AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಮರಳಿದ ಯಶ್; ಏರ್‌ಪೋರ್ಟ್ ವಿಡಿಯೋ ವೈರಲ್

'ಟಾಕ್ಸಿಕ್' ಸಿನಿಮಾ ಬಿಡುಗಡೆಯಾಗಿ ಮಿಶ್ರಪ್ರತಿಕ್ರಿಯೆ ಪಡೆದ ಬಳಿಕ ರಾಕಿಂಗ್ ಸ್ಟಾರ್ ಯಶ್ ಕುಟುಂಬ ಸಮೇತ ವಿದೇಶಿ ಪ್ರವಾಸಕ್ಕೆ ತೆರಳಿದ್ದರು. ಇದೀಗ ಪ್ರವಾಸ ಮುಗಿಸಿ ಬೆಂಗಳೂರಿಗೆ ಮರಳಿರುವ ಯಶ್ ಹಾಗೂ ರಾಧಿಕಾ ಏರ್‌ಪೋರ್ಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ವಿದೇಶಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಮರಳಿದ ಯಶ್; ಏರ್‌ಪೋರ್ಟ್ ವಿಡಿಯೋ ವೈರಲ್
ಯಶ್
ರಾಜೇಶ್ ದುಗ್ಗುಮನೆ
|

Updated on: Sep 10, 2026 | 8:57 AM

Share

ಮುಖ್ಯಾಂಶಗಳು

  • ವಿದೇಶಿ ಪ್ರವಾಸ ಅಂತ್ಯ
  • ಬೆಂಗಳೂರಿಗೆ ಮರಳಿದ ರಾಕಿಂಗ್ ಸ್ಟಾರ್ ಯಶ್ ಕುಟುಂಬ
  • ಏರ್‌ಪೋರ್ಟ್‌ನಲ್ಲಿ ಸೆರೆಯಾಯ್ತು ವಿಡಿಯೋ 

ಆಗಸ್ಟ್ 26ರಂದು ರಿಲೀಸ್ ಆಗಿದ್ದ ‘ಟಾಕ್ಸಿಕ್’ ಸಿನಿಮಾ (Toxi Movie) ಮಿಶ್ರಪ್ರತಿಕ್ರಿಯೆ ಪಡೆದುಕೊಂಡ ಬಳಿಕ, ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬದೊಂದಿಗೆ ವಿದೇಶಕ್ಕೆ ಪ್ರವಾಸ ತೆರಳಿದ್ದರು. ಕೆಲ ದಿನಗಳ ಕಾಲ ಅಲ್ಲಿಯೇ ಇದ್ದ ಯಶ್, ಈಗ ತಮ್ಮ ಕುಟುಂಬ ಸಮೇತ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ವಿಡಿಯೋನ ಫ್ಯಾನ್ಸ್ ವೈರಲ್ ಮಾಡಿದ್ದಾರೆ. ನಗುಮುಖದಲ್ಲೇ ಯಶ್ ಬೆಂಗಳೂರಿಗೆ ಮರಳಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಶ್, ಪತ್ನಿ ರಾಧಿಕಾ ಪಂಡಿತ್ ಆಗಮಿಸಿದ ದೃಶ್ಯಗಳು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿವೆ. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಅಲ್ಲಿನ ಸಿಬ್ಬಂದಿ ಹಾಗೂ ಫ್ಯಾನ್ಸ್ ಸೆಲ್ಫಿಗೆ ಬೇಡಿಕೆ ಇಟ್ಟಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

‘ಟಾಕ್ಸಿಕ್’ ಸಿನಿಮಾದ ಬಗ್ಗೆ ಯಶ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರೀಕ್ಷೆ ಹುಸಿಯಾಗಿದೆ. ಈ ಬಗ್ಗೆ ಅವರಿಗೆ ಬೇಸರ ಇದೆ. ಆದರೆ, ಸೋಲನ್ನು ನೆನೆದು ಕೊರಗುತ್ತಾ ಕೂರುವವರು ಅವರಲ್ಲ. ಹೀಗಾಗಿ, ಒಂದು ಪ್ರವಾಸಕ್ಕೆ ತೆರಳಿ ಆ ಬಳಿಕ ಮುಂದಿನ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಫಲಿತಾಂಶದ ಬಗ್ಗೆ ಯಶ್ ಮೊದಲ ರಿಯಾಕ್ಷನ್ ಏನು? ಕೊನೆಗೂ ಸಿಕ್ಕಿತು ಉತ್ತರ

ಟಾಕ್ಸಿಕ್ ಗಳಿಸಿದ್ದೆಷ್ಟು?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ 15ನೇ ದಿನ ಭಾರತದಲ್ಲಿ 1,322 ಪ್ರದರ್ಶನಗಳಿಂದ ಕೇವಲ 60 ಲಕ್ಷ ಗಳಿಸಿದೆ. ಇದರೊಂದಿಗೆ ದೇಶಾದ್ಯಂತ ಚಿತ್ರದ ಒಟ್ಟು ಗ್ರ್ಯಾಸ್ ಕಲೆಕ್ಷನ್ 295.82 ಕೋಟಿಗೆ ತಲುಪಿದ್ದು, ನೆಟ್ ಗಳಿಕೆ 247.85 ಕೋಟಿಯಷ್ಟಾಗಿದೆ. ಓವರ್‌ಸೀಸ್ ಗ್ರ್ಯಾಸ್ ಕಲೆಕ್ಷನ್ 43.50 ಕೋಟಿ ರೂಪಾಯಿಗೆ ತಲುಪಿದ್ದು, ಚಿತ್ರದ ಒಟ್ಟಾರೆ ವಿಶ್ವಾದ್ಯಂತ ಗ್ರಾಸ್ ಗಳಿಕೆ 339.32 ಕೋಟಿಗೆ ತಲುಪಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!