಾರ್​|

Updated on: Jan 08, 2024 | 7:59 PM

Share

ಬ್ಯಾನರ್​ ಕಟ್ಟಲು ಹೋದ ಅಭಿಮಾನಿಗಳು ನಿಧನರಾದ ಹಿನ್ನೆಲೆಯಲ್ಲಿ ಯಶ್​ (Yash) ಅವರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ಮೃತರಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್ ಅವರ ಕುಟುಂಬದ ಸದಸ್ಯರನ್ನು ಯಶ್​ ಭೇಟಿ ಮಾಡಿದ್ದಾರೆ. ಮೃತರ ತಂದೆ-ತಾಯಿಗೆ ಸಾಂತ್ವನ ಹೇಳಿದ ಬಳಿಕ ಯಶ್​ ಅವರು ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಅಭಿಮಾನಿಗಳ ಸಾವಿನ (Yash Fans Death) ಬಗ್ಗೆ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹುಟ್ಟುಹಬ್ಬದ (Yash Birthday) ದಿನವೇ ಫ್ಯಾನ್ಸ್​ ನಿಧನರಾಗಿದ್ದಕ್ಕೆ ಯಶ್​ ಅವರಿಗೆ ತೀವ್ರ ನೋವಾಗಿದೆ.

‘ಬ್ಯಾನರ್​ ಹಾಕಿ ಅಭಿಮಾನ ವ್ಯಕ್ತಪಡಿಸಬೇಕು ಎಂಬುದನ್ನು ನಾವು ಯಾರೂ ಇಷ್ಟಪಡುವುದಿಲ್ಲ. ಪ್ರತಿ ವರ್ಷ ಬರ್ತ್​ಡೇ ಬಂದಾಗ ಇಂಥ ಒಂದು ಘಟನೆ ನಡೆದರೆ ಬರ್ತ್​ಡೇ ಎಂದರೆ ನನಗೆ ಭಯ ಬಂದಿದೆ. ನಿಜ ಹೇಳಬೇಕು ಎಂದರೆ ನನ್ನ ಬಗ್ಗೆ ನನಗೆ ಅಸಹ್ಯ ಆಗಿದೆ. ಎಲ್ಲಿಂದಲೋ ಅವರು ಪ್ರೀತಿಯಿಂದ ಹರಸಿದರೆ ಸಾಕು. ಇದೇ ನಿಜವಾದ ಬರ್ತ್​ಡೇ’ ಎಂದು ಯಶ್​ ಹೇಳಿದ್ದಾರೆ.

‘10-15 ದಿನ ಮುಂಚೆ ಕೊವಿಡ್​ ಅಂತ ಶುರು ಮಾಡಿದರು. ನಮ್ಮ ಬರ್ತ್​ಡೇಯಿಂದ ಯಾರಿಗೂ ತೊಂದರೆ ಆಗಬಾರದು ಅಂತ ನಾನು ಈ ವರ್ಷ ಎಲ್ಲರ ಜೊತೆ ಆಚರಣೆ ಬೇಡ ಅಂತ ನಿರ್ಧರಿಸಿದೆ. ಬೇಡ ಎಂದರೂ ಅಭಿಮಾನಿಗಳು ಬೇಜಾರು ಮಾಡಿಕೊಳ್ಳುತ್ತಾರೆ. ಸಹಾಯ ಯಾರು ಬೇಕಾದರೂ ಮಾಡಬಹುದು. ಮನೆಗೆ ಮಗ ಬರುತ್ತಾನಾ? ಕುಟುಂಬದಲ್ಲಿ ಮಕ್ಕಳನ್ನು ಕಳೆದುಕೊಂಡವರು ಏನು ಹೇಳಲು ಸಾಧ್ಯ? ನಮ್ಮ ಮನೆಗಳಲ್ಲಿ ಸಾವಾದರೂ ಹಾಗೆ ಅಲ್ಲವೇ? ಆ ಹುಡುಗರು ಇನ್ನೂ ಚಿಕ್ಕ ವಯಸ್ಸಿನವರು’ ಎಂದಿದ್ದಾರೆ ಯಶ್​.

‘ಈ ಮೂಲಕ ನಾನು ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ಬ್ಯಾನರ್​ ಕಟ್ಟುವುದು, ಬೈಕ್​ನಲ್ಲಿ ಚೇಸ್​ ಮಾಡುವುದನ್ನೆಲ್ಲ ಬಿಟ್ಟು ಬಿಡಿ. ನಿಜವಾಗಿಯೂ ನೀವು ಪ್ರೀತಿ ತೋರಿಸಬೇಕು ಎಂದರೆ ಒಳ್ಳೆಯ ಕೆಲಸ ಮಾಡಿ ನಿಮ್ಮ ಜೀವನದಲ್ಲಿ ಖುಷಿಯಾಗಿರಿ. ಅದೇ ಸಾಕು. ನನ್ನ ಬಗ್ಗೆ ಬೇಜಾರು ಮಾಡಿಕೊಂಡರೂ ಪರವಾಗಿಲ್ಲ ಅಂತ ನಾನು ದೂರ ಇರುತ್ತೇನೆ. ಪ್ರತಿಯೊಬ್ಬ ಅಭಿಮಾನಿಯೂ ಅವರವರ ಬದುಕಿನಲ್ಲಿ ಬೆಳೆದರೆ ಅದೇ ನಮಗೆ ಅವರು ಅಭಿಮಾನ ತೋರಿಸಿದಂತೆ’ ಎಂದು ಯಶ್​ ಹೇಳಿದ್ದಾರೆ.

ಅಭಿಮಾನಿಗಳ ನಿಧನ ನೋವಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಟ ಯಶ್​

‘ಈಗ ನಾನು ಪರಿಹಾರ ಘೋಷಣೆ ಮಾಡುವುದು ದೊಡ್ಡ ವಿಷಯ ಅಲ್ಲ. ಏನು ಬೇಕಾದರೂ ನಾನು ಮಾತಾಡಬಹುದು. ಆದರೆ ನಿಜವಾಗಿ ಇವರ ಕುಟುಂಬಕ್ಕೆ ಏನು ಅವಶ್ಯಕತೆ ಇದೆಯೋ ಅದನ್ನು ಮಾಡೋಣ. ಅವರ ಕುಟುಂಬಕ್ಕೆ ಮಾಡಬೇಕಾಗಿದ್ದನ್ನು ನಾನು ಮಾಡುತ್ತೇನೆ. ಹಾಗಂತ ಇದು ಒಂದು ಪಾಠ ಆಗಬಾರದು. ಯಾರು ಬೇಜಾರು ಮಾಡಿಕೊಂಡರೂ ಪರವಾಗಿಲ್ಲ. ಇಂದು ಯಾಕೆ ಬಂದು ನೋಡುತ್ತೇವೆ ಎಂದರೆ, ತಂದೆ-ತಾಯಿ ಮೇಲೆ ಇರುವ ಗೌರವಕ್ಕೆ. ಈ ಪ್ರಕರಣದಲ್ಲಿ ಆಗಿದ್ದು ಅವಘಡ. ಅವರಿಗೆ ಗೊತ್ತಾಗದೆಯೇ ಹೀಗೆ ಆಗಿದೆ. ನಮ್ಮ ಮೇಲಿನ ಅಭಿಮಾನಕ್ಕಾಗಿ ನಿಮ್ಮ ಜೀವಕ್ಕೆ ಹಾನಿ ಮಾಡಿಕೊಳ್ಳಬೇಡಿ. ಪ್ರೀತಿ, ಗೌರವ ಇದ್ದರೆ ಜವಾಬ್ದಾರಿಯಿಂದ ನಡೆದುಕೊಳ್ಳಿ’ ಎಂದು ಯಶ್​ ಕಿವಿಮಾತು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು