AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rocking Star Yash: ಯಶ್​ ಮನೆಗೆ ಬಂತು ಹೊಸ ಐಷಾರಾಮಿ ಕಾರು; ಈ ದುಬಾರಿ ಕಾರಿನ ಬೆಲೆ ಎಷ್ಟು ಕೋಟಿ ರೂ.?

Yash New Car: ಹೊಸ ಕಾರು ಖರೀದಿಸಿರುವ ಯಶ್​ಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅವರು ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ಕಾಣಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

Rocking Star Yash: ಯಶ್​ ಮನೆಗೆ ಬಂತು ಹೊಸ ಐಷಾರಾಮಿ ಕಾರು; ಈ ದುಬಾರಿ ಕಾರಿನ ಬೆಲೆ ಎಷ್ಟು ಕೋಟಿ ರೂ.?
ಯಶ್​ ಹೊಸ ಕಾರು
ಮದನ್​ ಕುಮಾರ್​
|

Updated on: Jun 15, 2023 | 2:38 PM

Share

ನಟ ಯಶ್​ (Yash) ಅವರು ಕೇವಲ ಸ್ಯಾಂಡಲ್​ವುಡ್​ಗೆ ಸೀಮಿತ ಆಗಿಲ್ಲ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಆದ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿರುವ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಅದಕ್ಕೆ ತಕ್ಕಂತೆ ಅವರ ಲೈಫ್​ಸ್ಟೈಲ್​ ಕೂಡ ಬದಲಾಗಿದೆ. ಈಗ ಯಶ್​ ಮನೆಗೆ ಹೊಸ ಐಷಾರಾಮಿ ಕಾರು ಬಂದಿದೆ. ರೇಂಜ್​ ರೋವರ್​ (Range Rover) ಕಾರನ್ನು ‘ರಾಕಿಂಗ್​ ಸ್ಟಾರ್​’ ಯಶ್​ ಖರೀದಿಸಿದ್ದಾರೆ. ಕಪ್ಪು ಬಣ್ಣದ ಕಾರಿನಲ್ಲಿ ಅವರು ಪತ್ನಿ ರಾಧಿಕಾ ಪಂಡಿತ್​ ಜೊತೆ ಸುತ್ತಾಡಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಯಶ್​ ಅವರ ಮಕ್ಕಳಾದ ಯಥರ್ವ್​ ಮತ್ತು ಆಯ್ರಾ ಕೂಡ ಪೋಸ್​ ನೀಡಿದ್ದಾರೆ. ಹೊಸ ಕಾರಿನಲ್ಲಿ ಸುತ್ತಾಡಿದ ವಿಡಿಯೋ (Yash New Car Video) ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಇದರ ಬೆಲೆ ಎಷ್ಟು ಎಂದು ಕೂಡ ಅಭಿಮಾನಿಗಳು ಗೂಗಲ್​ನಲ್ಲಿ ಹುಡುಕಾಡುತ್ತಿದ್ದಾರೆ.

ಹೊಸ ಕಾರು ಖರೀದಿಸಿರುವ ಯಶ್​ಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅವರು ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ಕಾಣಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ. ಈ ಹೊಸ ರೇಂಜ್​ ರೋವರ್​ ಕಾರಿನ ಬೆಲೆ ಬರೋಬ್ಬರಿ 4 ಕೋಟಿ ರೂಪಾಯಿ! ಅನೇಕ ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿವೆ. ಯಶ್​ ನಟಿಸಲಿರುವ ಹೊಸ ಸಿನಿಮಾ ಇನ್ನಷ್ಟೇ ಸೆಟ್ಟೇರಬೇಕಿದೆ. ಅದಕ್ಕೂ ಮುನ್ನವೇ ಅವರು ದುಬಾರಿ ಬೆಲೆಯ ಕಾರನ್ನು ಖರೀದಿಸಿ ಸುದ್ದಿ ಆಗಿದ್ದಾರೆ.

ಯಶ್​ ಅವರ 19ನೇ ಸಿನಿಮಾ ಬಗ್ಗೆ ತುಂಬ ಕುತೂಹಲ ಇದೆ. ಈ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ? ಬಂಡವಾಳ ಹೂಡಲಿರುವುದು ಯಾರು? ಸಿನಿಮಾದ ಶೀರ್ಷಿಕೆ ಏನು ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಫ್ಯಾನ್ಸ್​ ಕಾತುರರಾಗಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಗೆಲುವಿನ ಬಳಿಕ ಅವರು ದೀರ್ಘವಾದ ಬ್ರೇಕ್​ ಪಡೆದುಕೊಂಡಿದ್ದಾರೆ. ಸೂಕ್ತ ತಯಾರಿಯೊಂದಿಗೆ ಹೊಸ ಸಿನಿಮಾಗೆ ಚಾಲನೆ ನೀಡಬೇಕು ಎಂಬುದು ಅವರ ಉದ್ದೇಶ. ಹಾಗಾಗಿ ಹೊಸ ಚಿತ್ರ ಅನೌನ್ಸ್ ಆಗುವ ಸಮಯ ಹಿಡಿಯುತ್ತಿದೆ.

ಇದನ್ನೂ ಓದು: Yash: ಯಶ್​ಗಾಗಿ ದೊಡ್ಡ ಕಥೆ ಬರೆದಿದ್ದೆ, ಆದರೆ…; ನರ್ತನ್ ಓಪನ್ ಮಾತು

ಬಾಲಿವುಡ್​ನಲ್ಲಿ ಖ್ಯಾತ ನಿರ್ದೇಶಕ ನಿತೇಶ್​ ತಿವಾರಿ ಅವರು ಆ್ಯಕ್ಷನ್​-ಕಟ್​ ಹೇಳಲಿರುವ ರಾಮಾಯಣ ಆಧಾರಿತ ಸಿನಿಮಾ ಬಗ್ಗೆ ಹತ್ತಾರು ಗಾಸಿಪ್​ಗಳು ಹರಿದಾಡುತ್ತಿವೆ. ಈ ಸಿನಿಮಾಗೆ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಸೀತೆ ಪಾತ್ರದಲ್ಲಿ ಆಲಿಯಾ ಭಟ್​ ಹಾಗೂ ರಾಮನ ಪಾತ್ರದಲ್ಲಿ ರಣಬೀರ್​ ಕಪೂರ್​ ನಟಿಸುತ್ತಾರೆ ಎನ್ನಲಾಗುತ್ತಿದೆ. ಅದೇ ರೀತಿ ರಾವಣನ ಪಾತ್ರವನ್ನು ಯಶ್​ ಅವರಿಗೆ ನೀಡಲಾಗುವುದು ಎಂಬ ಸುದ್ದಿ ಕೂಡ ಹರಿದಾಡಿತ್ತು. ಆದರೆ ಆ ಪಾತ್ರವನ್ನು ಮಾಡಲು ಯಶ್​ ಒಪ್ಪಿಕೊಂಡಿಲ್ಲ ಎಂದು ಇತ್ತೀಚೆಗೆ ಮಾಹಿತಿ ಕೇಳಿಬಂದಿದೆ. ‘ರಾಕಿಂಗ್​ ಸ್ಟಾರ್​’ ಅವರು ರಾವಣನ ಪಾತ್ರವನ್ನು ತಿರಸ್ಕರಿಸಿದ್ದು ಒಳ್ಳೆಯದೇ ಆಯಿತು ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ