AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಬಗ್ಗೆ ನನಗೆ ಅಸಹ್ಯ ಆಗಿದೆ’: ಜನ್ಮದಿನದಂದೇ ಫ್ಯಾನ್ಸ್​ ಸತ್ತಿದ್ದಕ್ಕೆ ಯಶ್​ ನೋವಿನ ನುಡಿ

‘ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ಬ್ಯಾನರ್​ ಕಟ್ಟುವುದು, ಬೈಕ್​ನಲ್ಲಿ ಚೇಸ್​ ಮಾಡುವುದನ್ನೆಲ್ಲ ಬಿಟ್ಟು ಬಿಡಿ. ನಿಜವಾಗಿಯೂ ನೀವು ಪ್ರೀತಿ ತೋರಿಸಬೇಕು ಎಂದರೆ ಒಳ್ಳೆಯ ಕೆಲಸ ಮಾಡಿ ನಿಮ್ಮ ಜೀವನದಲ್ಲಿ ಖುಷಿಯಾಗಿರಿ. ಅದೇ ಸಾಕು. ಪ್ರತಿಯೊಬ್ಬ ಅಭಿಮಾನಿಯೂ ಅವರವರ ಬದುಕಿನಲ್ಲಿ ಬೆಳೆದರೆ ಅದೇ ನಮಗೆ ಅವರು ಅಭಿಮಾನ ತೋರಿಸಿದಂತೆ’ ಎಂದು ಯಶ್​ ಹೇಳಿದ್ದಾರೆ.

‘ನನ್ನ ಬಗ್ಗೆ ನನಗೆ ಅಸಹ್ಯ ಆಗಿದೆ’: ಜನ್ಮದಿನದಂದೇ ಫ್ಯಾನ್ಸ್​ ಸತ್ತಿದ್ದಕ್ಕೆ ಯಶ್​ ನೋವಿನ ನುಡಿ
ಸೊರಣಗಿ ಗ್ರಾಮದಲ್ಲಿ ಯಶ್​
TV9 Web
| Edited By: |

Updated on: Jan 08, 2024 | 7:59 PM

Share

ಬ್ಯಾನರ್​ ಕಟ್ಟಲು ಹೋದ ಅಭಿಮಾನಿಗಳು ನಿಧನರಾದ ಹಿನ್ನೆಲೆಯಲ್ಲಿ ಯಶ್​ (Yash) ಅವರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ಮೃತರಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಮತ್ತು ನವೀನ್ ಅವರ ಕುಟುಂಬದ ಸದಸ್ಯರನ್ನು ಯಶ್​ ಭೇಟಿ ಮಾಡಿದ್ದಾರೆ. ಮೃತರ ತಂದೆ-ತಾಯಿಗೆ ಸಾಂತ್ವನ ಹೇಳಿದ ಬಳಿಕ ಯಶ್​ ಅವರು ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಅಭಿಮಾನಿಗಳ ಸಾವಿನ (Yash Fans Death) ಬಗ್ಗೆ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹುಟ್ಟುಹಬ್ಬದ (Yash Birthday) ದಿನವೇ ಫ್ಯಾನ್ಸ್​ ನಿಧನರಾಗಿದ್ದಕ್ಕೆ ಯಶ್​ ಅವರಿಗೆ ತೀವ್ರ ನೋವಾಗಿದೆ.

‘ಬ್ಯಾನರ್​ ಹಾಕಿ ಅಭಿಮಾನ ವ್ಯಕ್ತಪಡಿಸಬೇಕು ಎಂಬುದನ್ನು ನಾವು ಯಾರೂ ಇಷ್ಟಪಡುವುದಿಲ್ಲ. ಪ್ರತಿ ವರ್ಷ ಬರ್ತ್​ಡೇ ಬಂದಾಗ ಇಂಥ ಒಂದು ಘಟನೆ ನಡೆದರೆ ಬರ್ತ್​ಡೇ ಎಂದರೆ ನನಗೆ ಭಯ ಬಂದಿದೆ. ನಿಜ ಹೇಳಬೇಕು ಎಂದರೆ ನನ್ನ ಬಗ್ಗೆ ನನಗೆ ಅಸಹ್ಯ ಆಗಿದೆ. ಎಲ್ಲಿಂದಲೋ ಅವರು ಪ್ರೀತಿಯಿಂದ ಹರಸಿದರೆ ಸಾಕು. ಇದೇ ನಿಜವಾದ ಬರ್ತ್​ಡೇ’ ಎಂದು ಯಶ್​ ಹೇಳಿದ್ದಾರೆ.

‘10-15 ದಿನ ಮುಂಚೆ ಕೊವಿಡ್​ ಅಂತ ಶುರು ಮಾಡಿದರು. ನಮ್ಮ ಬರ್ತ್​ಡೇಯಿಂದ ಯಾರಿಗೂ ತೊಂದರೆ ಆಗಬಾರದು ಅಂತ ನಾನು ಈ ವರ್ಷ ಎಲ್ಲರ ಜೊತೆ ಆಚರಣೆ ಬೇಡ ಅಂತ ನಿರ್ಧರಿಸಿದೆ. ಬೇಡ ಎಂದರೂ ಅಭಿಮಾನಿಗಳು ಬೇಜಾರು ಮಾಡಿಕೊಳ್ಳುತ್ತಾರೆ. ಸಹಾಯ ಯಾರು ಬೇಕಾದರೂ ಮಾಡಬಹುದು. ಮನೆಗೆ ಮಗ ಬರುತ್ತಾನಾ? ಕುಟುಂಬದಲ್ಲಿ ಮಕ್ಕಳನ್ನು ಕಳೆದುಕೊಂಡವರು ಏನು ಹೇಳಲು ಸಾಧ್ಯ? ನಮ್ಮ ಮನೆಗಳಲ್ಲಿ ಸಾವಾದರೂ ಹಾಗೆ ಅಲ್ಲವೇ? ಆ ಹುಡುಗರು ಇನ್ನೂ ಚಿಕ್ಕ ವಯಸ್ಸಿನವರು’ ಎಂದಿದ್ದಾರೆ ಯಶ್​.

‘ಈ ಮೂಲಕ ನಾನು ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ಬ್ಯಾನರ್​ ಕಟ್ಟುವುದು, ಬೈಕ್​ನಲ್ಲಿ ಚೇಸ್​ ಮಾಡುವುದನ್ನೆಲ್ಲ ಬಿಟ್ಟು ಬಿಡಿ. ನಿಜವಾಗಿಯೂ ನೀವು ಪ್ರೀತಿ ತೋರಿಸಬೇಕು ಎಂದರೆ ಒಳ್ಳೆಯ ಕೆಲಸ ಮಾಡಿ ನಿಮ್ಮ ಜೀವನದಲ್ಲಿ ಖುಷಿಯಾಗಿರಿ. ಅದೇ ಸಾಕು. ನನ್ನ ಬಗ್ಗೆ ಬೇಜಾರು ಮಾಡಿಕೊಂಡರೂ ಪರವಾಗಿಲ್ಲ ಅಂತ ನಾನು ದೂರ ಇರುತ್ತೇನೆ. ಪ್ರತಿಯೊಬ್ಬ ಅಭಿಮಾನಿಯೂ ಅವರವರ ಬದುಕಿನಲ್ಲಿ ಬೆಳೆದರೆ ಅದೇ ನಮಗೆ ಅವರು ಅಭಿಮಾನ ತೋರಿಸಿದಂತೆ’ ಎಂದು ಯಶ್​ ಹೇಳಿದ್ದಾರೆ.

ಅಭಿಮಾನಿಗಳ ನಿಧನ ನೋವಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಟ ಯಶ್​

‘ಈಗ ನಾನು ಪರಿಹಾರ ಘೋಷಣೆ ಮಾಡುವುದು ದೊಡ್ಡ ವಿಷಯ ಅಲ್ಲ. ಏನು ಬೇಕಾದರೂ ನಾನು ಮಾತಾಡಬಹುದು. ಆದರೆ ನಿಜವಾಗಿ ಇವರ ಕುಟುಂಬಕ್ಕೆ ಏನು ಅವಶ್ಯಕತೆ ಇದೆಯೋ ಅದನ್ನು ಮಾಡೋಣ. ಅವರ ಕುಟುಂಬಕ್ಕೆ ಮಾಡಬೇಕಾಗಿದ್ದನ್ನು ನಾನು ಮಾಡುತ್ತೇನೆ. ಹಾಗಂತ ಇದು ಒಂದು ಪಾಠ ಆಗಬಾರದು. ಯಾರು ಬೇಜಾರು ಮಾಡಿಕೊಂಡರೂ ಪರವಾಗಿಲ್ಲ. ಇಂದು ಯಾಕೆ ಬಂದು ನೋಡುತ್ತೇವೆ ಎಂದರೆ, ತಂದೆ-ತಾಯಿ ಮೇಲೆ ಇರುವ ಗೌರವಕ್ಕೆ. ಈ ಪ್ರಕರಣದಲ್ಲಿ ಆಗಿದ್ದು ಅವಘಡ. ಅವರಿಗೆ ಗೊತ್ತಾಗದೆಯೇ ಹೀಗೆ ಆಗಿದೆ. ನಮ್ಮ ಮೇಲಿನ ಅಭಿಮಾನಕ್ಕಾಗಿ ನಿಮ್ಮ ಜೀವಕ್ಕೆ ಹಾನಿ ಮಾಡಿಕೊಳ್ಳಬೇಡಿ. ಪ್ರೀತಿ, ಗೌರವ ಇದ್ದರೆ ಜವಾಬ್ದಾರಿಯಿಂದ ನಡೆದುಕೊಳ್ಳಿ’ ಎಂದು ಯಶ್​ ಕಿವಿಮಾತು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ