Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀಸ್ಟ್​ Vs ಕೆಜಿಎಫ್​ ಅನ್ನೋಕೆ ಇದು ಎಲೆಕ್ಷನ್​ ಅಲ್ಲ’: ದಳಪತಿ ವಿಜಯ್​ ಚಿತ್ರದ ಪೈಪೋಟಿ ಬಗ್ಗೆ ಯಶ್​ ಪ್ರತಿಕ್ರಿಯೆ

KGF Chapter 2 and Beast: ‘ವಿಜಯ್ ಸರ್​ ನನಗಿಂತ ಸೀನಿಯರ್​. ನಾವು ಅವರಿಗೆ ಗೌರವ ಕೊಡಬೇಕು. ವಿಜಯ್​ ಅವರ ಅಭಿಮಾನಿಗಳಿಗೂ ‘ಕೆಜಿಎಫ್​ 2’ ಸಿನಿಮಾ ಇಷ್ಟ ಆಗಲಿದೆ’ ಎಂದು ಯಶ್​ ಹೇಳಿದ್ದಾರೆ.

‘ಬೀಸ್ಟ್​ Vs ಕೆಜಿಎಫ್​ ಅನ್ನೋಕೆ ಇದು ಎಲೆಕ್ಷನ್​ ಅಲ್ಲ’: ದಳಪತಿ ವಿಜಯ್​ ಚಿತ್ರದ ಪೈಪೋಟಿ ಬಗ್ಗೆ ಯಶ್​ ಪ್ರತಿಕ್ರಿಯೆ
ದಳಪತಿ ವಿಜಯ್​, ಯಶ್​
Follow us
TV9 Web
| Updated By: ಮದನ್​ ಕುಮಾರ್​

Updated on: Mar 28, 2022 | 8:19 AM

ಏಪ್ರಿಲ್​ನಲ್ಲಿ ಸಿನಿಪ್ರಿಯರಿಗೆ ಮನರಂಜನೆಯ ಹಬ್ಬ ಆಗಲಿದೆ. ‘ರಾಕಿಂಗ್​ ಸ್ಟಾರ್​’ ಯಶ್ (Rocking Star Yash)​ ಅಭಿನಯದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಏ.14ರಂದು ಬಿಡುಗಡೆ ಆಗಲಿದೆ. ಕನ್ನಡ ಮಾತ್ರವಲ್ಲದೇ ತಮಿಳು, ಮಲಯಾಳಂ, ಹಿಂದಿ ಮತ್ತು ತೆಲುಗಿಗೂ ಡಬ್​ ಆಗಿ ಈ ಸಿನಿಮಾ ರಿಲೀಸ್​ ಆಗಲಿದೆ. ಅದೇ ರೀತಿ ಕಾಲಿವುಡ್​ ನಟ ದಳಪತಿ ವಿಜಯ್​ ಅವರ ‘ಬೀಸ್ಟ್​’ ಸಿನಿಮಾ (Beast Movie) ಕೂಡ ಅದೇ ಸಮಯದಲ್ಲಿ ತೆರೆಕಾಣುತ್ತಿದೆ. ‘ಕೆಜಿಎಫ್​: 2’ ಚಿತ್ರಕ್ಕಿಂತಲೂ ಒಂದು ದಿನ ಮುಂಚೆ ಅಂದರೆ, ಏ.13ರಂದು ‘ಬೀಸ್ಟ್​’ ಬಿಡುಗಡೆ ಆಗಲಿದೆ. ಈ ರೀತಿ ಇಬ್ಬರು ದೊಡ್ಡ ಸ್ಟಾರ್​ ನಟರ ಸಿನಿಮಾಗಳು ಒಟ್ಟೊಟ್ಟಿಗೆ ರಿಲೀಸ್​ ಆದಾಗ ಸಹಜವಾಗಿಯೇ ಪೈಪೋಟಿ ಏರ್ಪಡುತ್ತದೆ. ಆದರೆ ಇದನ್ನು ಬಾಕ್ಸ್​ ಆಫೀಸ್​ ಕ್ಲ್ಯಾಶ್​ ಎಂದು ಕರೆಯಲು ಯಶ್​ ಸಿದ್ಧರಿಲ್ಲ. ‘ಬೀಸ್ಟ್​ ವರ್ಸಸ್​ ಕೆಜಿಎಫ್​’ ಎಂಬ ಮಾತನ್ನೇ ಅವರು ತಳ್ಳಿ ಹಾಕಿದ್ದಾರೆ. ಅವರ ಪ್ರಕಾರ ಇದು ‘ಬೀಸ್ಟ್​ ಮತ್ತು ಕೆಜಿಎಫ್​ 2’. ‘ಬೀಸ್ಟ್​ ವರ್ಸಸ್​ ಕೆಜಿಎಫ್​ 2’ ಅಲ್ಲ. ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಟ್ರೇಲರ್​ ಲಾಂಚ್​ ಇವೆಂಟ್​ನಲ್ಲಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರಿನಲ್ಲಿ ಅದ್ದೂರಿಯಾಗಿ ಭಾನುವಾರ (ಮಾ.27) ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ಎಲ್ಲ ಭಾಷೆಯ ಪತ್ರಕರ್ತರನ್ನು ಬೆಂಗಳೂರಿಗೆ ಆಹ್ವಾನಿಸಿ ಸುದ್ದಿಗೋಷ್ಠಿ ನಡೆಸಲಾಗಿದೆ. ಈ ವೇಳೆ ‘ಬೀಸ್ಟ್​’ ಸಿನಿಮಾ ಜೊತೆಗಿನ ಕ್ಲ್ಯಾಶ್​ ಬಗ್ಗೆ ಪ್ರಶ್ನೆ ಎದುರಾಯಿತು. ಅದಕ್ಕೆ ಯಶ್​ ಅವರು ನೇರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

‘ನಾವು ತುಂಬ ಮುಂಚೆಯೇ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದ್ವಿ. ಯಾವ ಸಿನಿಮಾ ರಿಲೀಸ್​ ಆಗುತ್ತದೆ ಅನ್ನೋದು ನಮಗೆ ಗೊತ್ತಿರಲಿಲ್ಲ. ಈಗ ವಿಜಯ್​ ಅವರ ಬೀಸ್ಟ್​ ಚಿತ್ರ ಬರುತ್ತಿದೆ. ಬೀಸ್ಟ್​ ವರ್ಸಸ್​ ಕೆಜಿಎಫ್​ ಅಂತ ಕೇಳಬಾರದು. ಬೀಸ್ಟ್​ ಮತ್ತು ಕೆಜಿಎಫ್​ ಎನ್ನಬೇಕು. ಎರಡೂ ಕೂಡ ಇಂಡಿಯನ್​ ಸಿನಿಮಾ. ಇದು ಎಲೆಕ್ಷನ್​ ಅಲ್ಲ, ಸಿನಿಮಾ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬ ಮಾತು ಇದರಲ್ಲಿ ಬರಲ್ಲ. ಎರಡೂ ಸಿನಿಮಾವನ್ನೂ ನೋಡೋಣ. ವಿಜಯ್ ಸರ್​ ನನಗಿಂತ ಸೀನಿಯರ್​. ನಾವು ಅವರಿಗೆ ಗೌರವ ಕೊಡಬೇಕು. ವಿಜಯ್​ ಅವರ ಅಭಿಮಾನಿಗಳಿಗೂ ‘ಕೆಜಿಎಫ್​ 2’ ಸಿನಿಮಾ ಇಷ್ಟ ಆಗಲಿದೆ’ ಎಂದು ಯಶ್​ ಹೇಳಿದ್ದಾರೆ.

‘ಕೆಜಿಎಫ್​ 2’ ರೀತಿಯೇ ‘ಬೀಸ್ಟ್​’ ಕೂಡ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ತೆರೆ ಕಾಣುತ್ತಿದೆ. ಈ ಚಿತ್ರಕ್ಕೆ ನೆಲ್ಸನ್​ ದಿಲೀಪ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ. ವಿಜಯ್​ಗೆ ಜೋಡಿಯಾಗಿ ಪೂಜಾ ಹೆಗ್ಡೆ ಅಭಿನಯಿಸಿದ್ದಾರೆ. ಈಗಾಗಲೇ ಹಾಡುಗಳು ಸೂಪರ್​ ಹಿಟ್​ ಆಗಿವೆ. ಆ ಕಾರಣದಿಂದ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಹಾಗೆಯೇ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಕೂಡ ಸಖತ್​ ಹೈಪ್​ ಸೃಷ್ಟಿ ಮಾಡಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಬಾಲಿವುಡ್​ ಕಲಾವಿದರಾದ ರವೀನಾ ಟಂಡನ್​ ಮತ್ತು ಸಂಜಯ್​ ದತ್​ ಅವರು ನಟಿಸಿರುವುದರಿಂದ ಉತ್ತರ ಭಾರತದ ಪ್ರೇಕ್ಷಕರು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಇವರಿಬ್ಬರ ಪಾತ್ರಗಳು ಅಬ್ಬರಿಸಿವೆ. ರಮಿಕಾ ಸೇನ್​ ಎಂಬ ಪಾತ್ರದಲ್ಲಿ ರವೀನಾ ಟಂಡನ್​ ಕಾಣಿಸಿಕೊಂಡಿದ್ದರೆ, ಅಧೀರ ಎಂಬ ಪಾತ್ರಕ್ಕೆ ಸಂಜಯ್​ ದತ್​ ಬಣ್ಣ ಹಚ್ಚಿದ್ದಾರೆ. ಇವರಿಬ್ಬರು ಕೂಡ ಟ್ರೇಲರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇದನ್ನೂ ಓದಿ:

‘ರಕ್ತದಿಂದ ಬರೆದ ಕಥೆ ಇದು’; ‘ಕೆಜಿಎಫ್​ ಚಾಪ್ಟರ್​ 2’ ಟ್ರೇಲರ್​ನಲ್ಲಿ ಅಬ್ಬರಿಸಿ, ಬೊಬ್ಬಿರಿದ ಯಶ್​

ಮುಂಬೈನ ಆರಂತಸ್ತಿನ ಮಾಲ್​ ಮೇಲೆ ರಾರಾಜಿಸಿದ ಯಶ್​ ಪೋಸ್ಟರ್​​; ಇದು ‘ಕೆಜಿಎಫ್​ 2’ ಕ್ರೇಜ್​

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ