AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೆಂಡ್​ಗಾಗಿ ನಿಧಿ ಸುಬ್ಬಯ್ಯ ಮನೆ ಎದುರು ದೊಡ್ಡ ಅವಾಂತರ ಮಾಡಿದ್ದ ಯಶ್; ಇಲ್ಲಿದೆ ವಿವರ

Yash: ಯಶ್ ಮೈಸೂರಿನಲ್ಲಿ ಓದಿದ್ದು. ಕಾಲೇಜ್​ನಲ್ಲಿ ಇರುವಾಗ ಸಾಕಷ್ಟು ಎಂಜಾಯ್​ಮೆಂಟ್ ಮಾಡಿದ್ದಾರೆ. ಮುಖ್ಯವಾಗಿ ಅವರು ಸಾಕಷ್ಟು ಫನ್ ಆ್ಯಕ್ಟಿವಿಟಿ ಕೂಡ ಮಾಡಿದ್ದರು ಎಂಬುದಾಗಿ ಅವರೇ ಹೇಳಿಕೊಂಡಿದ್ದರು. ಅವರ ಸಂದರ್ಶನದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ಬಗ್ಗೆ ಇಲ್ಲಿದೆ ವಿವರ.

ಫ್ರೆಂಡ್​ಗಾಗಿ ನಿಧಿ ಸುಬ್ಬಯ್ಯ ಮನೆ ಎದುರು ದೊಡ್ಡ ಅವಾಂತರ ಮಾಡಿದ್ದ ಯಶ್; ಇಲ್ಲಿದೆ ವಿವರ
ಯಶ್-ನಿಧಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 08, 2025 | 6:30 AM

Share

ರಾಕಿಂಗ್ ಸ್ಟಾರ್ ಯಶ್ (Yash) ಎಂದರೆ ಇಡೀ ವಿಶ್ವಕ್ಕೆ ತಿಳಿಯುತ್ತದೆ. ಅವರು ಅಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಪಕ್ಕಾ ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆಯಿಂದ ಬಂದವರು. ಅವರು ಈಗ ಶ್ರೀಮಂತ ಜೀವನ ನಡೆಸುತ್ತಿದ್ದಾರೆ. ಯಶ್ ಅವರು ಕಾಲೇಜು ದಿನಗಳಲ್ಲಿ ಸಾಕಷ್ಟು ತರಲೆ ಮಾಡಿಕೊಂಡಿದ್ದರು. ಅವರು ಈ ಬಗ್ಗೆ ಈ ಹಿಂದೆ ಹೇಳಿಕೊಂಡಿದ್ದರು. ನಿಧಿ ಸುಬ್ಬಯ್ಯ ಮನೆ ಎದುರು ಯಶ್ ಪಟಾಕಿ ಸಿಡಿಸಿದ್ದರಂತೆ. ಇದು ಅಚ್ಚರಿ ಎನಿಸಿದರೂ ಸತ್ಯ. ನಿಧಿ ಸುಬ್ಬಯ್ಯ ಆಗಿನ್ನೂ ಹೀರೋಯಿನ್ ಆಗಿರಲಿಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ.

ಯಶ್ ಮೈಸೂರಿನಲ್ಲಿ ಓದಿದ್ದು. ಕಾಲೇಜ್​ನಲ್ಲಿ ಇರುವಾಗ ಸಾಕಷ್ಟು ಎಂಜಾಯ್​ಮೆಂಟ್ ಮಾಡಿದ್ದಾರೆ. ಮುಖ್ಯವಾಗಿ ಅವರು ಸಾಕಷ್ಟು ಫನ್ ಆ್ಯಕ್ಟಿವಿಟಿ ಕೂಡ ಮಾಡಿದ್ದರು ಎಂಬುದಾಗಿ ಅವರೇ ಹೇಳಿಕೊಂಡಿದ್ದರು. ಅವರ ಸಂದರ್ಶನದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಯಶ್ ಎದುರು ಪ್ರಿಯಾಮಣಿ ಕುಳಿತಿದ್ದರು. ಅವರು ಪ್ರಿಯಾಮಣಿಗೆ ತಮ್ಮ ಹಳೆಯ ಕಥೆ ಹೇಳುತ್ತಿದ್ದರು. ‘ಹುಡುಗಿ ಮನೆಗೆ ಪಟಾಕಿ ಹಚ್ಚಿದ್ದೆ’ ಎಂದು ಯಶ್ ಮಾತು ಆರಂಭಿಸಿದರು. ‘ಆ ಹುಡುಗಿ ಈಗ ನಟಿ ಆಗಿದ್ದಾರೆ. ಅವರು ನಿಧಿ ಸುಬ್ಬಯ್ಯ’ ಎಂದರು ಯಶ್. ‘ನಿಧಿ ಸುಬ್ಬಯ್ಯ ನಮ್ಮ ಕಾಲೇಜ್​ನಲ್ಲಿ ಓದಿದ್ದು. ನನ್ನ ಫ್ರೆಂಡ್ ನಿಧಿಯನ್ನು ಪ್ರೀತಿಸುತ್ತಿದ್ದ. ಅವನಿಗೆ ನಾವು ಸಹಾಯ ಮಾಡುತ್ತಿದ್ದವು. ಈ ಹುಡುಗರು ಸರಿ ಇಲ್ಲ ಎಂದು ಆಗ ನಿಧಿ ಸುಬ್ಬಯ್ಯಗೆ ಯಾರೋ ಫಿಟ್ಟಿಂಗ್ ಇಟ್ಟಿದ್ದರು. ಆಗ ನಾನು ಹಾಗೂ ನನ್ನ ಗೆಳೆಯರು ಹೋಗಿ ಅವರ ಮನೆಯ ಗೇಟ್​ಗೆ ಪಟಾಕಿ ಹಚ್ಚಿದ್ದೆವು. ಬರುವಾಗ ಲೈಟ್ ಎಲ್ಲಾ ಆನ್ ಆಗಿತ್ತು. ಜಸ್ಟ್ ಮಿಸ್’ ಎಂದು ಯಶ್ ಹೇಳಿದ್ದರು.

ಆ ಬಳಿಕ ಸುಮಾರು ವರ್ಷಗಳ ನಂತರ ನಿಧಿ ಸುಬ್ಬಯ್ಯ ಅವರು ಸಿಕ್ಕರಂತೆ. ಕಾಲೇಜು ಓದಿದ್ದ ದಿನದಂದು ಈ ರೀತಿ ಆಗಿತ್ತಲ್ಲ ಎಂದು ಅವರಿಗೆ ಯಶ್ ಹೇಳಿದ್ದರಂತೆ. ಆ ಬಳಿಕ ಅದನ್ನು ಮಾಡಿದ್ದು ತಾವೇ ಎಂಬುದಾಗಿ ಒಪ್ಪಿಕೊಂಡಿದ್ದರು.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ನೋಡಿ ಯಶ್, ರಾಧಿಕಾ ಹೇಳಿದ್ದು ಹೀಗೆ

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ರಿಲೀಸ್ ಆಗಲಿದೆ. ನಿಧಿ ಸುಬ್ಬಯ್ಯ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಈ ಮೊದಲು ಬಿಗ್ ಬಾಸ್​ಗೆ ಅವರು ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ