AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡ್ಡು ಮಾಡೋಕೆ ಇಲ್ಲಿಗೆ ಬಂದಿಲ್ಲ, ತಂದೆ ತಾಯಿಗೆ ಸಮಸ್ಯೆ ಆದಾಗ ಇಮೇಜ್​ ಮುಖ ನೋಡಿ ಸುಮ್ಮನೆ ಕೂರೋಕಾಗಲ್ಲ: ಯಶ್​

ಸಮಸ್ಯೆ ಇದ್ದರೆ ಮಾತುಕತೆ ಮೂಲಕ ಅದನ್ನು ಬಗೆಹರಿಸಿಕೊಳ್ಳಲಿ. ಹಳ್ಳಿ ಜನ ಏನೋ‌ ಮಾತಾಡಿದಾರೆ, ನಮ್ಮ ತಂದೆ ತಾಯಿ ಕೂಡ ಹಳ್ಳಿ ಜನರೇ. ತಂದೆ ತಾಯಿಗೆ ಸಮಸ್ಯೆ ಆದಾಗ ಇಮೇಜ್​ ಅಂತ ಸುಮ್ಮನೆ ಕೂರೋಕಾಗಲ್ಲ. ಹಾಗಾಗಿ ನಾನೇ ಬಂದಿದ್ದೇನೆ. ಗ್ರಾಮಸ್ಥರಿಗೆ ಬೇಕಿದ್ರೆ ಕೇಳಲಿ ಸರ್ ಹತ್ತು ಎಕರೆಯನ್ನಾದ್ರೂ ಬಿಟ್ಟು ಕೊಡ್ತೀನಿ.

ದುಡ್ಡು ಮಾಡೋಕೆ ಇಲ್ಲಿಗೆ ಬಂದಿಲ್ಲ, ತಂದೆ ತಾಯಿಗೆ ಸಮಸ್ಯೆ ಆದಾಗ ಇಮೇಜ್​ ಮುಖ ನೋಡಿ ಸುಮ್ಮನೆ ಕೂರೋಕಾಗಲ್ಲ: ಯಶ್​
ಯಶ್​
Skanda
|

Updated on:Mar 09, 2021 | 5:27 PM

Share

ಹಾಸನ: ಜಮೀನಿನ ದಾರಿಗೆ ಸಂಬಂಧಿಸಿದಂತೆ ಗ್ರಾಮಸ್ಥರು ಮತ್ತು ತಂದೆ, ತಾಯಿ ನಡುವೆ ಆಗಿರುವ ಜಗಳಕ್ಕೆ ಸಂಬಂಧಿಸಿದಂತೆ ಪೊಲೀಸ್​ ಠಾಣೆಗೆ ಭೇಟಿ ನೀಡಿದ ನಂತರ ಪ್ರತಿಕ್ರಿಯಿಸಿರುವ ನಟ ರಾಕಿಂಗ್​ ಸ್ಟಾರ್​ ಯಶ್​, ತಂದೆ ತಾಯಿಗೆ ಸಮಸ್ಯೆ ಆದಾಗ ಇಮೇಜ್​ ಮುಖ ನೋಡಿ ಸುಮ್ಮನೆ ಕೂರೋಕಾಗಲ್ಲ. ನಮ್ಮ ತಂದೆ ತಾಯಿಗೆ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಎಲ್ಲಿಂದಲೋ‌ ಬಂದವರು ಅಂತಾರಂತೆ, ನಾನು ಇಲ್ಲೇ ಹುಟ್ಟಿ ಬೆಳೆದವನು ಸಾರ್, ನಾನು ಹಾಸನದಲ್ಲೂ ಮಾಡ್ತೀನಿ, ಬೆಳಗಾವಿಯಲ್ಲೂ ಮಾಡ್ತೀನಿ, ಮಂಗಳೂರಲ್ಲೂ ಮಾಡ್ತೀನಿ, ನಾವು ಸೆಲೆಬ್ರಿಟಿ ಆಗೋದೇ ತಪ್ಪು ಎನ್ನುವ ಹಾಗಾಗಿದೆ ಎಂದು ಗರಂ ಆಗಿದ್ದಾರೆ.

ಸಮಸ್ಯೆ ಇದ್ದರೆ ಮಾತುಕತೆ ಮೂಲಕ ಅದನ್ನು ಬಗೆಹರಿಸಿಕೊಳ್ಳಲಿ. ಹಳ್ಳಿ ಜನ ಏನೋ‌ ಮಾತಾಡಿದಾರೆ, ನಮ್ಮ ತಂದೆ ತಾಯಿ ಕೂಡ ಹಳ್ಳಿ ಜನರೇ. ತಂದೆ ತಾಯಿಗೆ ಸಮಸ್ಯೆ ಆದಾಗ ಇಮೇಜ್​ ಅಂತ ಸುಮ್ಮನೆ ಕೂರೋಕಾಗಲ್ಲ. ಹಾಗಾಗಿ ನಾನೇ ಬಂದಿದ್ದೇನೆ. ಗ್ರಾಮಸ್ಥರಿಗೆ ಬೇಕಿದ್ರೆ ಕೇಳಲಿ ಸರ್ ಹತ್ತು ಎಕರೆಯನ್ನಾದ್ರೂ ಬಿಟ್ಟು ಕೊಡ್ತೀನಿ. ದುಡ್ದು ಮಾಡೋ ಹಾಗಿದ್ದರೆ ಬೆಂಗಳೂರಲ್ಲೇ ಮಾಡಬಹುದಿತ್ತು. ಅಲ್ಲಿ ಜಮೀನು ಮಾಡಿದ್ರೆ ಚೆನ್ನಾಗಿ ಹಣವೂ ಸಿಗ್ತಿತ್ತು. ನಾನು‌ ಹಾಸನದಲ್ಲಿ ಯಾಕೆ‌ ಜಮೀನು ಮಾಡಬೇಕು ಅರ್ಥ ಮಾಡ್ಕೊಳ್ಳಿ. ಮಾದರಿ ರೀತಿಯಲ್ಲಿ ಕೃಷಿ ಮಾಡಬೇಕೆಂದು ಮಾಡಿದ್ದೇನೆ ಎಂದು ಹಾಸನ ಜಿಲ್ಲೆ ದುದ್ದಾ ಪೊಲೀಸ್ ಠಾಣೆ ಎದುರು ನಟ ಯಶ್ ಹೇಳಿದ್ದಾರೆ.

ನಾವೂ ಅಪ್ಪ ಅಮ್ಮನಿಗೆ ಹುಟ್ಟಿದ ಮಕ್ಕಳೇ. ತಂದೆ ತಾಯಿಗೆ ಮಾತನಾಡಿದರೂ ನಮ್ಮ ಇಮೇಜ್ ಎಂದು ಕೂರಲು ಆಗಲ್ಲ. ಎಲ್ಲರೂ ಮೀಡಿಯಾ ಇದೆ, ಮೀಡಿಯಾ ಇದೆ ಅಂತಾರೆ ಇರ್ಲಿ ಬಿಡ್ರೀ. ರಸ್ತೆ ವಿವಾದ ಒಂದೂವರೆ ವರ್ಷದ ಹಿಂದೆಯೇ ಮುಗಿದಿದೆ. ರಸ್ತೆ ವಿವಾದ ದೊಡ್ಡದಲ್ಲ. ಹೀಗೆಲ್ಲ ಬಣ್ಣ ಕಟ್ಟುತ್ತಾರೆ ನೀವು ನಂಬೋಕೆ ಹೋಗ್ಬೇಡಿ ಎಂದು ಕಿಡಿಕಾರಿದ್ದಾರೆ. ಈ ಘಟನೆ ಸಂಬಂಧ ಬೇಸರ ವ್ಯಕ್ತಪಡಿಸಿರುವ ರಾಕಿಗ್ ಸ್ಟಾರ್, ಸ್ಕೂಲ್‌ ಮಾಡ್ತಾರಾ ಯಾರಾದ್ರೂ ಅಥವಾ ಬಡವರಿಗೆ ಅನುಕೂಲ ಆಗುತ್ತಾ ಬೇಕಿದ್ರೆ ಕೇಳಲಿ ನಾವೇ ಹತ್ತು ಎಕರೆ ಜಮೀನು‌ ಕೊಡುತ್ತೇವೆ. ನಮ್ಮ ತಂದೆ ತಾಯಿ ಕೂಡ ಹಳ್ಳಿ ಜನರೇ, ಅವರೂ ಮಾತನಾಡಿರಬಹುದು. ಆದರೆ, ತಂದೆ ತಾಯಿ ಜೊತೆ ಹಾಗೆ ಕೆಟ್ಟದಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ‌ಕೆಲ ಸ್ಥಳೀಯರ ವಿರುದ್ಧ ಆಕ್ರೊಶ ಹೊರಹಾಕಿದ್ದಾರೆ.

ಇದನ್ನೂ ಓದಿ:

ಜಮೀನಿಗೆ ರಸ್ತೆ ನಿರ್ಮಿಸುವ ವಿಚಾರವಾಗಿ ಹಾಸನದಲ್ಲಿ ನಟ ಯಶ್ ತಂದೆ-ತಾಯಿ, ಗ್ರಾಮಸ್ಥರ ನಡುವೆ ಗಲಾಟೆ

ನಿಧಿ ಸುಬ್ಬಯ್ಯ ಮನೆ ಒಳಗೆ ಮಾಲೆ ಪಟಾಕಿ ಎಸೆದಿದ್ರಂತೆ ಯಶ್​! ಬಿಗ್​ ಬಾಸ್​ ಮನೆಯಲ್ಲಿ ಹೊರ ಬಿತ್ತು ಅಚ್ಚರಿ ವಿಚಾರ

Published On - 5:08 pm, Tue, 9 March 21

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!